ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ

November 30th, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.

ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

November 21st, 06:45 am

ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.

ಜಿ7 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ

June 18th, 03:05 pm

2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ವಿಸ್ತಾರವಾದ ಮತ್ತು ಹೃತ್ಪೂರ್ವಕ ಸಂಭಾಷಣೆಗಳನ್ನು ನಡೆಸಿದರು. ಜಾಗತಿಕ ದಕ್ಷಿಣದ ಉದ್ದೇಶವನ್ನು ಸಮರ್ಥಿಸುವ ಭಾರತದ ಅಚಲ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಜಿ7 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

June 18th, 02:51 pm

ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಿದರು.

ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ

November 20th, 07:52 am

G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.

ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ

November 12th, 07:44 pm

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 16-21 ರವರೆಗೆ ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಅಧಿಕೃತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ನೈಜೀರಿಯಾದಲ್ಲಿ, ಅವರು ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಉನ್ನತ ಮಟ್ಟದ ಚರ್ಚೆಗಳಲ್ಲಿ ತೊಡಗುತ್ತಾರೆ. ಬ್ರೆಜಿಲ್‌ನಲ್ಲಿ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಗಯಾನಾದಲ್ಲಿ, ಪ್ರಧಾನ ಮಂತ್ರಿಗಳು ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಾರೆ, ಸಂಸತ್ತನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಕ್ಯಾರಿಕಾಮ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ, ಕೆರಿಬಿಯನ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಗಾಢಗೊಳಿಸುವ ಭಾರತದ ಬದ್ಧತೆಯನ್ನು ಒತ್ತಿಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಮಾಫೋಸಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

June 17th, 05:11 pm

ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಾಮಾಫೋಸಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು

ಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಜಲಿ ಅಸ್ಸೌಮಾನಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

January 29th, 10:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಝಲಿ ಅಸ್ಸೌಮಾನಿ ಅವರನ್ನು ಅಭಿನಂದಿಸಿದರು.

​​​​​​​ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ

November 05th, 10:22 pm

ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

September 26th, 04:12 pm

ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.

ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 26th, 04:11 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.

ಕೊಮೊರೊಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರು ಸಭೆ ನಡೆಸಿದರು

September 10th, 05:20 pm

ದೆಹಲಿಯಲ್ಲಿ 10 ಸೆಪ್ಟೆಂಬರ್ 2023 ರಂದು ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೊಮೊರೊಸ್ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಜಲಿ ಅಸ್ಸೋಮಾನಿ ಅವರ ಜೊತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆ ನಡೆಸಿದರು

​​​​​​​ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ-ಅಮೇರಿಕ ಜಂಟಿ ಹೇಳಿಕೆ

September 09th, 09:11 pm

ನಾವು ಹಂಚಿಕೊಳ್ಳುವ ಪ್ರಪಂಚಕ್ಕೆ ಪರಿಹಾರಗಳನ್ನು ನೀಡಲು ಅಂತಾರರಾಷ್ಟ್ರೀಯ ಆರ್ಥಿಕ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಿರುವ ಜಿ 20 ಯಲ್ಲಿ ನಮ್ಮ ಸಹಭಾಗಿತ್ವದ ಬದ್ಧತೆಯನ್ನು ಪುನರುಚ್ಚರಿಸಲು ನಾವು, ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮತ್ತು ಅಮೇರಿಕದ ನಾಯಕರು, ನವದೆಹಲಿಯಲ್ಲಿ ಜಿ 20 ನಾಯಕರ ಶೃಂಗಸಭೆಯ ವೇದಿಕೆಯಲ್ಲಿ ಭೇಟಿಯಾಗಿದ್ದೇವೆ.

ಬೆಂಗಳೂರಿನ ಇಸ್ರೋ ಕೇಂದ್ರದಿಂದ ಮರಳಿದ ನಂತರ ದೆಹಲಿಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಆಂಗ್ಲ ಅನುವಾದ

August 26th, 01:18 pm

ಇಂದು ಬೆಳಿಗ್ಗೆ ನಾವು ಬೆಂಗಳೂರಿಗೆ ಭೇಟಿ ನೀಡಿದ್ದೆ. ನಾನು ಬೆಳಿಗ್ಗೆಯೇ ಇಲ್ಲಿಗೆ ಆಗಮಿಸಿದೆ ಮತ್ತು ದೇಶಕ್ಕಾಗಿ ಅದ್ಭುತ ಸಾದನೆಯನ್ನು ಮಾಡಿದ ವಿಜ್ಞಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಹಾಗಾಗಿ ನಾನು ಇಂದು ಬೆಳಗಿನ ಜಾವವೇ ಬೆಂಗಳೂರಿಗೆ ಹೋಗಿದ್ದೆ. ಆದರೆ ಸುರ್ಯೋದಯಕ್ಕೂ ಮುನ್ನವೇ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಜನರು ಚಂದ್ರಯಾನದ ಯಶಸ್ಸುನ್ನು ಸಂಭ್ರಮಿಸಿದ ರೀತಿ ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿತ್ತು. ಮತ್ತು ಈಗ ಸೂರ್ಯನು ತೀವ್ರವಾದ ಬಿಸಿಲಿನಲ್ಲಿ ಸುಡುತ್ತಿದ್ದಾನೆ, ಅದು ಚರ್ಮವನ್ನೂ ಸಹ ಸುಡುತ್ತದೆ.ಇಲ್ಲಿಗೆ ಬಂದಿರುವ ನಿಮ್ಮೊಂದಿಗೆ ಈ ತೀವ್ರವಾದ ಬಿಸಿಲಿನಲ್ಲಿ ಚಂದ್ರಯಾನದ ಯಶಸ್ಸಿನ ಸಂತೋಷದಲ್ಲಿ ಪಾಲ್ಗೊಳ್ಳಲು ಮತ್ತು ಆಚರಣೆಯ ಆನಂದ ಹಂಚಿಕೊಳ್ಳುವ ಸೌಭಾಗ್ಯ ನನಗೆ ದೊರೆತಿದೆ. ಅದಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ.

ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿಯವರಿಗೆ ನಾಗರಿಕರಿಂದ ಭವ್ಯ ಸ್ವಾಗತ

August 26th, 12:33 pm

ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ʻಚಂದ್ರಯಾನ -3ʼ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದ ಹಿನ್ನೆಲೆಯಲ್ಲಿ ಇಸ್ರೋ ತಂಡದೊಂದಿಗೆ ಸಂವಹನ ನಡೆಸಿದ ನಂತರ ಪ್ರಧಾನಿ ಮೋದಿ ಇಂದು ಬೆಂಗಳೂರಿನಿಂದ ದೆಹಲಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ನ 4 ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ತೆರಳಿದ್ದರು. ಶ್ರೀ ಜೆ.ಪಿ. ನಡ್ಡಾ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು. ಪ್ರಧಾನಿಯವರ ವಿದೇಶಿ ಭೇಟಿಯ ಯಶಸ್ಸಿಗಾಗಿ ಹಾಗೂ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಗಾಗಿ ಪ್ರಧಾನ ಮಂತ್ರಿಗಳನ್ನು ನಡ್ಡಾ ಅವರು ಸನ್ಮಾನಿಸಿದರು.

ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಫಲಪ್ರದ ಪ್ರವಾಸದ ನಂತರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ

August 26th, 10:08 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 4 ದಿನಗಳ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಫಲಪ್ರದ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ, ನಂತರ ಗ್ರೀಸ್‌ಗೆ ಭೇಟಿ ನೀಡಿದರು. ಪ್ರಧಾನ ಮಂತ್ರಿ ಅವರು ವಿವಿಧ ದ್ವಿಪಕ್ಷೀಯ ಸಭೆಗಳನ್ನು ಮತ್ತು ಸ್ಥಳೀಯ ಚಿಂತಕರ ಗುಂಪಿನೊಂದಿಗೆ ಸಭೆಗಳನ್ನು ನಡೆಸಿದರು. ಮೋದಿ ಅವರು ಎರಡೂ ದೇಶಗಳಲ್ಲಿ ಇರುವ ರೋಮಾಂಚಕ ಭಾರತೀಯ ಸಮುದಾಯವನ್ನು ಭೇಟಿ ಮಾಡಿದರು. ಮೂಲಕ ಚಂದ್ರಯಾನ-3 ಮೂನ್ ಲ್ಯಾಂಡರ್ ಲ್ಯಾಂಡಿಂಗ್ ಅನ್ನು ವೀಡಿಯೊ ಕಾನ್ಫರೆನ್ಸ್ ವೀಕ್ಷಿಸಿದ್ದ ಪ್ರಧಾನಿ ಅವರು, ಇಂದು ಇಸ್ರೋ ತಂಡದೊಂದಿಗೆ ಸಂವಾದ ನಡೆಸಲು ಬೆಂಗಳೂರಿಗೆ ಬಂದಿಳಿದರು.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.