ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 12th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರನ್ನು ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನುಭವಿ ನಾಯಕ ಎಂದು ಬಣ್ಣಿಸಿದ್ದಾರೆ.

ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

May 07th, 12:00 pm

ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,

ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 07th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!

17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

April 21st, 11:00 am

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್‌ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ

April 17th, 08:05 pm

ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.

ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 13th, 04:30 pm

ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

PM addresses program marking nationwide outreach for credit support to disadvantaged sections

March 13th, 04:00 pm

Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.

Free Foodgrains for 81.35 crore beneficiaries for five years: Cabinet Decision

November 29th, 02:26 pm

The Cabinet led by Prime Minister has decided that the Central government will provide free food grains to about 81.35 crore beneficiaries under the Pradhan Mantri Garib Kalyan Anna Yojana (PMGKAY) for a period of five years with effect from 1st January, 2024.

ರಾಷ್ಟ್ರವ್ಯಾಪಿ ಮೆಗಾ ಸೈಕ್ಲೋಥಾನ್ ನಲ್ಲಿ ಭಾಗವಹಿಸಿದವರಿಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ

February 15th, 10:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರವ್ಯಾಪಿ ಮೆಗಾ ಸೈಕ್ಲೋಥಾನ್ ಕೂಟದಲ್ಲಿ ಭಾಗವಹಿಸಿದ ಮತ್ತು ಆರೋಗ್ಯಕರ ಜೀವನದ ಬಗ್ಗೆ ಜಾಗೃತಿ ಮೂಡಿಸಿದ ಎಲ್ಲರನ್ನು ಅಭಿನಂದಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ

February 09th, 02:15 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ

February 09th, 02:00 pm

ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.

​​​​​​​90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ

October 18th, 01:40 pm

90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

October 18th, 01:35 pm

ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.

ಕೆನಡಾದಲ್ಲಿ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟಿಪ್ಪಣಿಗಳ ಕನ್ನಡ ಅನುವಾದ

May 02nd, 08:33 am

ನಿಮ್ಮೆಲ್ಲರಿಗೂ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗುಜರಾತ್ ದಿನದ ಶುಭಾಶಯಗಳು. ಕೆನಡಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸುವಲ್ಲಿ ಒಂಟಾರಿಯೊ ಮೂಲದ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರವು ನಿರ್ವಹಿಸಿದ ಪಾತ್ರದ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಕೆನಡಾಕ್ಕೆ ನಾನು ನೀಡಿದ ಭೇಟಿಗಳಲ್ಲಿ ನಾನು ಇದನ್ನು ಅನುಭವಿಸಿದ್ದೇನೆ, ನಿಮ್ಮ ಈ ಪ್ರಯತ್ನಗಳಲ್ಲಿ ನೀವು ಎಷ್ಟು ಸಫಲರಾಗಿದ್ದೀರಿ ಮತ್ತು ನಿಮ್ಮ ಬಗ್ಗೆ ನೀವು ಹೇಗೆ ಸಕಾರಾತ್ಮಕ ಪ್ರಭಾವ ಬೀರಿದ್ದೀರಿ ಎಂಬುದನ್ನು ನಾನು ನೋಡಿದ್ದೇನೆ.

ಕೆನಡಾದ ಒಂಟಾರಿಯೊದ ಸನಾತನ ಸಾಂಸ್ಕೃತಿ ಕೇಂದ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 01st, 09:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದ ಒಂಟಾರಿಯೊದ ಮಾರ್ಕ್ ಹಮ್ ನಲ್ಲಿನ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ(ಎಸ್ಎಂಸಿಸಿ)ದಲ್ಲಿ ಸರ್ದಾರ್ ಪಟೇಲ್ ಪ್ರತಿಮೆ ಅನಾವರಣ ಸಂದರ್ಭವನ್ನುದ್ದೇಶಿಸಿ ವಿಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.

ರಾಷ್ಟ್ರೀಯ ಏಕತಾ ದಿನದಂದು ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

October 31st, 09:41 am

ರಾಷ್ಟ್ರೀಯ ಏಕತಾ ದಿನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು!. ಇಂದು ದೇಶವು ರಾಷ್ಟ್ರೀಯ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತಿದೆ. ಪಟೇಲ್ ಅವರು “ಏಕ್ ಭಾರತ್, ಶ್ರೇಷ್ಠ ಭಾರತ್” ಗಾಗಿ ತಮ್ಮ ಬದುಕಿನ ಪ್ರತೀ ಕ್ಷಣವನ್ನೂ ಮುಡಿಪಾಗಿಟ್ಟಿದ್ದರು.

ರಾಷ್ಟ್ರೀಯ ಏಕತಾ ದಿನದಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಏಕತಾ ದಿನದ ತಮ್ಮ ಭಾಷಣದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ. ‘ಏಕ ಭಾರತ್ ಶ್ರೇಷ್ಠ ಭಾರತ್’ ಆದರ್ಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಸರ್ದಾರ್ ಪಟೇಲ್ ಅವರಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ಕೇವಲ ಐತಿಹಾಸಿಕ ವ್ಯಕ್ತಿಯಲ್ಲ, ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ನೆಲೆಸಿದ್ದಾರೆ ಮತ್ತು ಅವರ ಏಕತೆಯ ಸಂದೇಶವನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಜನರಲ್ಲಿ ಒಗ್ಗಟ್ಟಿನ ಬಿರುಕಿಲ್ಲದ ಏಕತೆಯ ಭಾವನೆಯ ನೈಜ ಸಂಕೇತವಾಗಿದ್ದಾರೆ. ದೇಶದ ಪ್ರತಿಯೊಂದು ಮೂಲೆ ಮೂಲೆಯಲ್ಲೂ ರಾಷ್ಟ್ರೀಯ ಏಕತಾ ಪರೇಡ್ ಗಳು ನಡೆಯುತ್ತಿವೆ ಮತ್ತು ಏಕತಾ ಪ್ರತಿಮೆಯ ಜಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅದೇ ಭಾವನೆ ಪ್ರತಿಫಲನಗೊಳ್ಳುತ್ತಿದೆ ಎಂದು ಹೇಳಿದರು.

ಶಾಂಘೈ ಸಹಕಾರ ಸಂಘಟನೆ ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆಯಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡ ಪ್ರಧಾನಮಂತ್ರಿ

September 17th, 05:21 pm

ಶಾಂಘೈ ಸಹಕಾರ ಸಂಘಟನೆ [ಸಿ.ಎಸ್.ಒ] ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆ ಮತ್ತು ಆಪ್ಘಾನಿಸ್ತಾನ ಕುರಿತ ಜಂಟಿ ಎಸ್.ಸಿ.ಒ-ಸಿ.ಎಸ್.ಟಿ.ಒ ಔಟ್ ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಸಂದೇಶದ ಮೂಲಕ ಪಾಲ್ಗೊಂಡಿದ್ದರು.

ಆಪ್ಘಾನಿಸ್ತಾನ ಕುರಿತ ಎಸ್‌ ಸಿ ಒ –ಸಿ ಎಸ್ ಟಿ ಒ ಔಟ್‌ರೀಚ್ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣ

September 17th, 05:01 pm

ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ಎಸ್‌ಸಿಒ ಮತ್ತು ಸಿ.ಎಸ್.ಟಿ. ನಡುವೆ ವಿಶೇಷ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅಧ್ಯಕ್ಷ ರೆಹಮಾನ್ ಅವರಿಗೆ ಧನ್ಯವಾದ ಹೇಳುವ ಮೂಲಕ ನನ್ನ ಮಾತು ಆರಂಭಿಸುತ್ತೇನೆ.