The commissioning of INS Agray, INS Dunagiri and INS Sanshodhak is a reflection of India's increasing self-reliance: PM Modi in Kolkata
June 21st, 12:51 pm
PM Modi has commissioned three indigenously designed and built naval ships - INS Dunagiri, INS Sanshodhak and INS Agray in Kolkata, West Bengal. Speaking on the occasion, he said the event represented an important milestone in the journey towards an Aatmanirbhar Bharat, adding that around 40 indigenously built warships and submarines have been inducted into the Indian Navy over the past few years.PM Modi commissions three indigenously designed and built naval ships – INS Dunagiri, INS Sanshodhak and INS Agray
June 21st, 12:50 pm
PM Modi has commissioned three indigenously designed and built naval ships - INS Dunagiri, INS Sanshodhak and INS Agray in Kolkata, West Bengal. Speaking on the occasion, he said the event represented an important milestone in the journey towards an Aatmanirbhar Bharat, adding that around 40 indigenously built warships and submarines have been inducted into the Indian Navy over the past few years.Cabinet approves two more semiconductor manufacturing units with cumulative investment of more than Rs. 3,900 crore
May 05th, 06:54 pm
The Union Cabinet, chaired by PM Modi, has approved two more semiconductor projects under the India Semiconductor Mission (ISM), including the country’s first commercial Mini/Micro-LED display facility based on GaN technology and a semiconductor packaging unit. The projects, to be set up with an investment of around ₹3,936 crore, are expected to boost employment opportunities.ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್ನಲ್ಲಿ ಪಾಲುದಾರಿಕೆಗಾಗಿ ಭಾರತ-ಆರ್ಒಕೆ ಸಮಗ್ರ ಚೌಕಟ್ಟು
April 20th, 10:51 pm
ಏಪ್ರಿಲ್ 20, 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೊರಿಯಾ ಗಣರಾಜ್ಯದ (ROK) ಗೌರವಾನ್ವಿತ ಶ್ರೀ ಲೀ ಜೇ ಮ್ಯುಂಗ್ ಅವರ ನಡುವಿನ ಸಭೆಯಲ್ಲಿ, ಹಡಗು ನಿರ್ಮಾಣ, ಸಾಗಣೆ ಮತ್ತು ಕಡಲ ಲಾಜಿಸ್ಟಿಕ್ಸ್ನಲ್ಲಿ ಪಾಲುದಾರಿಕೆಗಾಗಿ ತಮ್ಮ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ಸಹಕಾರದ ಕುರಿತು ಎರಡೂ ಕಡೆಯವರು ಫಲಪ್ರದ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ
April 20th, 03:57 pm
ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ
April 01st, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.ಸೌದಿ ಅರೇಬಿಯಾದ ಯುವರಾಜಕುಮಾರ ಹಾಗೂ ಪ್ರಧಾನಮಂತ್ರಿ ಗೌರವಾನ್ವಿತ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 28th, 09:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಯುವರಾಜರು ಹಾಗೂ ಪ್ರಧಾನಮಂತ್ರಿ ಗೌರವಾನ್ವಿತ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಚರ್ಚಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಶ್ರೀಲಂಕಾ ಅಧ್ಯಕ್ಷರ ದೂರವಾಣಿ ಸಂಭಾಷಣೆ
March 24th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಅಧ್ಯಕ್ಷರಾದ ಮಾನ್ಯ ಅನುರ ಕುಮಾರ ದಿಸ್ಸಾನಾಯಕ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 24th, 02:05 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು
March 24th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 23rd, 08:30 pm
ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ
March 23rd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು
March 22nd, 09:06 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬಹ್ರೇನ್ ರಾಜನೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ
March 20th, 07:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹ್ರೇನ್ ದೇಶದ ಘನತೆವೆತ್ತ ದೊರೆಯಾದ ಮಹಾರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಫಲಪ್ರದವಾದ ಮಾತುಕತೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಪ್ರಾದೇಶಿಕ ಭದ್ರತಾ ವಿಚಾರಗಳ ಕುರಿತು ಚರ್ಚೆ ನಡೆಸಿದರು.ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 29th, 04:09 pm
ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು
October 29th, 04:08 pm
ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್ ಅಪ್ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.ಗುಜರಾತ್ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.