ಗ್ಯಾಂಗ್ಟಾಕ್ ಆರ್ಕಿಡೇರಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಕ್ಕಿಂನ ಅಸಾಧಾರಣ ಜೀವವೈವಿಧ್ಯತೆಯನ್ನು ಪ್ರಧಾನಮಂತ್ರಿ ಶ್ಲಾಘನೆ

April 28th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿರುವ ಆರ್ಕಿಡೇರಿಯಂಗೆ ಭೇಟಿ ನೀಡಿ ಅದರ ಸೌಂದರ್ಯ ಮತ್ತು ರಾಜ್ಯದ ಅಸಾಧಾರಣ ಜೀವವೈವಿಧ್ಯದ ಬಗ್ಗೆ ತಮ್ಮ ಆಳವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ

April 20th, 10:55 pm

ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.

ಏಪ್ರಿಲ್ 14 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 13th, 04:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14, 2026 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:15ರ ಸುಮಾರಿಗೆ, ಪ್ರಧಾನಮಂತ್ರಿಯವರು ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ನ ಎಲಿವೇಟೆಡ್ ವಿಭಾಗದಲ್ಲಿ ವನ್ಯಜೀವಿ ಕಾರಿಡಾರ್ ನ ಪರಿಶೀಲನೆಯನ್ನು ಕೈಗೊಳ್ಳಲು ಉತ್ತರ ಪ್ರದೇಶದ ಸಹರಾನ್ ಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:40ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ಬಳಿಯ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ನಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Cabinet approves Regional Connectivity Scheme – Modified UDAN with a total outlay of Rs.28,840 crore

March 25th, 04:16 pm

The Union Cabinet, chaired by PM Modi, has approved the launch and implementation of the Regional Connectivity Scheme – Modified UDAN for a period of ten years from FY 2026-27 to FY 2035-36, with a total outlay of Rs. 28,840 crore. In line with the Viksit Bharat 2047 vision, this initiative will enhance regional air connectivity, boost economic growth, trade and tourism and promote the indigenous aerospace sector.

Cabinet approves a New Era of Plug-and-Play Industrial Development through Bharat Audyogik Vikas Yojna (BHAVYA)

March 18th, 04:05 pm

In a landmark step towards accelerating industrial growth, the Union Cabinet chaired by PM Narendra Modi has approved the Bharat Audyogik Vikas Yojna (BHAVYA), with an allocation of Rs.33,660 crore for developing 100 plug-and-play industrial parks across the country. The scheme aims to develop world-class industrial infrastructure, unlocking manufacturing potential and driving India’s growth story.

ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ

March 09th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್‌ ಜಂಟಿ ಹೇಳಿಕೆ

March 05th, 08:03 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್‌ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.

ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್‌ ಅಧ್ಯಕ್ಷರ ಭೇಟಿ

March 05th, 04:36 pm

ಫಿನ್ಲೆಂಡ್‌ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.

"ಆರ್ಥಿಕ ಬೆಳವಣಿಗೆಯ ಸುಸ್ಥಿರಗೊಳಿಸುವಿಕೆ ಮತ್ತು ಬಲವರ್ಧನೆ" ಕುರಿತಂತೆ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾರ್ಚ್ 3 ರಂದು ಪ್ರಧಾನಮಂತ್ರಿ ಭಾಷಣ

March 02nd, 07:10 pm

ಆರ್ಥಿಕ ಬೆಳವಣಿಗೆಯ ಸುಸ್ಥಿರಗೊಳಿಸುವಿಕೆ ಮತ್ತು ಬಲವರ್ಧನೆ ಎಂಬ ವಿಷಯದ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ 2026ರ ಮಾರ್ಚ್ 3 ರಂದು ಬೆಳಗ್ಗೆ 11:15 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಮಾತನಾಡಲಿದ್ದಾರೆ.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಮಾರ್ಚ್ 1 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 27th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 1, 2026 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ರಾಜಸ್ಥಾನ ಮತ್ತು ಗುಜರಾತ್ ಭೇಟಿಯ ನಂತರ, ಪ್ರಧಾನಮಂತ್ರಿ ಫೆಬ್ರವರಿ 28 ರಂದು ರಾತ್ರಿ 9 ಗಂಟೆಗೆ ಚೆನ್ನೈ ಆಗಮಿಸಲಿದ್ದಾರೆ.

ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ

February 26th, 07:41 pm

ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆಯಡಿ 30 ಲಕ್ಷ ಕುಟುಂಬಗಳು ಮೇಲ್ಛಾವಣಿ ಸೌರಶಕ್ತಿಯನ್ನು ಅಳವಡಿಸಿಕೊಂಡಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ

February 23rd, 08:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತ 30 ಲಕ್ಷ ಮನೆಗಳನ್ನು ಮೇಲ್ಛಾವಣಿ ಸೌರಶಕ್ತಿಯೊಂದಿಗೆ ಸಬಲೀಕರಣಗೊಳಿಸಿದ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಶುದ್ಧ ಇಂಧನ ಪಯಣದಲ್ಲಿ ಶ್ಲಾಘನೀಯ ಮೈಲಿಗಲ್ಲುಎಂದು ಬಣ್ಣಿಸಿದ್ದಾರೆ.

ಸಿಇಒ ದುಂಡುಮೇಜಿನ ಸಭೆ, ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆಗೆ ಜಾಗತಿಕ ಬದ್ಧತೆಯನ್ನು ಬಿಂಬಿಸಿದ ಪ್ರಧಾನಮಂತ್ರಿ

February 19th, 10:05 pm

ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ ಮತ್ತು ನಾವೀನ್ಯತೆಯ ಪ್ರಪಂಚದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸಿದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಸಿಇಒ ದುಂಡುಮೇಜಿನ ಸಭೆಯ ಫಲಿತಾಂಶಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.

Cabinet approves Rs. One Lakh Crore Urban Challenge Fund to Drive Market-Led Urban Transformation

February 14th, 01:09 pm

The Union Cabinet, chaired by PM Modi, has approved the launch of the Urban Challenge Fund (UCF) with a total Central Assistance of Rs. one lakh crore. This will lead to a total investment of Rs. four lakh crore in the urban sector over the next five years. The fund gives effect to the Government’s vision announced in Budget 2025–26 to implement proposals relating to Cities as Growth Hubs.

ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 389 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ

February 14th, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ನಿನ್ನೆ ಕೇಂದ್ರ ರೈಲ್ವೆ ಸಚಿವಾಲಯದ ಮೂರು (3) ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. (ಅಂದಾಜು) ವೆಚ್ಚದೊಂದಿಗೆ ಅನುಮೋದಿಸಿದೆ. ಈ ಯೋಜನೆಗಳು ಈ ಕೆಳಗಿನಂತಿವೆ:

ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ

February 09th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.