ಸುವ್ಯವಸ್ಥಿತ ಮಾನದಂಡಗಳು ಮಾನವರ ನಡವಳಿಕೆಗೆ ಮಾರ್ಗದರ್ಶನ ನೀಡಬೇಕೆಂದು ಬಲವಾಗಿ ಪ್ರತಿಪಾದಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

May 20th, 10:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ, ಅದು ನೀತಿವಂತ ನಡವಳಿಕೆಯು ಒಬ್ಬ ವ್ಯಕ್ತಿಯನ್ನು ಮಾತ್ರವಲ್ಲದೆ ಇಡೀ ಸಮಾಜವನ್ನು ಬೆಳಗಿಸುವ ದೀಪದಂತೆ ಎಂದು ಹೇಳುತ್ತದೆ. ಈ ಆದರ್ಶವನ್ನು ಅಳವಡಿಸಿಕೊಂಡು ನಮ್ಮ ದೇಶದ ಜನರು ಇಂದು ಸಂಪೂರ್ಣ ಸಂಯಮ, ಸಾಮರ್ಥ್ಯ ಮತ್ತು ಕರ್ತವ್ಯ ನಿಷ್ಠೆಯಿಂದ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಅವರಿಗೆ ಮಾಡಿದ ಅವಮಾನ ಮತ್ತು ಸಂತಾಲ್ ಸಂಸ್ಕೃತಿಗೆ ಅಗೌರವ ವ್ಯಕ್ತಪಡಿಸಿದಕ್ಕೆ ಪ್ರಧಾನಮಂತ್ರಿ ಖಂಡನೆ

March 07th, 08:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪತಿ ಅವರಿಗೆ ಅಗೌರವ ತೋರುವ ಘಟನೆ ಮತ್ತು ಪಶ್ಚಿಮ ಬಂಗಾಳ ಸರ್ಕಾರವು ಸಂತಾಲ್ ಸಂಸ್ಕೃತಿಯನ್ನು ಸಾಂದರ್ಭಿಕವಾಗಿ ನಡೆಸಿಕೊಂಡಿರುವ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.

ಜೋರ್ಡಾನ್ ಮಹಾರಾಜರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

March 02nd, 09:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ಮಹಾ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶ್ರೀಮತಿ ಪ್ರಮಿಳಾ ತಾಯಿ ಮೆಢೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

July 31st, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರ ಸೇವಿಕಾ ಸಮಿತಿಯ ಪ್ರಮುಖ ಸಂಚಾಲಿಕಾ ಶ್ರೀಮತಿ ಪ್ರಮಿಳಾ ತಾಯಿ ಮೆಢೆ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಅವರ ಅನುಕರಣೀಯ ಜೀವನವು ಮುಂಬರುವ ಪೀಳಿಗೆಗೆ, ವಿಶೇಷವಾಗಿ ಸಮಗ್ರ ಸಾಮಾಜಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದ ಅನ್ವೇಷಣೆಯಲ್ಲಿ ಸ್ಫೂರ್ತಿಯ ದಾರಿದೀಪವಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು.