ಹನುಮಾನ್ ಜಯಂತಿಯಂದು ಶುಭ ಕೋರಿದ ಪ್ರಧಾನಮಂತ್ರಿ

April 02nd, 10:47 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹನುಮಾನ್ ಜಯಂತಿಯ ಸಂದರ್ಭದಲ್ಲಿ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಚೈತನ್ಯವನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥಿಸಿದರು. ಪವನಪುತ್ರ ಹನುಮಾನ್ ಜೀ ಅವರು ತಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದ ಹೇರಳವಾದ ಆಶೀರ್ವಾದವನ್ನು ಎಲ್ಲರ ಮೇಲೆ ಸುರಿಸಬೇಕೇ ಎಂಬುದು ನನ್ನ ಆಶಯವಾಗಿದೆ, ಇದರಿಂದ ನಮ್ಮ ರಾಷ್ಟ್ರದ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಉತ್ಕಲಾ ದಿನದ ಅಂಗವಾಗಿ ಶುಭಾಶಯ ಕೋರಿದ ಪ್ರಧಾನಮಂತ್ರಿ

April 01st, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರಕ್ಕೆ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ”ಒಡಿಶಾದ ಜನರು ತಮ್ಮ ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾಗಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರವನ್ನು ಏರಲಿ’’ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.

ಗುಜರಾತ್‌ನ ಗಾಂಧಿನಗರದಲ್ಲಿ ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

March 31st, 10:25 am

ಆಚಾರ್ಯ ಭಗವಂತ ಶ್ರೀ ಪದ್ಮಸಾಗರ ಸುರೀಶ್ವರ್ ಜೀ ಮಹಾರಾಜ್ ಸಾಹೇಬ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರಾಜ್ಯದ ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜೀ, ಪರಮ ಪೂಜ್ಯ ಆಚಾರ್ಯ ಭಗವಂತ, ಪೂಜ್ಯ ಸಾಧು ಭಗವಂತ, ಸಾಧ್ವಿಜಿ ಭಗವಂತ, ಎಲ್ಲ ಆಚಾರ್ಯರು ಮತ್ತು ಮುನಿ ಭಗವಂತರು ಹಾಗು ಈ ಪವಿತ್ರ ಸಮಾರಂಭದಲ್ಲಿ ಹಾಜರಿರುವ ಗೌರವಾನಿತ ದಾನಿಗಳು, ವಿದ್ವಾಂಸರು, ಮಹಿಳೆಯರೇ ಮತ್ತು ಮಹನೀಯರೇ!

ಮಹಾವೀರ ಜಯಂತಿಯ ಸಂದರ್ಭದಲ್ಲಿ ಗಾಂಧಿನಗರದ ಕೋಬಾ ತೀರ್ಥದಲ್ಲಿ‘ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯʼವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 31st, 10:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದ ಕೋಬಾ ತೀರ್ಥದಲ್ಲಿ ಪಾರಂಪರಿಕ ಜೈನ ವಸ್ತುಸಂಗ್ರಹಾಲಯವಾದ ʻಸಾಮ್ರಾಟ್ ಸಂಪ್ರತಿ ಮ್ಯೂಸಿಯಂʼ ಅನ್ನು ಉದ್ಘಾಟಿಸಿದರು. ಕೋಬಾ ತೀರ್ಥದಲ್ಲಿ ಆಧ್ಯಾತ್ಮಿಕ ಶಾಂತಿ ಆಳವಾಗಿ ಬೇರೂರಿದೆ. ಅನೇಕ ಜೈನ ಮುನಿಗಳು ಮತ್ತು ಸಂತರು ತಮ್ಮ ತಪ್ಪಸ್ಸಿನ ಅಭಿವ್ಯಕ್ತಿಯನ್ನು ಕಂಡುಕೊಂಡ ಈ ಸ್ಥಳದಲ್ಲಿ ಸೃಷ್ಟಿ ಮತ್ತು ಸೇವೆ ಸ್ವಾಭಾವಿಕವಾಗಿ ಅರಳುತ್ತದೆ, ಎಂದು ಶ್ರೀ ಮೋದಿ ಹೇಳಿದರು.

ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನವರಾತ್ರಿಯ ಸಂದರ್ಭದಲ್ಲಿ ಭಕ್ತಿಯ ಅಪಾರ ಶಕ್ತಿಯ ಕುರಿತು ಪ್ರಧಾನಮಂತ್ರಿ ತಮ್ಮ ಚಿಂತನೆ ಹರಿಸಿದ್ದಾರೆ

March 22nd, 09:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವರಾತ್ರಿಯ ಆಧ್ಯಾತ್ಮಿಕ ಮಹತ್ವದ ಕುರಿತು ತಮ್ಮ ಚಿಂತನೆಯನ್ನು ಹಂಚಿಕೊಂಡಿದ್ದು, ತಾಯಿ ದೇವಿಯ ಭಕ್ತಿಯಿಂದ ದೊರೆಯುವ ಅಪಾರ ಶಕ್ತಿ ಮತ್ತು ಸಾಮರ್ಥ್ಯವನ್ನು ಸಾರಿದ್ದಾರೆ.

ನವ್ರಾತ್ರಿ ಹಬ್ಬದ ಅಚಲ ನಂಬಿಕೆಯ ಬಗ್ಗೆ ಅಭಿವ್ಯಕ್ತಿಯನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

March 21st, 08:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪವಿತ್ರ ನವರಾತ್ರಿ ಹಬ್ಬದ ಆಧ್ಯಾತ್ಮಿಕ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ದೇವಿ ಮಾತೆಯ ಮೇಲಿನ ಭಕ್ತಿಯ ಪರಿವರ್ತನಾತ್ಮಕ ಶಕ್ತಿಯನ್ನು ತಾವು ಹಂಚಿಕೊಂಡ ವಿಡಿಯೊದಲ್ಲಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ದೇವಿಗೆ ಸಮರ್ಪಿತ ಭಕ್ತಿ ಗೀತೆಯನ್ನು ಕೂಡ ಹಂಚಿಕೊಂಡಿದ್ದಾರೆ.

ಬ್ರಹ್ಮಚಾರಿಣಿ ದೇವಿಯ ದೈವಿಕ ಮತ್ತು ಪರೋಪಕಾರಿ ಅನುಗ್ರಹವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

March 20th, 09:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರಹ್ಮಚಾರಿಣಿ ದೇವಿಯ ದೈವಿಕ ಮತ್ತು ಪರೋಪಕಾರಿ ಅನುಗ್ರಹವನ್ನು ಪ್ರಮುಖವಾಗಿ ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 01st, 12:00 pm

ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!

ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 01st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.

'ಬಸ್ತಾರ್ ಪಂಡಂ' ಹಬ್ಬದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನರನ್ನು ಅಭಿನಂದಿಸಿದ ಪ್ರಧಾನಮಂತ್ರಿ

February 10th, 10:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದಲ್ಲಿ ಫೆಬ್ರವರಿ 7ರಿಂದ 9 ರವರೆಗೆ 'ಬಸ್ತಾರ್ ಪಂಡಂ' ಉತ್ಸವದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ಶ್ರೀಲಂಕಾದ ಅಧ್ಯಕ್ಷರು ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ

February 05th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು

February 01st, 07:21 pm

ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜಯಂತಿಯ ವಿಶೇಷ ಸಂದರ್ಭದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೇರಾ ಸಚ್‌ಖಂಡ್ ಬಲ್ಲಾನ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. ಸಮಾಜಕ್ಕೆ ಅವರು ಸಲ್ಲಿಸಿದ ಸ್ಫೂರ್ತಿದಾಯಕ ಸೇವೆಯನ್ನು ಗುರುತಿಸಿ ಅವರಿಗೆ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಗುಜರಾತ್‌ನಲ್ಲಿ ಆಯೋಜಿಸಿದ್ದ ಸೋಮನಾಥ್ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

January 11th, 12:00 pm

ಗುಜರಾತ್‌ನ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಶಕ್ತಿಶಾಲಿ ಉಪಮುಖ್ಯಮಂತ್ರಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರಾದ ಜಿತುಭಾಯಿ ವಾಘಾನಿ, ಅರ್ಜುನ್‌ಭಾಯಿ ಮೋಧ್ವಾಡಿಯಾ, ಡಾ. ಪ್ರದ್ಯುಮ್ನ ವಾಜ, ಕೌಶಿಕ್‌ಭಾಯಿ ವೆಕಾರಿಯಾ, ಸಂಸತ್ ಸದಸ್ಯ ರಾಜೇಶ್‌ಭಾಯಿ, ಇಲ್ಲಿರುವ ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ. ಇಂದು ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೂ ಸಹ ನಾನು ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ - ಸೋಮನಾಥನಿಗೆ ವಿಜಯವಾಗಲಿ.

ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 11th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಮಯ ಅಸಾಧಾರಣವಾದುದು, ಈ ವಾತಾವರಣ ಅಸಾಧಾರಣವಾದುದು ಮತ್ತು ಈ ಆಚರಣೆಯೂ ಅಸಾಧಾರಣವಾದುದು ಎಂದು ಅವರು ಬಣ್ಣಿಸಿದರು. ಒಂದು ಕಡೆ ಸಾಕ್ಷಾತ್ ಮಹಾದೇವನಿದ್ದರೆ, ಮತ್ತೊಂದೆಡೆ ಸಮುದ್ರದ ಬೃಹತ್ ಅಲೆಗಳು, ಸೂರ್ಯನ ಕಿರಣಗಳು, ಮಂತ್ರಘೋಷಗಳ ಅನುರಣನ ಮತ್ತು ಭಕ್ತಿಯ ಉಲ್ಬಣವಿದೆ ಎಂದು ಅವರು ವಿವರಿಸಿದರು. ಈ ದೈವಿಕ ಪರಿಸರದಲ್ಲಿ ಸೋಮನಾಥನ ಭಕ್ತರ ಉಪಸ್ಥಿತಿಯು ಈ ಸಂದರ್ಭವನ್ನು ಮತ್ತಷ್ಟು ಭವ್ಯ ಹಾಗೂ ಪವಿತ್ರವಾಗಿಸಿದೆ ಎಂದು ಅವರು ತಿಳಿಸಿದರು. ಸೋಮನಾಥ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾಗಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ತಮ್ಮ ಮಹಾನ್ ಸೌಭಾಗ್ಯ ಎಂದು ಶ್ರೀ ಮೋದಿ ಹಂಚಿಕೊಂಡರು. ಕಳೆದ 72 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿರುವ ಓಂಕಾರ ಜಪ ಮತ್ತು ಮಂತ್ರಘೋಷಗಳ ಪಠಣವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾವಿರ ಡ್ರೋನ್‌ ಗಳು ಮತ್ತು ವೇದ ಪಾಠಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸೋಮನಾಥದ ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಪ್ರಸ್ತುತಪಡಿಸಿದ್ದನ್ನು ಅವರು ಉಲ್ಲೇಖಿಸಿದರು. ಅಲ್ಲದೆ, ಇಂದು 108 ಕುದುರೆಗಳನ್ನೊಳಗೊಂಡ 'ಶೌರ್ಯ ಯಾತ್ರೆ' ದೇವಾಲಯವನ್ನು ತಲುಪಿದೆ ಎಂದು ತಿಳಿಸಿದರು. ಮಂತ್ರಗಳು ಮತ್ತು ಭಜನೆಗಳ ಈ ಮನಮೋಹಕ ಪ್ರಸ್ತುತಿಯು ಪದಗಳಿಗೆ ನಿಲುಕದ್ದು, ಈ ಅನುಭವವನ್ನು ಕಾಲ ಮಾತ್ರವೇ ಸೆರೆಹಿಡಿಯಲು ಸಾಧ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಂಭ್ರಮವು ಕೇವಲ ಒಂದು ಉತ್ಸವವಲ್ಲ; ಇದು ಸ್ವಾಭಿಮಾನ, ಗೌರವ, ಘನತೆ, ಜ್ಞಾನ, ಭವ್ಯತೆ, ಪರಂಪರೆ, ಆಧ್ಯಾತ್ಮಿಕತೆ, ಸಾಕ್ಷಾತ್ಕಾರ, ಆನಂದ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಮಿಗಿಲಾಗಿ, ಈ ಕಾರ್ಯಕ್ರಮವು ಭಗವಾನ್ ಮಹಾದೇವನ ಆಶೀರ್ವಾದವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

ಸೋಮನಾಥದ ಕಾಲಾತೀತ ಮಹತ್ವವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ

January 09th, 09:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥದ ಕಾಲಾತೀತ ಮಹತ್ವವನ್ನು ಪುನರುಚ್ಚರಿಸಿದರು, ಇದು ಭಾರತದ ಆಧ್ಯಾತ್ಮಿಕ ಶಕ್ತಿ ಮತ್ತು ಭಕ್ತಿಯ ಶಾಶ್ವತ ಸಾಕಾರ ಎಂದು ಬಣ್ಣಿಸಿದರು.

ಸಾಮೂಹಿಕ ಒಗ್ಗಟ್ಟಿನಲ್ಲಿ ನೈಜ ಶಕ್ತಿ ಅಡಗಿರುವ ಬಗ್ಗೆ ವಿವರಿಸುವ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

January 05th, 09:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಕಾಲಾತೀತ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಗೆ ಗೌರವ ಸಮರ್ಪಿಸುತ್ತಾ ಶತಮಾನಗಳಿಂದ ಎದುರಾದ ಅಸಂಖ್ಯ ದಾಳಿಗಳ ನಡುವೆಯೂ ಅದು ಪುಟಿದೆದ್ದ ಬಗ್ಗೆ ವಿವರಿಸಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ

November 19th, 01:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.