Bihar has defeated lies and upheld the truth: PM Modi from BJP HQ post NDA’s major victory

November 14th, 07:30 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

After NDA’s landslide Bihar victory, PM Modi takes the centre stage at BJP HQ

November 14th, 07:00 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ

January 15th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್‌ ಅನುವಾದ

January 14th, 10:45 am

ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.

PM Modi addresses the 150th Foundation Day celebrations of India Meteorological Department

January 14th, 10:30 am

PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:30 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ ್ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ ್ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:00 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ್‍ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ್‍ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

2023 ಆಗಸ್ಟ್ 10ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ(ಗೊತ್ತುವಳಿ)ಕ್ಕೆ ಪ್ರಧಾನ ಮಂತ್ರಿ ಉತ್ತರ

August 10th, 04:30 pm

ಕಳೆದ 3 ದಿನಗಳಿಂದ ಗೌರವಾನ್ವಿತ ಹಲವು ಹಿರಿಯ ಸದಸ್ಯರು ತಮ್ಮ ಆಲೋಚನೆ, ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ. ಅವರ ಬಹುತೇಕ ಎಲ್ಲಾ ಅಭಿಪ್ರಾಯಗಳು ನನಗೆ ವಿವರವಾಗಿ ಮುಟ್ಟಿವೆ. ಕೆಲವು ಭಾಷಣಗಳನ್ನು ನಾನೇ ಕೇಳಿದ್ದೇನೆ. ಗೌರವಾನ್ವಿತ ಸಭಾಧ್ಯಕ್ಷರೇ, ಇಂದು, ನಮ್ಮ ಸರ್ಕಾರದ ಮೇಲೆ ಪದೇಪದೆ ಅಪಾರ ನಂಬಿಕೆ ತೋರಿಸುತ್ತಿರುವ ಈ ದೇಶದ ಕೋಟ್ಯಂತರ ನಾಗರಿಕರಿಗೆ ನನ್ನ ಕೃತಜ್ಞತೆ ವ್ಯಕ್ತಪಡಿಸಲು ನಾನು ಇಲ್ಲಿದ್ದೇನೆ. ಗೌರವಾನ್ವಿತ ಸ್ಪೀಕರ್, ದೇವರು ತುಂಬಾ ಕರುಣಾಮಯಿ ಎಂದು ಹೇಳಲಾಗುತ್ತದೆ. ಅವನು ತನ್ನ ಆಸೆಗಳನ್ನು ಯಾರಾದರೂ ಅಥವಾ ಇನ್ನೊಬ್ಬರ ಮೂಲಕ ಪೂರೈಸುತ್ತಾನೆ, ಯಾರನ್ನಾದರೂ ಮಾಧ್ಯಮವನ್ನಾಗಿ ಮಾಡುವುದು ದೇವರ ಇಚ್ಛೆಯಾಗಿದೆ. ದೇವರ ಇಚ್ಛೆಯಂತೆ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದೇವರ ಆಶೀರ್ವಾದ ಎಂದು ಭಾವಿಸುತ್ತೇನೆ. 2018ರಲ್ಲಿ ವಿರೋಧ ಪಕ್ಷದ ನನ್ನ ಸಹೋದ್ಯೋಗಿಗಳು ನನ್ನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದಾಗ ದೇವರ ಆಜ್ಞೆಯೂ ಇದೇ ಆಗಿತ್ತು. ಅವಿಶ್ವಾಸ ಗೊತ್ತುವಳಿಯು ನಮ್ಮ ಸರ್ಕಾರಕ್ಕೆ ಸದನದ ಪರೀಕ್ಷೆ ಅಲ್ಲ, ಬದಲಿಗೆ ಅದು ಅವರ ಸ್ವಂತ ಅಂತಸ್ತಿನ ಪರೀಕ್ಷೆ ಎಂದು ನಾನು ಆ ಸಮಯದಲ್ಲಿ ಹೇಳಿದ್ದೆ. ಆ ದಿನವೂ ಹೇಳಿದ್ದೆ. ಮತ್ತು ಅದು ಬದಲಾದಂತೆ, ಪ್ರತಿಪಕ್ಷಗಳು ಮತದಾನ ನಡೆದಾಗ ಅವರು ಹೊಂದಿದ್ದಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ನಾವು ಜನರ ಬಳಿಗೆ (ಮತ ಕೇಳಲು) ಹೋದಾಗ, ಜನರು ಪೂರ್ಣ ಬಲದಿಂದ ಅವರ ಮೇಲೆ ಅವಿಶ್ವಾಸ ಘೋಷಿಸಿದರು. ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು. ಚುನಾವಣೆಯಲ್ಲಿ ಬಿಜೆಪಿಯೂ ಸಹ ಹೆಚ್ಚು ಸ್ಥಾನಗಳನ್ನು ಗಳಿಸಿತು. ಒಂದು ರೀತಿಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದ್ದು, 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಅಭೂತಪೂರ್ವ ಗೆಲುವು ಸಾಧಿಸಲು ನೀವೆಲ್ಲಾ ನಿರ್ಧರಿಸಿದ್ದೀರಿ ಎಂದು ನಾನು ಇಂದೇ ನೋಡುತ್ತಿದ್ದೇನೆ.

ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿಗೆ ಪ್ರಧಾನಿಗಳಿಂದ ಉತ್ತರ

August 10th, 04:00 pm

ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಪದೇ ಪದೇ ತೋರಿಸಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದರು. 2018ರಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ತಂದಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಇದು ಸರ್ಕಾರದ ಪಾಲಿಗೆ ವಿಶ್ವಾಸಮತ ನಿರ್ಣಯವಲ್ಲ, ಬದಲಿಗೆ ಸದನದಲ್ಲಿ ಅದನ್ನು ಮಂಡಿಸಿದವರ ಪಾಲಿಗೇ ಅವಿಶ್ವಾಸ ನಿರ್ಣಯ ಎಂದರು. ನಾವು 2019ರಲ್ಲಿ ಚುನಾವಣೆಗೆ ಹೋದಾಗ, ಪ್ರತಿಪಕ್ಷಗಳ ಮೇಲೆ ಜನರು ಅತ್ಯಂತ ಬಲವಾದ ಅವಿಶ್ವಾಸವನ್ನು ಪ್ರದರ್ಶಿಸಿದರು ಎಂದು ಪ್ರಧಾನಿ ಹೇಳಿದರು. ಎನ್‌ಡಿಎ ಮತ್ತು ಬಿಜೆಪಿ ಎರಡೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿವೆ ಎಂದು ಒತ್ತಿ ಹೇಳಿದರು. ಒಂದು ರೀತಿಯಲ್ಲಿ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಸರ್ಕಾರದ ಪಾಲಿಗೆ ಅದೃಷ್ಟ ಎಂದು ಪ್ರಧಾನಿ ಬಣ್ಣಿಸಿದರು. ಜನರ ಆಶೀರ್ವಾದದಿಂದ ಎನ್‌ಡಿಎ ಮತ್ತು ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯುತ್ತವೆ ಮತ್ತು 2024ರಲ್ಲಿ ವಿಜಯಶಾಲಿಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

July 30th, 11:30 am

'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.

ಸೌರಾಷ್ಟ್ರ ತಮಿಳು ಸಂಗಮದಲ್ಲಿ ಭಾಗವಹಿಸಿದವರಿಗೆ ಶುಭ ಕೋರಿದ ಪ್ರಧಾನಮಂತ್ರಿ

April 17th, 10:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸೌರಾಷ್ಟ್ರ ತಮಿಳು ಸಂಗಮದಲ್ಲಿ ಪಾಲ್ಗೊಂಡ ಜನತೆಗೆ ಶುಭ ಕೋರಿದ್ದಾರೆ.

ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಏಕೈಕ ಪ್ಯಾನ್ ಇಂಡಿಯಾ ಪಕ್ಷ: ಪ್ರಧಾನಿ ಮೋದಿ

March 28th, 06:37 pm

ಬಿಜೆಪಿಯ ವಸತಿ ಸಂಕೀರ್ಣ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 2018 ರಲ್ಲಿ ನಾನು ಈ ಕೇಂದ್ರ ಕಚೇರಿಯನ್ನು ಉದ್ಘಾಟಿಸಲು ಬಂದಾಗ, ಈ ಕಚೇರಿಯ ಆತ್ಮ ನಮ್ಮ ಕಾರ್ಯಕರ್ತರು ಎಂದು ಹೇಳಿದ್ದೆ. ಇಂದು ನಾವು ಈ ಕಚೇರಿಯನ್ನು ವಿಸ್ತರಿಸುವಾಗ, ಇದು ಕೇವಲ ಕಟ್ಟಡದ ವಿಸ್ತರಣೆಯಲ್ಲ. ಬದಲಿಗೆ, ಇದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಕನಸುಗಳ ವಿಸ್ತರಣೆಯಾಗಿದೆ, ಇದು ಬಿಜೆಪಿಯ ಸೇವೆಯ ಸಂಕಲ್ಪದ ವಿಸ್ತರಣೆಯಾಗಿದೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 28th, 06:36 pm

ಬಿಜೆಪಿಯ ವಸತಿ ಸಂಕೀರ್ಣ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 2018 ರಲ್ಲಿ ನಾನು ಈ ಕೇಂದ್ರ ಕಚೇರಿಯನ್ನು ಉದ್ಘಾಟಿಸಲು ಬಂದಾಗ, ಈ ಕಚೇರಿಯ ಆತ್ಮ ನಮ್ಮ ಕಾರ್ಯಕರ್ತರು ಎಂದು ಹೇಳಿದ್ದೆ. ಇಂದು ನಾವು ಈ ಕಚೇರಿಯನ್ನು ವಿಸ್ತರಿಸುವಾಗ, ಇದು ಕೇವಲ ಕಟ್ಟಡದ ವಿಸ್ತರಣೆಯಲ್ಲ. ಬದಲಿಗೆ, ಇದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಕನಸುಗಳ ವಿಸ್ತರಣೆಯಾಗಿದೆ, ಇದು ಬಿಜೆಪಿಯ ಸೇವೆಯ ಸಂಕಲ್ಪದ ವಿಸ್ತರಣೆಯಾಗಿದೆ.

ಗುಜರಾತ್ ಮತ್ತು ತಮಿಳುನಾಡು ನಡುವಿನ ಪ್ರಾಚೀನ ಬಾಂಧವ್ಯವನ್ನು ಎಸ್ ಟಿ ಸಂಗಮಂ ಆಚರಿಸುತ್ತಿದೆ: ಪ್ರಧಾನಮಂತ್ರಿ

March 19th, 08:49 pm

ಸೌರಾಷ್ಟ್ರ ತಮಿಳು ಸಂಗಮಂ ಅಡಿಯಲ್ಲಿ ಗುಜರಾತ್ ಮತ್ತು ತಮಿಳುನಾಡು ನಡುವೆ ಇರುವ ಬಾಂಧವ್ಯವನ್ನು ಆಚರಿಸುತ್ತಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಶಂಸಿಸಿದ್ದಾರೆ. ಎಸ್ಟಿ ಸಂಗಮಂ, ‘ಏಕ್ ಭಾರತ್ ಶ್ರೇಷ್ಠ ಭಾರತ್’ ಅನ್ನು ಆಚಾರಿಸುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

New India is moving ahead with the mantra of Intent, Innovation & Implementation: PM at DefExpo 2022

October 19th, 10:05 am

PM Modi inaugurated the DefExpo22 at Mahatma Mandir Convention and Exhibition Centre in Gandhinagar, Gujarat. PM Modi acknowledged Gujarat’s identity with regard to development and industrial capabilities. “This Defence Expo is giving a new height to this identity”, he said. The PM further added that Gujarat will emerge as a major centre of the defence industry in the coming days.