List of Outcomes: Visit of President of Finland
March 05th, 04:36 pm
The State visit of Finland President Alexander Stubb to India resulted in several MoUs and agreements being signed. These include areas such as migration and mobility, statistics and environmental cooperation. A major decision to double the present bilateral trade between India and Finland by 2030 (capitalizing on the recently concluded India-EU FTA) was also announced.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಭಾರತ - ಇಸ್ರೇಲ್ ಜಂಟಿ ಹೇಳಿಕೆ
February 26th, 07:44 pm
ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಪ್ರಧಾನಮಂತ್ರಿ ಇದೇ 25-26ರಂದು ಇಸ್ರೇಲ್ಗೆ ಭೇಟಿ
February 24th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ 2026ರ ಫೆಬ್ರವರಿ 25-26ರಂದು ಇಸ್ರೇಲ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಇಸ್ರೇಲ್ ಗೆ ಪ್ರಧಾನಮಂತ್ರಿ ಅವರ ಎರಡನೇ ಭೇಟಿಯಾಗಲಿದೆ.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 17th, 04:00 pm
ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ
January 27th, 02:53 pm
2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 27th, 01:30 pm
ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ
January 22nd, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.22ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಕನ್ನಡ ಅವತರಣಿಕೆ
October 26th, 02:20 pm
ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,ಕ್ವಾಲಾಲಂಪುರದಲ್ಲಿ ನಡೆದ 22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
October 26th, 02:06 pm
22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.ಆಂಧ್ರಪ್ರದೇಶದ ಕರ್ನೂಲ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 16th, 03:00 pm
ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
October 16th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.2277.397 ಕೋಟಿ ರೂ. ವೆಚ್ಚದ ಡಿ ಎಸ್ ಐ ಆರ್ ನ "ಸಾಮರ್ಥ್ಯ ನಿರ್ಮಾಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ" ಯೋಜನೆಗೆ ಸಂಪುಟದ ಅನುಮೋದನೆ
September 24th, 05:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ, ಹದಿನೈದನೇ ಹಣಕಾಸು ಆಯೋಗದ 2021-22 ರಿಂದ 2025-26 ರವರೆಗಿನ ಆವರ್ತನ ಅವಧಿಗೆ ಒಟ್ಟು 2277.397 ಕೋಟಿ ರೂ.ಗಳ ಸಾಮರ್ಥ್ಯ ನಿರ್ಮಾಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆ/ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಡಿ ಎಸ್ ಐ ಆರ್ / ಸಿ ಎಸ್ ಐ ಆರ್ ) ಯೋಜನೆಗೆ ಅನುಮೋದನೆ ನೀಡಿದೆ.