
India is a living land with a vibrant culture: PM Modi at inauguration of Sri Sri Radha Madanmohanji Temple in Navi Mumbai
January 15th, 04:00 pm
PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.
PM Modi inaugurates the Sri Sri Radha Madanmohanji Temple of ISKCON in Navi Mumbai
January 15th, 03:30 pm
PM Modi inaugurated the Sri Sri Radha Madanmohanji Temple, an ISKCON project in Navi Mumbai. “India is an extraordinary and wonderful land, not just a piece of land bound by geographical boundaries, but a living land with a vibrant culture,” the Prime Minister exclaimed. He emphasised that the essence of this culture is spirituality, and to understand India, one must first embrace spirituality.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 13th, 02:10 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು
December 13th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್ರಾಜ್ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.ರಾಜಸ್ಥಾನದ ಚಿತ್ತೋರ್ಗಢದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
October 02nd, 11:58 am
ಇಂದು ನಾವು ಸ್ಪೂರ್ತಿದಾಯಕ ವ್ಯಕ್ತಿಗಳಾದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಗಳನ್ನು ಸ್ಮರಿಸುತ್ತೇವೆ. ನಿನ್ನೆ, ಅಕ್ಟೋಬರ್ 1 ರಂದು, ರಾಜಸ್ಥಾನ ಸೇರಿದಂತೆ ಇಡೀ ದೇಶವು ಸ್ವಚ್ಛತೆಯ ಕಡೆಗೆ ಮಹತ್ವದ ಉಪಕ್ರಮವನ್ನು ಪ್ರಾರಂಭಿಸಿತು. ಸ್ವಚ್ಛತಾ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸಿದ್ದಕ್ಕಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ರಾಜಸ್ಥಾನದ ಚಿತ್ತೋರ್ಗಢದಲ್ಲಿ ಸುಮಾರು 7,000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
October 02nd, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಚಿತ್ತೋರ್ಗಢದಲ್ಲಿ ಸುಮಾರು 7,000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ʻಮೆಹ್ಸಾನಾ - ಭಟಿಂಡಾ – ಗುರುದಾಸ್ಪುರ ಅನಿಲ ಪೈಪ್ನ್ʼ, ಅಬು ರಸ್ತೆಯಲ್ಲಿರುವ ʻಎಚ್ಪಿಸಿಎಲ್ʼನ ಎಲ್ಪಿಜಿ ಸ್ಥಾವರ, ಐಒಸಿಎಲ್ನ ಅಜ್ಮೀರ್ ಬಾಟ್ಲಿಂಗ್ ಸ್ಥಾವರದಲ್ಲಿ ಹೆಚ್ಚುವರಿ ಸಂಗ್ರಹಣೆ ಘಟಕ, ರೈಲ್ವೆ ಮತ್ತು ರಸ್ತೆ ಯೋಜನೆಗಳು, ನಾಥದ್ವಾರದಲ್ಲಿ ಪ್ರವಾಸೋದ್ಯಮ ಸೌಲಭ್ಯಗಳು ಮತ್ತು ಕೋಟಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಶಾಶ್ವತ ಕ್ಯಾಂಪಸ್ ಈ ಯೋಜನೆಗಳಲ್ಲಿ ಸೇರಿವೆ.ಅಕ್ಟೋಬರ್ 2ರಂದು ಚಿತ್ತೋರ್ಗಢ ಮತ್ತು ಗ್ವಾಲಿಯರ್ಗೆ ಭೇಟಿ ನೀಡಲಿರುವ ಪ್ರಧಾನಿ
October 01st, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್ 2ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ರಾಜಸ್ಥಾನದ ಚಿತ್ತೋರ್ಗಢದಲ್ಲಿ ಸುಮಾರು 7,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಮಂತ್ರಿಯವರು ಗ್ವಾಲಿಯರ್ ತಲುಪಲಿದ್ದು, ಅಲ್ಲಿ ಅವರು ಸುಮಾರು 19,260 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ.