ಬಜೆಟ್ ನಂತರದ ವೆಬಿನಾರ್ನಲ್ಲಿ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಪ್ರಧಾನಮಂತ್ರಿ ಅವರ ವಿಶೇಷ ಭಾಷಣ
March 09th, 10:30 am
ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇಂದು 4ನೇ ಮತ್ತು ಅತ್ಯಂತ ಮಹತ್ವದ ವೆಬಿನಾರ್ ನಡೆಸಲಾಗುತ್ತಿದೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಕೇವಲ ಚರ್ಚೆಯ ವಿಷಯವಲ್ಲ - ಇದು ಈ ಬಜೆಟ್ನ ಪ್ರಮುಖ ಉದ್ದೇಶ ಮತ್ತು ಈ ಸರ್ಕಾರದ ದೃಢ ಸಂಕಲ್ಪವಾಗಿದೆ. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಈ ಆಕಾಂಕ್ಷೆಗಳನ್ನು ಈಡೇರಿಸುವ ಪ್ರಮುಖ ಸಾಧನಗಳಾಗಿ ಕಾರ್ಯ ನಿರ್ವಹಿಸುವ ಮೂಲಭೂತ ಕ್ಷೇತ್ರಗಳಾಗಿವೆ. ಆದ್ದರಿಂದ, ಈ ವೆಬಿನಾರ್ನಲ್ಲಿ ನಾವು ಈ ನಿರ್ಣಾಯಕ ಆಯಾಮ(ವಿಷಯ)ಗಳ ಬಗ್ಗೆ ಚರ್ಚಿಸುತ್ತಿದ್ದೇವೆ. ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಇಲ್ಲಿ ಉಪಸ್ಥಿತರಿರುವ ಎಲ್ಲಾ ತಜ್ಞರು, ನೀತಿ ನಿರೂಪಕರು, ವಿದ್ವಾಂಸರು, ಉದ್ಯಮಿಗಳು ಮತ್ತು ನನ್ನ ಯುವ ಒಡನಾಡಿಗಳ ಆಲೋಚನೆಗಳು ಮತ್ತು ಸಲಹೆಗಳು ಅತ್ಯಂತ ಮುಖ್ಯ. ಬಜೆಟ್ ವೆಬಿನಾರ್ನ ಈ 4ನೇ ಕಲಾಪದಲ್ಲಿ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ."ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 09th, 10:15 am
ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಪೂರೈಸುವುದು ಎಂಬ ವಿಷಯ ಕುರಿತ ಬಜೆಟ್ ನಂತರದ 4ನೇ ಸರಣಿಯ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಕ್ಷೇತ್ರಗಳು ಈ ಗುರಿಗಳನ್ನು ಸಾಧಿಸುವ ಪ್ರಾಥಮಿಕ ಸಾಧನಗಳಾಗಿವೆ ಎಂದು ಒತ್ತಿ ಹೇಳಿದ ಮೋದಿ, ಬಜೆಟ್ ಘೋಷಣೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಬೇಕು ಎಂದು ತಜ್ಞರು ಮತ್ತು ನೀತಿ ನಿರೂಪಕರನ್ನು ಸ್ವಾಗತಿಸಿದರು. ಸಾರ್ವಜನಿಕ ಆಕಾಂಕ್ಷೆಗಳನ್ನು ಪೂರೈಸುವುದು ಕೇವಲ ಒಂದು ವಿಷಯವಲ್ಲ; ಇದು ಈ ಬಜೆಟ್ ಮತ್ತು ಈ ಸರ್ಕಾರದ ನಿರ್ಣಯದ ಪ್ರಮುಖ ಉದ್ದೇಶವಾಗಿದೆ ಎಂದು ಮೋದಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
February 09th, 10:30 am
ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ಮೊದಲ ಮತದಾನದಿಂದ ಸ್ಟಾರ್ಟ್ಅಪ್ ಇಂಡಿಯಾದವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಭಾರತದ ಯುವಕರನ್ನು ಆಚರಿಸುತ್ತಾರೆ.
January 25th, 11:30 am
ಈ ವರ್ಷದ ರಾಷ್ಟ್ರೀಯ ಮತದಾರರ ದಿನದಂದು ನಡೆದ ಮೊದಲ ಮನ್ ಕಿ ಬಾತ್ನಲ್ಲಿ, ಪ್ರಧಾನಿ ಮೋದಿ ಮತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಶ್ಲಾಘಿಸಿದರು. ಅವರು ಸ್ಟಾರ್ಟ್ಅಪ್ಗಳು, ನೀರಿನ ಸಂರಕ್ಷಣೆ, ಗುಣಮಟ್ಟ, ಸಂಸ್ಕೃತಿ ಮತ್ತು ಹಬ್ಬಗಳು ಮತ್ತು ಸ್ವಚ್ಛತೆಯಂತಹ ಪ್ರಮುಖ ವಿಷಯಗಳನ್ನು ಸಹ ಸ್ಪರ್ಶಿಸಿದರು. ಮುಂದಿನ ತಿಂಗಳು ನಡೆಯಲಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ಎತ್ತಿ ತೋರಿಸಿದರು, ಅಲ್ಲಿ ಪ್ರಪಂಚದಾದ್ಯಂತದ ತಜ್ಞರು ಭಾಗವಹಿಸುತ್ತಾರೆ.ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 11:00 am
ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.ಶ್ರೀಮದ್ ವಿಜಯರತ್ನ ಸುಂದರ್ ಸುರೀಶ್ವರ್ಜಿ ಮಹಾರಾಜ್ ಅವರ 500ನೇ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸಂದೇಶ
January 11th, 01:00 pm
ಈ ಪವಿತ್ರ ಸಮಾರಂಭದಲ್ಲಿ ನಮ್ಮ ಸ್ಫೂರ್ತಿಯ ಸೆಲೆಯಾದ ಪೂಜ್ಯ ಭುವನಭಾನು ಸುರೀಶ್ವರ್ ಜಿ ಮಹಾರಾಜ್ ಅವರ ಪಾದಗಳಿಗೆ ನಾನು ಮೊದಲು ನಮಸ್ಕರಿಸುತ್ತೇನೆ. ಈ ಸಮಾರಂಭದಲ್ಲಿ ಉಪಸ್ಥಿತರಿರುವ ಪ್ರಶಾಂತಮೂರ್ತಿ ಸುವಿಶಾಲ ಗಚ್ಛಾಧಿಪತಿ ಪೂಜ್ಯ ಶ್ರೀಮದ್ ವಿಜಯ್ ರಾಜೇಂದ್ರ ಸುರೀಶ್ವರ ಜೀ ಮಹಾರಾಜ್, ಪೂಜ್ಯ ಗಚ್ಛಾಧಿಪತಿ ಶ್ರೀ ಕಲ್ಪತರು ಸುರೀಶ್ವರ್ ಜಿ ಮಹಾರಾಜ್, ಸರಸ್ವತಿ ಕೃಪಾಪಾತ್ರ ಪರಮ ಪೂಜ್ಯ ಆಚಾರ್ಯ ಭಗವಂತ ಶ್ರೀಮದ್ ವಿಜಯರತ್ನ ಸುಂದರ ಸುರೀಶ್ವರ ಜೀ ಮಹಾರಾಜರು ಮತ್ತು ಇಲ್ಲಿ ನೆರೆದಿರುವ ಎಲ್ಲಾ ಸಾಧು ಸಂತರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಶ್ರೀಮದ್ ವಿಜಯರತ್ನ ಸುಂದರ್ ಸುಂದರ್ ಸುರೀಶ್ವರ್ಜಿ ಮಹಾರಾಜ್ ಅವರ 500ನೇ ಪುಸ್ತಕ ಬಿಡುಗಡೆ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
January 11th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಂದೇಶದ ಮೂಲಕ ಶ್ರೀಮದ್ ವಿಜಯರತ್ನ ಸುಂದರ್ ಸುಂದರ್ ಸುರೀಶ್ವರ್ಜಿ ಮಹಾರಾಜ್ ಅವರ 500ನೇ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ತಮ್ಮ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಈ ಪವಿತ್ರ ಸಂದರ್ಭದಲ್ಲಿ ತಾವು ಮೊದಲು ಪೂಜ್ಯ ಭುವನ್ ಭಾನುಸುರೀಶ್ವರ್ ಜೀ ಮಹಾರಾಜ್ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಪ್ರಶಾಂತಮೂರ್ತಿ ಸುವಿಶಾಲ್ ಗಚ್ಚಾಧಿಪತಿ ಪೂಜ್ಯ ಶ್ರೀಮದ್ ವಿಜಯ ರಾಜೇಂದ್ರಸುರೀಶ್ವರ್ ಜಿ ಮಹಾರಾಜ್, ಪೂಜ್ಯ ಗಚ್ಚಾಧಿಪತಿ ಶ್ರೀ ಕಲ್ಪತರುಸುರೀಶ್ವರ್ ಜೀ ಮಹಾರಾಜ್, ಸರಸ್ವತಿ ಕೃಪಾಪಾತ್ರ ಪರಂ ಪೂಜ್ಯ ಆಚಾರ್ಯ ಭಗವಂತ ಶ್ರೀಮದ್ ವಿಜಯರತ್ನಸುಂದರಸುರೀಶ್ವರ್ ಜೀ ಮಹಾರಾಜ್ ಮತ್ತು ಸಮಾರಂಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಸಂತರು ಮತ್ತು ಸಾಧ್ವಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಊರ್ಜಾ ಮಹೋತ್ಸವ ಸಮಿತಿಯ ಎಲ್ಲಾ ಸದಸ್ಯರನ್ನು ಅವರು ಶ್ಲಾಘಿಸಿದರು ಮತ್ತು ಅಭಿನಂದಿಸಿದರು.ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 03:35 pm
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 11:45 am
ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 28th, 11:30 am
ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!