ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ - ಪ್ರಧಾನಮಂತ್ರಿ ಖಂಡನೆ

December 14th, 05:23 pm

ಯಹೂದಿಗಳ ಹಬ್ಬವಾದ ಹನುಕ್ಕಾದ ಮೊದಲ ದಿನವನ್ನು ಆಚರಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ

December 05th, 05:43 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್‌ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ಸಮ್ಮೇಳನದಲ್ಲಿ ಭಾಗಿ

November 27th, 12:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್‌ಗಢದ ರಾಯ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

2025ರ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

November 23rd, 09:44 pm

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್‌ ನಲ್ಲಿ ಕೆನಡಾದ ಕನನಾಸ್ಕಿಸ್‌ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

November 23rd, 12:45 pm

ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ

November 23rd, 12:30 pm

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

November 21st, 10:43 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರು ಇಂದು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು. 2020ರಲ್ಲಿ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಏರಿದ ನಂತರ ಕಳೆದ ಐದು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಹಕಾರವನ್ನು ಗಾಢವಾಗಿಸುವ ಮತ್ತು ವೈವಿಧ್ಯಗೊಳಿಸಿದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ಅಲ್ಬನೀಸ್ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಾಯಕರು ಬದ್ಧರಾಗಿದ್ದಾರೆ.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಕುರಿತು ಸಂಪುಟ ನಿರ್ಣಯ ಅಂಗೀಕರಿಸಿತು

November 12th, 08:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025ರ ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟದ ಭಯೋತ್ಪಾದಕ ಘಟನೆಯಲ್ಲಿ ಜೀವಹಾನಿಯಾದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿತು. ಘಟನೆಯಲ್ಲಿ ಬಲಿಯಾದ ಅಮಾಯಕ ಜೀವಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಸಚಿವ ಸಂಪುಟ ಎರಡು ನಿಮಿಷಗಳ ಮೌನ ಆಚರಿಸಿತು.

ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 07th, 10:00 am

ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

November 07th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

Mahagathbandhan is a bundle of lies: PM Modi in Arrah, Bihar

November 02nd, 02:00 pm

Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.

PM Modi addresses large public gatherings in Arrah and Nawada, Bihar

November 02nd, 01:45 pm

Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.

ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 01:30 pm

ಛತ್ತೀಸ್‌ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್‌ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್‌ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್‌ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್‌ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 01st, 01:00 pm

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಇಂದು ಛತ್ತೀಸ್‌ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್‌ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್‌ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್‌ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್‌ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 07:00 pm

ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.