ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು
July 22nd, 07:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ, ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
July 15th, 12:58 pm
ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಜ್ಞಾನ, ಕೌಶಲ್ಯ ಮತ್ತು ಆರೋಗ್ಯಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
July 15th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ, ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮತ್ತು ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ರಾಷ್ಟ್ರದ ಯುವಕರು ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಒತ್ತಿ ಹೇಳಿದರು. ಈ ಗುಣಗಳು ವ್ಯಕ್ತಿಗಳನ್ನು ಸಶಕ್ತಗೊಳಿಸುವುದಲ್ಲದೆ ರಾಷ್ಟ್ರ ನಿರ್ಮಾಣಕ್ಕೂ ಗಮನಾರ್ಹ ಕೊಡುಗೆ ನೀಡುತ್ತವೆ.ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 03:22 pm
ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ಫಲಿತಾಂಶಗಳ ಪಟ್ಟಿ
July 09th, 12:34 pm
ಭದ್ರತೆಯ ಮೇಲಿನ ಅಸ್ತಿತ್ವದಲ್ಲಿರುವ ಜಂಟಿ ಘೋಷಣೆಯನ್ನು (2009) ನವೀಕರಿಸುತ್ತದೆ. ಇದು ಪಡೆಗಳ ಪರಸ್ಪರ ಕಾರ್ಯಾಚರಣೆ, ಸಾಮರ್ಥ್ಯ ನಿರ್ಮಾಣ, ಕಡಲ ವಲಯ, ರಕ್ಷಣಾ ಕೈಗಾರಿಕಾ ಸಹಯೋಗ, ಸೈಬರ್ ಭದ್ರತೆ ಮತ್ತು ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಮತ್ತು UNCLOS, ಆಸಿಯಾನ್, ಪಿಐಎಫ್, ಐ ಒ ಆರ್ ಎ ಗಳಲ್ಲಿ ಏಕೀಕೃತ ವಿಧಾನವನ್ನು ಸಹಕಾರದ ಕ್ಷೇತ್ರಗಳಾಗಿ ಗುರುತಿಸುತ್ತದೆ.ಗುಜರಾತ್ನ ಸನಂದ್ನಲ್ಲಿ ಸಿಜಿ ಸೆಮಿ ಒಎಸ್ಎಟಿ ಸೌಲಭ್ಯ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 05:15 pm
2024ರಲ್ಲಿ ಈ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ನನಗೆ ಸಿಕ್ಕಿತ್ತು. 2025 ಆಗಸ್ಟ್ ಹೊತ್ತಿಗೆ ಚಿಪ್ ಪರೀಕ್ಷಾ ಕಾರ್ಯ ಇಲ್ಲಿ ಪ್ರಾರಂಭವಾಯಿತು, ಇಂದು ಈ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಶಂಕುಸ್ಥಾಪನೆಯಿಂದ ಹಿಡಿದು ಉತ್ಪಾದನೆಯ ತನಕದ ಪ್ರಯಾಣವು ನಿಸ್ಸಂದೇಹವಾಗಿ ಅನೇಕ ಸಹೋದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಸುಬ್ಬಯ್ಯ ಜಿ ಅವರಂತಹ ನಾಯಕರ ಫಲವಾಗಿದೆ. ವೇದಿಕೆಗೆ ಬರುವ ಮೊದಲು, ಈ ಯೋಜನೆಗೆ ಸಂಬಂಧಿಸಿದ ಅನೇಕರೊಂದಿಗೆ ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿತು. ಈ ಕ್ಯಾಂಪಸ್ನಲ್ಲಿ ಒಂದು ಮಿನಿ ಭಾರತ ವಾಸಿಸುತ್ತಿದೆ ಎಂದು ಭಾಸವಾಯಿತು - ಎಲ್ಲಾ ಭಾಷೆ, ಉಡುಪು ಮತ್ತು ಪಾಕ ಪದ್ಧತಿಯ ಜನರು ಇಲ್ಲಿದ್ದಾರೆ. ನನ್ನ ಪ್ರದರ್ಶನ ಭೇಟಿಯ ಸಮಯದಲ್ಲಿ ನಾನು ಅನೇಕ ಯುವಕ-ಯುವತಿಯರೊಂದಿಗೆ ಮಾತನಾಡಿದೆ. ನಾನು ಹೆಮ್ಮೆಯಿಂದ ಉಲ್ಲೇಖಿಸಬೇಕಾದ ಒಂದು ವಿಷಯವೆಂದರೆ, ಅವರ ಆತ್ಮವಿಶ್ವಾಸದ ಮಟ್ಟ. ಅವರು ಮಾತನಾಡಿದ ದೃಢನಿಶ್ಚಯ, ತಂತ್ರಜ್ಞಾನದ ಮೇಲಿನ ಅವರ ನಂಬಿಕೆ – ಇದರಿಂದ ನಾನು ನಿಜವಾಗಿಯೂ ಪ್ರಭಾವಿತನಾದೆ.ಗುಜರಾತ್ನ ಸನಂದ್ನಲ್ಲಿ ಸಿಜಿ ಸೆಮಿ ಔಟ್ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (ಒಎಸ್ಎಟಿ) ಸೌಲಭ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
July 04th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಸನಂದ್ನಲ್ಲಿ CG ಸೆಮಿ ಔಟ್ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯವನ್ನು ಉದ್ಘಾಟಿಸಿದರು. ಈ ಸಂದರ್ಭದ ಮಹತ್ವವನ್ನು ವಿವರಿಸಿದ, ಪ್ರಧಾನಮಂತ್ರಿಯವರು ಈ ಉಡಾವಣೆಯನ್ನು ರಾಷ್ಟ್ರವು ತನ್ನ ಗುರಿಗಳಿಗೆ ಹೊಂದಿರುವ ಅಚಲ ಬದ್ಧತೆಗೆ ಸಾಕ್ಷಿಯಾಗಿ ರೂಪಿಸಿದರು. ದೇಶವು ತನ್ನ ಬಲವಾದ ನಿರ್ಣಯಗಳನ್ನು ಹಿಂಜರಿಕೆಯಿಲ್ಲದೆ ನಿರಂತರವಾಗಿ ಸ್ಪಷ್ಟ ವಾಸ್ತವಗಳಾಗಿ ಪರಿವರ್ತಿಸುತ್ತದೆ ಎಂದು ಅವರು ಹೇಳಿದರು. ಭಾರತವು ಏನು ಮಾಡಲು ನಿರ್ಧರಿಸಿದರೂ ಅದು ದೃಢವಾಗಿ ಸಾಧಿಸುತ್ತದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಪುರಾವೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಜುಲೈ 4 ರಂದು ಪ್ರಧಾನಮಂತ್ರಿ ಅವರಿಂದ ರಾಜಸ್ಥಾನ ಮತ್ತು ಗುಜರಾತ್ ಭೇಟಿ
July 03rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 4, 2026 ರಂದು ರಾಜಸ್ಥಾನ ಮತ್ತು ಗುಜರಾತಿಗೆ ಭೇಟಿ ನೀಡಲಿದ್ದಾರೆ. ಸುಮಾರು ಬೆಳಿಗ್ಗೆ 10:45ಕ್ಕೆ, ಪ್ರಧಾನಮಂತ್ರಿ ಅವರು ಜೋಧ್ ಪುರ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಜೋಧ್ಪುರದಲ್ಲಿ ಮಾರ್ಪಡಿಸಿದ ಉಡಾನ್ ('ಮೋಡಿಫೈಡ್ ಉಡಾನ್') ಯೋಜನೆಗೆ ಚಾಲನೆ ನೀಡಲಿದ್ದಾರೆ. ತದನಂತರ, ಮಧ್ಯಾಹ್ನ ಸುಮಾರು 12:15ಕ್ಕೆ ಅವರು ಬಲೋತ್ರಾಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಸುಮಾರು ₹1.06 ಲಕ್ಷ ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಲಿದ್ದಾರೆ, ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಜಪಾನ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 02nd, 01:30 pm
ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್ನಿಂದ ಹಿಡಿದು ಎಲೆಕ್ಟ್ರಾನಿಕ್ಸ್ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.ಪಹಾಡ್ಪುರ ಗ್ರಾಮದ ಕೌಶಲ್ಯ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ, ಕೌಶಲ್ಯ ಅಭಿವೃದ್ಧಿಯ ಮೇಲಿನ ಗಮನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
June 20th, 08:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್ಪುರ ಗ್ರಾಮದ ಕೌಶಲ್ಯ ಕೇಂದ್ರಕ್ಕೆ ಭೇಟಿ ನೀಡಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಸಿ.ಎಂ.ಎ ಸಿ.ಜಿ.ಎಂ ಅಧ್ಯಕ್ಷರು ಮತ್ತು ಸಿ.ಇ.ಒ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ ಮತ್ತು ಸಹಯೋಗದ ಅವಕಾಶಗಳ ಕುರಿತು ಚರ್ಚೆ ನಡೆಸಿದ ಪ್ರಧಾನಮಂತ್ರಿ
June 18th, 06:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿ.ಎಂ.ಎ ಸಿ.ಜಿ.ಎಂ (CMA CGM) ನ ಅಧ್ಯಕ್ಷರಾದ ಶ್ರೀ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ, ಜಾಗತಿಕ ಹಡಗು ಪ್ರವೃತ್ತಿಗಳು ಮತ್ತು ಭಾರತದ ವೇಗವಾಗಿ ಬೆಳೆಯುತ್ತಿರುವ ಕಡಲ ವಲಯದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಫಲಪ್ರದ ಚರ್ಚೆ ನಡೆಸಿದರು.ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ
June 18th, 05:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು
June 17th, 06:07 pm
ಫ್ರಾನ್ಸ್ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
June 14th, 08:37 pm
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಗುಜರಾತ್ನ ಸೂರತ್ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.