ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ

May 31st, 11:30 am

ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ಏಷ್ಯನ್ ಗೇಮ್ಸ್ ನ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರಿಗೆ ಪ್ರಧಾನಿ ಅಭಿನಂದನೆ

October 03rd, 11:34 pm

ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಡೆಕಾಥ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಭಾರತದ ಮೊದಲ ಹೈ ಜಂಪ್ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ಅಭಿನಂದಿಸಿದ್ದಾರೆ

August 04th, 09:55 am

ಭಾರತದ ಮೊದಲ ಹೈ ಜಂಪ್ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಹೈಜಂಪ್‌ನಲ್ಲಿ ತೇಜಸ್ವಿನ್ ಶಂಕರ್ ಅವರ ಕಂಚಿನ ಕಾಮನ್‌ವೆಲ್ತ್ ಗೇಮ್ಸ್, 2022 ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಭಾರತದ ಮೊದಲನೆಯದು.