ನವದೆಹಲಿಯಲ್ಲಿ ನಡೆದ ಸೋಲ್ ಲೀಡರ್ಶಿಪ್ ಕಾನ್ ಕ್ಲೆವ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 21st, 11:30 am
ಭೂತಾನ್ ಪ್ರಧಾನಮಂತ್ರಿ, ನನ್ನ ಸಹೋದರ ದಾಶೋ ತ್ಸೆರಿಂಗ್ ಟೋಬ್ಗೆ ಜಿ, ಸೋಲ್ ಬೋರ್ಡ್ ಅಧ್ಯಕ್ಷ ಸುಧೀರ್ ಮೆಹ್ತಾ, ಉಪಾಧ್ಯಕ್ಷ ಹನ್ಸುಮುಖ್ ಅಧಿಯಾ, ತಮ್ಮ ಜೀವನದಲ್ಲಿ, ತಮ್ಮ ಕ್ಷೇತ್ರಗಳಲ್ಲಿ ನಾಯಕತ್ವವನ್ನು ಒದಗಿಸುವಲ್ಲಿ ಯಶಸ್ವಿಯಾದ ಕೈಗಾರಿಕಾ ಜಗತ್ತಿನ ದಿಗ್ಗಜರು ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಭವಿಷ್ಯಕ್ಕಾಗಿ ಕಾಯುತ್ತಿರುವ ನನ್ನ ಯುವ ಸ್ನೇಹಿತರನ್ನೂ ನಾನು ಇಲ್ಲಿ ನೋಡುತ್ತಿದ್ದೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೋಲ್ ಲೀಡರ್ ಷಿಪ್ ಸಮ್ಮೇಳನದ ಮೊದಲ ಆವೃತ್ತಿಯನ್ನು ಉದ್ಘಾಟಿಸಿದರು
February 21st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ (ಸೋಲ್) ಲೀಡರ್ ಷಿಪ್ ಸಮ್ಮೇಳನ 2025 ಅನ್ನು ಉದ್ಘಾಟಿಸಿದರು. ಎಲ್ಲಾ ಗೌರವಾನ್ವಿತ ನಾಯಕರು ಮತ್ತು ಭವಿಷ್ಯದ ಮುಂಬರುವ ಯುವ ನಾಯಕರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಕೆಲವು ಘಟನೆಗಳು ಬಹಳ ಪ್ರಿಯವಾಗಿವೆ ಮತ್ತು ಇಂದು ಅಂತಹ ಒಂದು ಕಾರ್ಯಕ್ರಮವಾಗಿದೆ ಎಂದರು. ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರಿಕರ ಅಭಿವೃದ್ಧಿ ಅಗತ್ಯ, ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರ ಅಭಿವೃದ್ಧಿ ಅಗತ್ಯ ಎಂದು ಪ್ರಧಾನಿ ಹೇಳಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರನ್ನು ರೂಪಿಸುವುದು ಅಗತ್ಯವಾಗಿದೆ, ಇದು ಸಮಯದ ಅಗತ್ಯವಾಗಿದೆ ಎಂದು ಅವರು ಹೇಳಿದರು. ಆದ್ದರಿಂದ, ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ ವಿಕಸಿತ ಭಾರತದ ಅಭಿವೃದ್ಧಿಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ ಎಂದು ಅವರು ಒತ್ತಿ ಹೇಳಿದರು. ಆತ್ಮವು ಕೇವಲ ಸಂಘಟನೆಯ ಹೆಸರಿನಲ್ಲಿಲ್ಲ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಆತ್ಮವು ಭಾರತದ ಸಾಮಾಜಿಕ ಜೀವನದ ಆತ್ಮವಾಗಲಿದೆ ಎಂದರು. ಇನ್ನೊಂದು ಅರ್ಥದಲ್ಲಿ, ಆತ್ಮವು ಆಧ್ಯಾತ್ಮಿಕ ಅನುಭವದ ಸಾರವನ್ನು ಸುಂದರವಾಗಿ ಸೆರೆಹಿಡಿಯುತ್ತದೆ ಎಂದು ಅವರು ಹೇಳಿದರು. ಸೋಲ್ ನ ಎಲ್ಲ ಪಾಲುದಾರರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ ಅವರು, ಮುಂದಿನ ದಿನಗಳಲ್ಲಿ ಗುಜರಾತ್ ನ ಗಿಫ್ಟ್ ಸಿಟಿ ಬಳಿ ಸೋಲ್ ನ ಹೊಸ, ವಿಶಾಲವಾದ ಕ್ಯಾಂಪಸ್ ಸಿದ್ಧವಾಗಲಿದೆ ಎಂದು ಘೋಷಿಸಿದರು.