ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 22nd, 11:30 am

ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.