2025ರ ಜೂನ್‌ 24ರಂದು ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ನಡುವಿನ ಸಂಭಾಷಣೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

June 23rd, 05:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್‌ 24ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ಸನ್ನಡತೆಯ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ನಡುವಿನ ಐತಿಹಾಸಿಕ ಸಂಭಾಷಣೆಯ ಶತಮಾನೋತ್ಸವ ಆಚರಣೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪೂಜನೀಯ ಪೋಪ್ XIV ಲಿಯೋ ಅವರಿಗೆ ಪ್ರಧಾನಮಂತ್ರಿ ಶುಭಾಶಯ

May 09th, 02:21 pm

ಭಾರತದ ಜನತೆಯ ಪರವಾಗಿ ಪೂಜನೀಯ ಪೋಪ್ XIV ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಜಾಗತಿಕ ಶಾಂತಿ, ಸಾಮರಸ್ಯ, ಒಗ್ಗಟ್ಟು ಮತ್ತು ಸೇವೆಯನ್ನು ಉತ್ತೇಜಿಸುವಲ್ಲಿ ಆಳವಾದ ಮಹತ್ವವನ್ನು ಗಮನಿಸಿದ ಕ್ಯಾಥೋಲಿಕ್ ಚರ್ಚ್ ನ ಪೋಪ್ ಅವರ ನಾಯಕತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪೋಪ್ ಫ್ರಾನ್ಸಿಸ್ ಅವರ ಸಮಾಜ ಸೇವೆಯನ್ನು ಜಗತ್ತು ಸದಾ ನೆನಪಿಸಿಕೊಳ್ಳುತ್ತದೆ: ಪ್ರಧಾನಮಂತ್ರಿ

April 26th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗೌರವಾನ್ವಿತ ಪೋಪ್ ಫ್ರಾನ್ಸಿಸ್ ಅವರಿಗೆ ಭಾರತದ ಜನತೆಯ ಪರವಾಗಿ ರಾಷ್ಟ್ರಪತಿಯವರು ಗೌರವ ನಮನ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಪೋಪ್ ಫ್ರಾನ್ಸಿಸ್ ಅವರ ಸಮಾಜ ಸೇವೆಯನ್ನು ಜಗತ್ತು ಸದಾ ನೆನಪಿಸಿಕೊಳ್ಳುತ್ತದೆ ಎಂದು ಶ್ರೀ ಮೋದಿ ಹೇಳಿದರು.

ಪೂಜ್ಯ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

April 21st, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಸಹಾನುಭೂತಿ, ನಮ್ರತೆ ಮತ್ತು ಆಧ್ಯಾತ್ಮಿಕ ಸ್ಥೈರ್ಯದ ದಾರಿದೀಪ ಎಂದು ಶ್ಲಾಘಿಸಿದ್ದಾರೆ.

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

February 18th, 08:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಫೆಬ್ರವರಿ 5, 2025 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ

February 04th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 5 , 2025 ರಂದು ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳ 2025 ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ, ಅವರು ಸಂಗಮದಲ್ಲಿ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ, ಮತ್ತು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಆಯಿ ಶ್ರೀ ಸೋನಾಲ್ ಮಾತಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೊ ಸಮಾವೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ

January 13th, 12:00 pm

ಪ್ರಸ್ತುತ ಆಧ್ಯಾತ್ಮಿಕ ನಾಯಕ (ಗಾದಿಪತಿ) ಪೂಜ್ಯ ಕಾಂಚನ್ ಮಾ, ಮತ್ತು ಆಡಳಿತಾಧಿಕಾರಿ ಪೂಜ್ಯ ಗಿರೀಶ್ ಆಪಾ! ಇಂದು ಈ ಶುಭ ಮಾಸದಲ್ಲಿ, ನಾವೆಲ್ಲರೂ ಆಯಿ ಶ್ರೀ ಸೋನಾಲ್ ಮಾ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದ್ದೇವೆ. ತಾಯಿ ಸೋನಾಲ್ ಅವರ ಆಶೀರ್ವಾದದ ಕೃಪೆಯಲ್ಲಿ ಈ ಪವಿತ್ರ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಲು ಅವಕಾಶ ಸಿಕ್ಕಿರುವುದು ನಿಜಕ್ಕೂ ನನ್ನ ಪಾಲಿಗೆ ಒಂದು ವಿಶೇಷ ಕ್ಷಣವಾಗಿದೆ. ಇಡೀ ಚರಣ್ ಸಮುದಾಯಕ್ಕೆ, ನಿರ್ವಾಹಕರಿಗೆ ಮತ್ತು ಸೋನಲ್ ಮಾ ಅವರ ಭಕ್ತರಿಗೆ ಅಭಿನಂದನೆಗಳು. ಚರಣ್ ಸಮುದಾಯಕ್ಕೆ ಪೂಜ್ಯ, ಶಕ್ತಿ ಮತ್ತು ಸಂಪ್ರದಾಯಗಳ ಕೇಂದ್ರವಾಗಿ ಮಾಢಡಾ ಧಾಮ್ ವಿಶೇಷ ಸ್ಥಾನವನ್ನು ಹೊಂದಿದೆ. ನಾನು ವಿನಯಪೂರ್ವಕವಾಗಿ ಶ್ರೀ ಆಯಿಯ ಪಾದಗಳಿಗೆ ನನ್ನನ್ನು ಅರ್ಪಿಸುತ್ತೇನೆ ಮತ್ತು ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಅವರು ಆಯಿ ಶ್ರೀ ಸೋನಾಲ್ ಮಾತಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ವೀಡಿಯೊ ಸಂದೇಶದ ಮೂಲಕ ಉದ್ದೇಶಿಸಿ ಮಾತನಾಡಿದರು

January 13th, 11:30 am

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಆಯಿ ಶ್ರೀ ಸೋನಲ್ ಮಾತಾ ಅವರ ಜನ್ಮಶತಮಾನೋತ್ಸವವು ಪವಿತ್ರವಾದ ಪೌಷ ಮಾಸದಲ್ಲಿ ನಡೆಯುತ್ತಿದ್ದು, ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು, ಸೋನಲ್ ಮಾತಾ ಅವರ ಆಶೀರ್ವಾದಕ್ಕೆ ಪಾತ್ರರಾಗಿರುವುದು ಒಂದು ಸೌಭಾಗ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಡೀ ಚರಣ್ ಸಮುದಾಯ ಮತ್ತು ಎಲ್ಲಾ ಆಡಳಿತಗಾರನ್ನು ಅಭಿನಂದಿಸಿದ ಪ್ರಧಾನಿ ಮೋದಿ, “ಮದಡಾ ಧಾಮವು ಚರಣ್ ಸಮುದಾಯದ ಶ್ರದ್ಧೆ, ಶಕ್ತಿ, ಆಚರಣೆ ಮತ್ತು ಸಂಪ್ರದಾಯಗಳ ಕೇಂದ್ರವಾಗಿದೆ. ನಾನು ಶ್ರೀ ಆಯಿಯ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ನನ್ನ ನಮನವನ್ನು ಸಲ್ಲಿಸುತ್ತೇನೆ” ಎಂದರು.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ʻಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 04th, 11:00 am

ಪುಟ್ಟಪರ್ತಿಗೆ ಹಲವು ಬಾರಿ ಭೇಟಿ ನೀಡುವ ಸೌಭಾಗ್ಯ ನನಗೆ ದೊರೆತಿದೆ. ನಾನು ಮತ್ತೊಮ್ಮೆ ನಿಮ್ಮೆಲ್ಲರ ನಡುವೆ ಇರಲು ಬಯಸಿದ್ದೆ, ನಿಮ್ಮನ್ನು ಭೇಟಿಯಾಗಲು ಮತ್ತು ಇಂದು ಅಲ್ಲಿ ಉಪಸ್ಥಿತರಿರುವ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆ. ಆದರೆ, ನನ್ನ ಬಿಡುವುರಹಿತ ವೇಳಾಪಟ್ಟಿಯಿಂದಾಗಿ, ನನಗೆ ಇದು ಸಾಧ್ಯವಾಗಲಿಲ್ಲ. ನನ್ನನ್ನು ಆಹ್ವಾನಿಸುವಾಗ, ಭಾಯಿ ರತ್ನಾಕರ್ ಅವರು 'ನೀವು ಒಮ್ಮೆ ಬಂದು ಆಶೀರ್ವಾದ ನೀಡಬೇಕು' ಎಂದು ಹೇಳಿದರು. ರತ್ನಾಕರ್ ಅವರ ಹೇಳಿಕೆಯನ್ನು ಸರಿಪಡಿಸುವ ಅಗತ್ಯವಿದೆ ನಾನು ಭಾವಿಸುತ್ತೇನೆ. ನಾನು ಖಂಡಿತವಾಗಿಯೂ ಅಲ್ಲಿಗೆ ಬರುತ್ತೇನೆ, ಆದರೆ ಆಶೀರ್ವಾದ ನೀಡಲು ಅಲ್ಲ, ಬದಲಾಗಿ ಆಶೀರ್ವಾದ ಪಡೆಯಲು. ತಂತ್ರಜ್ಞಾನದ ಸಹಾಯದಿಂದ ನಾನು ಇಂದು ನಿಮ್ಮೆಲ್ಲರ ನಡುವೆ ಇದ್ದೇನೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಜೊತೆ ಸಂಬಂಧ ಹೊಂದಿರುವ ಎಲ್ಲಾ ಸದಸ್ಯರು ಮತ್ತು ಸತ್ಯ ಸಾಯಿ ಬಾಬಾ ಅವರ ಎಲ್ಲಾ ಭಕ್ತರನ್ನು ಇಂದು ಈ ಕಾರ್ಯಕ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ಇಡೀ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಅವರ ಸ್ಫೂರ್ತಿ ಮತ್ತು ಆಶೀರ್ವಾದ ನಮ್ಮೊಂದಿಗಿದೆ. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಧ್ಯೇಯದ ವಿಸ್ತರಣೆಯನ್ನು ನೋಡಿ ನನಗೆ ಸಂತಸವಾಗಿದೆ. ದೇಶವು ʻಶ್ರೀ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ರೂಪದಲ್ಲಿ ಪ್ರಮುಖ ಚಿಂತಕರ ಚಾವಡಿಯನ್ನು ಪಡೆಯುತ್ತಿದೆ. ನಾನು ಈ ಸಮಾವೇಶ ಕೇಂದ್ರದ ಚಿತ್ರಗಳನ್ನು ಮತ್ತು ಅದರ ಇಣುಕುನೋಟಗಳನ್ನು ಈಗ ಪ್ರದರ್ಶಿಸಲಾದ ಕಿರುಚಿತ್ರದಲ್ಲಿ ನೋಡಿದ್ದೇನೆ. ಇದು ಆಧುನಿಕತೆಯ ಸ್ಪರ್ಶದೊಂದಿಗೆ ಆಧ್ಯಾತ್ಮಿಕ ಅನುಭವವನ್ನು ಒದಗಿಸುತ್ತದೆ. ಇದು ಸಾಂಸ್ಕೃತಿಕ ದೈವತ್ವದ ಜೊತೆಗೆ, ಬೌದ್ಧಿಕ ಭವ್ಯತೆಯನ್ನು ಒಳಗೊಂಡಿದೆ. ಈ ಕೇಂದ್ರವು ಆಧ್ಯಾತ್ಮಿಕ ಸಮ್ಮೇಳನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಪ್ರಪಂಚದಾದ್ಯಂತದ ವಿವಿಧ ಕ್ಷೇತ್ರಗಳ ವಿದ್ವಾಂಸರು ಮತ್ತು ತಜ್ಞರು ಇಲ್ಲಿ ಒಟ್ಟುಗೂಡುತ್ತಾರೆ. ಈ ಕೇಂದ್ರವು ಯುವಕರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ.

ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ

July 04th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಶ್ರೀ ಸಾಯಿ ಹಿರಾ ಜಾಗತಿಕ ಸಮ್ಮೇಳನ ಸಭಾಂಗಣ (ಗ್ಲೋಬಲ್ ಕನ್ವೆನ್ಷನ್ ಸೆಂಟರ್) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತದಿಂದ ಆಗಮಿಸಿರುವ ಪ್ರಮುಖ ಗಣ್ಯರು ಮತ್ತು ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.

ಆಧ್ಯಾತ್ಮಿಕ ನಾಯಕರ ಸಂದೇಶದಿಂದಾಗಿ ಭಾರತವು ಇತರ ದೇಶಗಳಲ್ಲಿ ಕಂಡುಬರುವಂತೆ ಲಸಿಕೆ ಹಿಂಜರಿಕೆಯನ್ನು ಎದುರಿಸಲಿಲ್ಲ: ಪ್ರಧಾನಿ

August 24th, 11:01 am

ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಆಸ್ಪತ್ರೆಯು ಆಧುನಿಕತೆ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವಾಗಿದ್ದು, ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ಮತ್ತು ಕೈಗೆಟುಕುವ ಚಿಕಿತ್ಸೆಯ ಮಾಧ್ಯಮವಾಗಲಿದೆ ಎಂದು ಅವರು ಹೇಳಿದರು.

ಫರಿದಾಬಾದ್ ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ

August 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಶ್ರೀ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್, ಉಪಮುಖ್ಯಮಂತ್ರಿ ಶ್ರೀ ದುಷ್ಯಂತ್ ಚೌತಾಲಾ, ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜಾರ್, ಶ್ರೀ ಮಾತಾ ಅಮೃತಾನಂದಮಯಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿಯವರ ‘ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ’ ಕರೆಗೆ ಆಧ್ಯಾತ್ಮಿಕ ಮುಖಂಡರ ಬೆಂಬಲ

November 17th, 02:14 pm

‘ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ’ಯ ಮೂಲಕ ಆತ್ಮನಿರ್ಭರ ಭಾರತ ಆಂದೋಲನವನ್ನು ಜನಪ್ರಿಯಗೊಳಿಸಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಆಧ್ಯಾತ್ಮಿಕ ಮುಖಂಡರಿಗೆ ಮಾಡಿದ ಮನವಿಗೆ ದೇಶದ ಪ್ರಮುಖ ಆಧ್ಯಾತ್ಮಿಕ ನಾಯಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಧಾನ ಮಂತ್ರಿಯವರ ಮನವಿಗೆ ‘ಸಂತ ಸಮಾಜವು ಬಹಳ ಉತ್ಸಾಹದಿಂದ ಪ್ರತಿಕ್ರಿಯಿಸಿದೆ. ಆತ್ಮನಿರ್ಭರ ಭಾರತಕ್ಕಾಗಿ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮತ್ತು ಜನಪ್ರಿಯಗೊಳಿಸಲು ಆಧ್ಯಾತ್ಮಿಕ ನಾಯಕರು ಸಾರ್ವಜನಿಕ ಬದ್ಧತೆಯೊಂದಿಗೆ ಮುಂದೆ ಬಂದಿದ್ದಾರೆ ಮತ್ತು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.