PM Modi chairs 51st PRAGATI Meeting
May 27th, 10:01 pm
PM Modi chaired the 51st meeting of PRAGATI and reviewed seven critical infrastructure projects across nine States worth around ₹30,000 crore. He emphasised the need for effective implementation of Swachh Bharat Mission 2.0 and lauded the Ken-Betwa River Inter-linking Project as a model initiative. A system of monthly review of social sector schemes at the State level had been operationalised, with Swachh Bharat Mission taken up for review.ರೋಜ್ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್ನ 45 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 11:05 am
ಈಗ ಗುರುದೇವ್ ಅನೇಕ ವಿಷಯಗಳನ್ನು ಹೇಳಿದರು. ಅವರು ನನ್ನನ್ನು ಹೊಗಳುತ್ತಿದ್ದಾರೆಂದು ನೀವು ಭಾವಿಸಬಹುದು, ಆದರೆ ಅವರು ನನಗೆ ಕೆಲಸ ನಿಯೋಜಿಸುತ್ತಿದ್ದಾರೆಂದು ನಾನು ಭಾವಿಸಿದೆ. ನನಗೆ ಧನ್ಯವಾದ ಹೇಳಲು ಸಾಧ್ಯವಿಲ್ಲ ಎಂದು ನೀವು ಸರಿಯಾಗಿ ಹೇಳಿದ್ದೀರಿ, ನಾನು ನಿಮಗೆ ಸೇರಿದವನು, ನಾನು ನಿಮ್ಮ ನಡುವೆ ಮತ್ತು ನಿಮಗಾಗಿ ಬಂದಿದ್ದೇನೆ ಮತ್ತು ನಾನು ಎಲ್ಲಿದ್ದರೂ ಅದು ನಿಮ್ಮಿಂದಲೇ. ಇಂದು ಗುರುದೇವ್ ಅವರ 70 ವರ್ಷಗಳ ಕಾರ್ಯಕ್ರಮ, ಆದರೆ ನಾನು ಕುಟುಂಬದ ಭಾಗವಾಗಿರುವುದರಿಂದ, ನಿಮ್ಮ ಶತಮಾನೋತ್ಸವ ಆಚರಣೆ ಬಂದಾಗ, ನಾನು ಮತ್ತೆ ಬರುತ್ತೇನೆ ಎಂದು ನಾನು ಬಹಿರಂಗವಾಗಿ ಹೇಳುತ್ತೇನೆ.ಕರ್ನಾಟಕದ ಬೆಂಗಳೂರಿನಲ್ಲಿ ನಡೆದ 'ದಿ ಆರ್ಟ್ ಆಫ್ ಲಿವಿಂಗ್'ನ 45ನೇ ವರ್ಷಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಬೆಂಗಳೂರಿನಲ್ಲಿ ನಡೆದ 'ದಿ ಆರ್ಟ್ ಆಫ್ ಲಿವಿಂಗ್'ನ 45ನೇ ವರ್ಷಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದ ಮಂಗಳಕರತೆಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಮಕ್ಕಳ ವೈದಿಕ ಮಂತ್ರಘೋಷಗಳ ಸ್ವಾಗತ, ಭಗವಾನ್ ಗಣೇಶನ ದರ್ಶನ, ಶ್ರೀ ಶ್ರೀ ರವಿಶಂಕರ್ ಜೀ ಅವರ 70ನೇ ವರ್ಷ ಮತ್ತು ಆರ್ಟ್ ಆಫ್ ಲಿವಿಂಗ್ನ 45ನೇ ವರ್ಷಾಚರಣೆಯ ಸಂಭ್ರಮದಿಂದ ಸಮೃದ್ಧವಾಗಿರುವ ಈ ಬೆಳಗಿನ ವಿಶಿಷ್ಟತೆಯನ್ನು ಬಣ್ಣಿಸಿದರು. ಇವು ನನ್ನ ನೆನಪಿನಲ್ಲಿ ಸದಾ ಉಳಿಯುವ ಕ್ಷಣಗಳು, ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟರು.Bengal’s strength is known worldwide, but TMC has trapped it in corruption: PM Modi in Mathurapur
April 23rd, 01:00 pm
Addressing a Vijay Sankalp rally in Mathurapur, West Bengal, PM Modi contrasted BJP’s 11 years of development with TMC’s 15 years of “lies and betrayal.” Targeting the TMC's syndicate culture, he described widespread “cut money” in jobs, land, rations and mandis. He concluded by asserting that a strong wave of change is visible across Bengal, driven by women and youth.Today, against TMC’s jungle raj, people across Bengal are blowing the conch of change: PM Modi in Krishnanagar
April 23rd, 12:45 pm
PM Modi addressed a massive public rally in Krishnanagar, delivering a sharp critique of TMC’s misgovernance while presenting BJP’s vision of development, security and women-led growth in West Bengal. He highlighted 15 years of “scams and broken promises” under TMC, contrasting it with BJP’s vision of “Sabka Saath, Sabka Vikas”. Reaffirming Modi's guarantee, he announced 10 guarantees for women.PM Modi’s high-energy rallies in Krishnanagar and Mathurapur, West Bengal
April 23rd, 12:30 pm
PM Modi addressed massive public gatherings in Krishnanagar and Mathurapur, delivering a sharp critique of TMC’s misgovernance while presenting BJP’s vision of development, security and women-led growth in West Bengal.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.ಬಜೆಟ್ ನಂತರದ ವೆಬಿನಾರ್ನಲ್ಲಿ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಪ್ರಧಾನಮಂತ್ರಿ ಅವರ ವಿಶೇಷ ಭಾಷಣ
March 09th, 10:30 am
ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇಂದು 4ನೇ ಮತ್ತು ಅತ್ಯಂತ ಮಹತ್ವದ ವೆಬಿನಾರ್ ನಡೆಸಲಾಗುತ್ತಿದೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಕೇವಲ ಚರ್ಚೆಯ ವಿಷಯವಲ್ಲ - ಇದು ಈ ಬಜೆಟ್ನ ಪ್ರಮುಖ ಉದ್ದೇಶ ಮತ್ತು ಈ ಸರ್ಕಾರದ ದೃಢ ಸಂಕಲ್ಪವಾಗಿದೆ. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಈ ಆಕಾಂಕ್ಷೆಗಳನ್ನು ಈಡೇರಿಸುವ ಪ್ರಮುಖ ಸಾಧನಗಳಾಗಿ ಕಾರ್ಯ ನಿರ್ವಹಿಸುವ ಮೂಲಭೂತ ಕ್ಷೇತ್ರಗಳಾಗಿವೆ. ಆದ್ದರಿಂದ, ಈ ವೆಬಿನಾರ್ನಲ್ಲಿ ನಾವು ಈ ನಿರ್ಣಾಯಕ ಆಯಾಮ(ವಿಷಯ)ಗಳ ಬಗ್ಗೆ ಚರ್ಚಿಸುತ್ತಿದ್ದೇವೆ. ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಇಲ್ಲಿ ಉಪಸ್ಥಿತರಿರುವ ಎಲ್ಲಾ ತಜ್ಞರು, ನೀತಿ ನಿರೂಪಕರು, ವಿದ್ವಾಂಸರು, ಉದ್ಯಮಿಗಳು ಮತ್ತು ನನ್ನ ಯುವ ಒಡನಾಡಿಗಳ ಆಲೋಚನೆಗಳು ಮತ್ತು ಸಲಹೆಗಳು ಅತ್ಯಂತ ಮುಖ್ಯ. ಬಜೆಟ್ ವೆಬಿನಾರ್ನ ಈ 4ನೇ ಕಲಾಪದಲ್ಲಿ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ."ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 09th, 10:15 am
ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಪೂರೈಸುವುದು ಎಂಬ ವಿಷಯ ಕುರಿತ ಬಜೆಟ್ ನಂತರದ 4ನೇ ಸರಣಿಯ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಕ್ಷೇತ್ರಗಳು ಈ ಗುರಿಗಳನ್ನು ಸಾಧಿಸುವ ಪ್ರಾಥಮಿಕ ಸಾಧನಗಳಾಗಿವೆ ಎಂದು ಒತ್ತಿ ಹೇಳಿದ ಮೋದಿ, ಬಜೆಟ್ ಘೋಷಣೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಬೇಕು ಎಂದು ತಜ್ಞರು ಮತ್ತು ನೀತಿ ನಿರೂಪಕರನ್ನು ಸ್ವಾಗತಿಸಿದರು. ಸಾರ್ವಜನಿಕ ಆಕಾಂಕ್ಷೆಗಳನ್ನು ಪೂರೈಸುವುದು ಕೇವಲ ಒಂದು ವಿಷಯವಲ್ಲ; ಇದು ಈ ಬಜೆಟ್ ಮತ್ತು ಈ ಸರ್ಕಾರದ ನಿರ್ಣಯದ ಪ್ರಮುಖ ಉದ್ದೇಶವಾಗಿದೆ ಎಂದು ಮೋದಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
February 09th, 10:30 am
ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ಮೊದಲ ಮತದಾನದಿಂದ ಸ್ಟಾರ್ಟ್ಅಪ್ ಇಂಡಿಯಾದವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಭಾರತದ ಯುವಕರನ್ನು ಆಚರಿಸುತ್ತಾರೆ.
January 25th, 11:30 am
ಈ ವರ್ಷದ ರಾಷ್ಟ್ರೀಯ ಮತದಾರರ ದಿನದಂದು ನಡೆದ ಮೊದಲ ಮನ್ ಕಿ ಬಾತ್ನಲ್ಲಿ, ಪ್ರಧಾನಿ ಮೋದಿ ಮತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಶ್ಲಾಘಿಸಿದರು. ಅವರು ಸ್ಟಾರ್ಟ್ಅಪ್ಗಳು, ನೀರಿನ ಸಂರಕ್ಷಣೆ, ಗುಣಮಟ್ಟ, ಸಂಸ್ಕೃತಿ ಮತ್ತು ಹಬ್ಬಗಳು ಮತ್ತು ಸ್ವಚ್ಛತೆಯಂತಹ ಪ್ರಮುಖ ವಿಷಯಗಳನ್ನು ಸಹ ಸ್ಪರ್ಶಿಸಿದರು. ಮುಂದಿನ ತಿಂಗಳು ನಡೆಯಲಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ಎತ್ತಿ ತೋರಿಸಿದರು, ಅಲ್ಲಿ ಪ್ರಪಂಚದಾದ್ಯಂತದ ತಜ್ಞರು ಭಾಗವಹಿಸುತ್ತಾರೆ.ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 11:00 am
ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.