ಗುಜರಾತ್ನಲ್ಲಿ ಆಯೋಜಿಸಿದ್ದ ಸೋಮನಾಥ್ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 11th, 12:00 pm
ಗುಜರಾತ್ನ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಶಕ್ತಿಶಾಲಿ ಉಪಮುಖ್ಯಮಂತ್ರಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರಾದ ಜಿತುಭಾಯಿ ವಾಘಾನಿ, ಅರ್ಜುನ್ಭಾಯಿ ಮೋಧ್ವಾಡಿಯಾ, ಡಾ. ಪ್ರದ್ಯುಮ್ನ ವಾಜ, ಕೌಶಿಕ್ಭಾಯಿ ವೆಕಾರಿಯಾ, ಸಂಸತ್ ಸದಸ್ಯ ರಾಜೇಶ್ಭಾಯಿ, ಇಲ್ಲಿರುವ ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ. ಇಂದು ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೂ ಸಹ ನಾನು ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ - ಸೋಮನಾಥನಿಗೆ ವಿಜಯವಾಗಲಿ.ಗುಜರಾತ್ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 11th, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಮಯ ಅಸಾಧಾರಣವಾದುದು, ಈ ವಾತಾವರಣ ಅಸಾಧಾರಣವಾದುದು ಮತ್ತು ಈ ಆಚರಣೆಯೂ ಅಸಾಧಾರಣವಾದುದು ಎಂದು ಅವರು ಬಣ್ಣಿಸಿದರು. ಒಂದು ಕಡೆ ಸಾಕ್ಷಾತ್ ಮಹಾದೇವನಿದ್ದರೆ, ಮತ್ತೊಂದೆಡೆ ಸಮುದ್ರದ ಬೃಹತ್ ಅಲೆಗಳು, ಸೂರ್ಯನ ಕಿರಣಗಳು, ಮಂತ್ರಘೋಷಗಳ ಅನುರಣನ ಮತ್ತು ಭಕ್ತಿಯ ಉಲ್ಬಣವಿದೆ ಎಂದು ಅವರು ವಿವರಿಸಿದರು. ಈ ದೈವಿಕ ಪರಿಸರದಲ್ಲಿ ಸೋಮನಾಥನ ಭಕ್ತರ ಉಪಸ್ಥಿತಿಯು ಈ ಸಂದರ್ಭವನ್ನು ಮತ್ತಷ್ಟು ಭವ್ಯ ಹಾಗೂ ಪವಿತ್ರವಾಗಿಸಿದೆ ಎಂದು ಅವರು ತಿಳಿಸಿದರು. ಸೋಮನಾಥ ದೇವಾಲಯ ಟ್ರಸ್ಟ್ನ ಅಧ್ಯಕ್ಷರಾಗಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ತಮ್ಮ ಮಹಾನ್ ಸೌಭಾಗ್ಯ ಎಂದು ಶ್ರೀ ಮೋದಿ ಹಂಚಿಕೊಂಡರು. ಕಳೆದ 72 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿರುವ ಓಂಕಾರ ಜಪ ಮತ್ತು ಮಂತ್ರಘೋಷಗಳ ಪಠಣವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾವಿರ ಡ್ರೋನ್ ಗಳು ಮತ್ತು ವೇದ ಪಾಠಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸೋಮನಾಥದ ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಪ್ರಸ್ತುತಪಡಿಸಿದ್ದನ್ನು ಅವರು ಉಲ್ಲೇಖಿಸಿದರು. ಅಲ್ಲದೆ, ಇಂದು 108 ಕುದುರೆಗಳನ್ನೊಳಗೊಂಡ 'ಶೌರ್ಯ ಯಾತ್ರೆ' ದೇವಾಲಯವನ್ನು ತಲುಪಿದೆ ಎಂದು ತಿಳಿಸಿದರು. ಮಂತ್ರಗಳು ಮತ್ತು ಭಜನೆಗಳ ಈ ಮನಮೋಹಕ ಪ್ರಸ್ತುತಿಯು ಪದಗಳಿಗೆ ನಿಲುಕದ್ದು, ಈ ಅನುಭವವನ್ನು ಕಾಲ ಮಾತ್ರವೇ ಸೆರೆಹಿಡಿಯಲು ಸಾಧ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಂಭ್ರಮವು ಕೇವಲ ಒಂದು ಉತ್ಸವವಲ್ಲ; ಇದು ಸ್ವಾಭಿಮಾನ, ಗೌರವ, ಘನತೆ, ಜ್ಞಾನ, ಭವ್ಯತೆ, ಪರಂಪರೆ, ಆಧ್ಯಾತ್ಮಿಕತೆ, ಸಾಕ್ಷಾತ್ಕಾರ, ಆನಂದ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಮಿಗಿಲಾಗಿ, ಈ ಕಾರ್ಯಕ್ರಮವು ಭಗವಾನ್ ಮಹಾದೇವನ ಆಶೀರ್ವಾದವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.ಸೋಮನಾಥ ದೇಗುಲ ಭೇಟಿಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
January 10th, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.ಪ್ರಧಾನಮಂತ್ರಿ ಜನವರಿ 10-11 ರಂದು ಗುಜರಾತ್ನ ಸೋಮನಾಥಕ್ಕೆ ಭೇಟಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗಿ
January 09th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10-11 ರಂದು ಗುಜರಾತ್ನ ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲಿದ್ದಾರೆ. ಜನವರಿ 10 ರಂದು ರಾತ್ರಿ 8 ಗಂಟೆಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಸೋಮನಾಥ ದೇವಾಲಯದಲ್ಲಿ ಡ್ರೋಣ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.ಪ್ರಧಾನಮಂತ್ರಿ ಜನವರಿ 10-12 ರವರೆಗೆ ಗುಜರಾತ್ ಭೇಟಿ
January 09th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10 ರಿಂದ 12 ರವರೆಗೆ ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಜನವರಿ 10 ರಂದು ಸಂಜೆ ಸೋಮನಾಥಕ್ಕೆ ಆಗಮಿಸಲಿದ್ದಾರೆ ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಅವರು ಸೋಮನಾಥ ದೇವಾಲಯದಲ್ಲಿ ಡ್ರೋಣ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.ದೇಶದ ಸಾಮೂಹಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಸೋಮನಾಥ ದೇಗುಲದ ಕಾಲಾತೀತ ಪಾತ್ರವನ್ನು ಸುಭಾಷಿತ ಮೂಲಕ ಪ್ರಧಾನಮಂತ್ರಿ ಅವರು ಸಾರಿದ್ದಾರೆ
January 09th, 08:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪವಿತ್ರ ಸೋಮನಾಥ ದೇವರಿಗೆ ನಮನ ಸಲ್ಲಿಸಿದ್ದಾರೆ. ರಾಷ್ಟ್ರದ ಸಾಮೂಹಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ದೇವಾಲಯದ ಕಾಲಾತೀತ ಪಾತ್ರವನ್ನು ಅವರು ಸುಭಾಷಿತದ ಮೂಲಕ ಸಾರಿದ್ದಾರೆ.ಸೋಮನಾಥ ಸ್ವಾಭಿಮಾನ್ ಪರ್ವ್ ಆರಂಭದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
January 08th, 10:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ಸ್ವಾಭಿಮಾನ್ ಪರ್ವ ಆರಂಭದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಹಸ್ರಮಾನಗಳಿಗೂ ಹೆಚ್ಚು ಕಾಲದಿಂದ ಸೋಮನಾಥವನ್ನು ಲಕ್ಷಾಂತರ ಜನರ ಹೃದಯದಲ್ಲಿ ಜೀವಂತವಾಗಿರಿಸಿರುವ ಕಾಲಾತೀತ ನಾಗರಿಕತೆಯ ಸ್ಫೂರ್ತಿಯನ್ನು ಅವರು ಸ್ಮರಿಸಿದರು.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ಗುಜರಾತ್ನ ದಾಹೋದ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.ಮಹಾಕುಂಭ ಮೇಳ ಮುಕ್ತಾಯದ ಬಳಿಕ ಗುಜರಾತ್ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
March 02nd, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ನಲ್ಲಿ ಮಹಾಕುಂಭ ಮುಕ್ತಾಯದ ನಂತರ ಗುಜರಾತ್ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದರು. ದೇವಾಲಯವು ನಮ್ಮ ಸಂಸ್ಕೃತಿಯ ಕಾಲಾತೀತ ಪರಂಪರೆ ಮತ್ತು ಧೈರ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದರು.ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 19th, 11:00 am
ಎಲ್ಲಾ ಸಂತರು ತಮ್ಮ ಸ್ಥಾನಗಳನ್ನು ತೆಗೆದುಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಉತ್ತರ ಪ್ರದೇಶದ ಶಕ್ತಿಯುತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕಲ್ಕಿ ಧಾಮದ ಮುಖ್ಯಸ್ಥ ಪೂಜ್ಯ ಶ್ರೀ ಅವಧೇಶಾನಂದ ಗಿರಿ ಜೀ, ಆಚಾರ್ಯ ಪ್ರಮೋದ್ ಕೃಷ್ಣಂ ಜೀ, ಪೂಜ್ಯ ಸ್ವಾಮಿ ಕೈಲಾಸಾನಂದ ಬ್ರಹ್ಮಚಾರಿ ಜೀ, ಪೂಜ್ಯ ಸದ್ಗುರು ಶ್ರೀ ಋತೇಶ್ವರ್ ಜೀ, ಭಾರತದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗೌರವಾನ್ವಿತ ಸಂತರು ಮತ್ತು ನನ್ನ ಪ್ರೀತಿಯ ಶ್ರದ್ಧಾವಂತ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ
February 19th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ಮಾಡಿದರು. ಪ್ರಧಾನಮಂತ್ರಿಯವರು ಶ್ರೀ ಕಲ್ಕಿ ಧಾಮ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮವನ್ನು ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸುತ್ತಿರುವರು.Healthcare services have improved under the 'double engine' government: PM Modi in Botad
November 20th, 11:04 am
PM Modi addressed his last rally of the day at Gujarat’s Botad. He said, “The people of Botad and the people of entire Saurashtra are saying that in this election the opposition will again bite the dust and lose the Gujarat assembly election. BJP government is going to be formed once again in Gujarat. The relation between Gujarat and BJP is unbreakable. Because this relation is of development and trust. I have relation with Botad since my Jansangh days.”Our government is proud and fortunate to have transformed Mazdar village into Kagdham: PM Modi in Amreli
November 20th, 11:03 am
Continuing his election campaigning spree, PM Modi addressed his third rally in Gujarat’s Amreli. He appealed to the people of Amreli to make the ruling Bharatiya Janata Party (BJP) victorious in all the polling booths. The PM highlighted the transformed picture of Gujarat’s agriculture sector under the BJP government. He said, “Today, the agricultural growth rate in Gujarat has remained in double digit for years. We are ensuring that the farmers get sufficient urea, cheap urea. The government buys a sack of urea from abroad, it costs Rs 2,000. The government is giving the same sack worth Rs 2,000 to the farmers for less than Rs 270.”Gujarat, today, is at the forefront of development, investment, manufacturing and exports: PM Modi in Dhoraji
November 20th, 11:02 am
Addressing his second rally in Dhoraji, Gujarat, PM Modi started his address by highlighting that Gujarat, today, is at the forefront of development, investment, manufacturing and exports; and the credit goes out to the hard-working people of Gujarat. PM Modi further addressed the people on how Gujarat used to suffer from water scarcity for decades and the Congress-led government ignored these issues altogether. PM Modi added that the work done by the BJP government to solve the water crisis in Gujarat has brought prosperity to the state today.Congress has no interest to restore the cultural heritage of the country: PM Modi in Veraval
November 20th, 11:01 am
Ahead of the first phase of Gujarat’s legislative election, Prime Minister Narendra Modi today addressed a public meeting at Veraval, Gujarat. PM Modi started his address by highlighting how people used to underestimate Gujarat because of its condition in the early days and how today Gujarat is reaching new highs.ಪ್ರಧಾನಿ ಮೋದಿ ಗುಜರಾತ್ನ ವೆರಾವಲ್, ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
November 20th, 11:00 am
ಗುಜರಾತಿನ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ವೆರಾವಲ್, ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಆರಂಭಿಕ ದಿನಗಳಲ್ಲಿ ಗುಜರಾತ್ ಅನ್ನು ಅದರ ಸ್ಥಿತಿಯ ಕಾರಣದಿಂದ ಜನರು ಹೇಗೆ ಕಡಿಮೆ ಅಂದಾಜು ಮಾಡುತ್ತಿದ್ದರು ಮತ್ತು ಇಂದು ಗುಜರಾತ್ ಹೇಗೆ ಹೊಸ ಎತ್ತರವನ್ನು ತಲುಪುತ್ತಿದೆ ಎಂಬುದನ್ನು ಎತ್ತಿ ತೋರಿಸಿದರು. ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಯನ್ನು ಗೆಲ್ಲಿಸುವಂತೆ ಪ್ರಧಾನಿ ಮೋದಿ ಗುಜರಾತ್ ಜನತೆಗೆ ಮನವಿ ಮಾಡಿದರು.ಗುಜರಾತ್ ನ ಜಂಬೂಘೋಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
November 01st, 01:12 pm
ಇಂದು ಗುಜರಾತ್ ಮತ್ತು ಇಡೀ ದೇಶದ ಬುಡಕಟ್ಟು ಸಮಾಜಕ್ಕೆ ಬಹಳ ನಿರ್ಣಾಯಕ ದಿನವಾಗಿದೆ. ಸ್ವಲ್ಪ ಸಮಯದ ಹಿಂದೆ ನಾನು ಮಾನ್ ಗಢ್ ಧಾಮ್ ನಲ್ಲಿದ್ದೆ. ಮತ್ತು 'ಆಜಾದಿ ಕಾ ಅಮೃತ್ ಮಹೋತ್ಸವ'ದಲ್ಲಿ, ಮಾನ್ ಗಢ್ ಧಾಮ್ ನಲ್ಲಿ ಗೋವಿಂದ ಗುರು ಸೇರಿದಂತೆ ಸಾವಿರಾರು ಹುತಾತ್ಮ ಬುಡಕಟ್ಟು ಸಹೋದರ ಮತ್ತು ಸಹೋದರಿಯರಿಗೆ ಗೌರವ ಸಲ್ಲಿಸುವ ಮೂಲಕ ಬುಡಕಟ್ಟು ಜನರ ಮಹಾನ್ ತ್ಯಾಗಕ್ಕೆ ವಂದಿಸುವ ಅವಕಾಶ ನನಗೆ ದೊರಕಿತು. ಈಗ ನಾನು ನಿಮ್ಮೊಂದಿಗೆ ಜಂಬುಘೋಡದಲ್ಲಿದ್ದೇನೆ ಮತ್ತು ಜಂಬೂಘೋಡವು ನಮ್ಮ ಬುಡಕಟ್ಟು ಸಮಾಜದ ಮಹಾನ್ ಬಲಿದಾನಕ್ಕೆ ಸಾಕ್ಷಿಯಾಗಿದೆ. ಇಂದು ನಾವು ಶಹೀದ್ ಜೋರಿಯಾ ಪರಮೇಶ್ವರ, ರೂಪ್ ಸಿಂಗ್ ನಾಯಕ್, ಗಲಾಲಿಯಾ ನಾಯಕ್, ರಾವ್ ಜಿದಾ ನಾಯಕ್ ಮತ್ತು ಬಾಬರಿಯಾ ಗಲ್ಮಾ ನಾಯಕ್ ಅವರಂತಹ ಅಮರ ಹುತಾತ್ಮರಿಗೆ ಗೌರವ ಸಲ್ಲಿಸುವ ಅವಕಾಶವನ್ನು ಪಡೆದಿದ್ದೇವೆ.