ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ

June 14th, 08:37 pm

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.

ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 12th, 06:45 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು

January 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.

ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 11th, 02:45 pm

2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.

ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

January 11th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.

ಸಂಸತ್ತಿನಲ್ಲಿ ಶಾಂತಿ ಮಸೂದೆ ಅಂಗೀಕಾರ ಸ್ವಾಗತಿಸಿದ ಪ್ರಧಾನಮಂತ್ರಿ

December 18th, 09:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸಂಸತ್ತಿನ ಎರಡೂ ಸದನಗಳಲ್ಲಿ ಶಾಂತಿ ಮಸೂದೆ ಅಂಗೀಕಾರವನ್ನು ಸ್ವಾಗತಿಸಿದ್ದಾರೆ ಮತ್ತು ಇದು ಭಾರತದ ತಂತ್ರಜ್ಞಾನ ಆಯಾಮಕ್ಕೆ ಒಂದು ಪರಿವರ್ತನೆಯ ಕ್ಷಣ ಎಂದು ಬಣ್ಣಿಸಿದ್ದಾರೆ.