ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
June 16th, 02:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.ಸೈಪ್ರಸ್ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 15th, 11:10 pm
ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.ಏಪ್ರಿಲ್ 26 ರಂದು ಕಮಲದ ಗುಂಡಿಗೆ ನಿಮ್ಮ ಮತವು ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಚಳುವಳಿಯನ್ನು ಬಲಪಡಿಸುತ್ತದೆ: ಅಟ್ಟಿಂಗಲ್ನಲ್ಲಿ ಪ್ರಧಾನ ಮಂತ್ರಿ
April 15th, 11:35 am
ಅಟ್ಟಿಂಗಲ್ನಲ್ಲಿ ನಡೆದ ಎರಡನೇ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ತನ್ನ ಸಂಕಲ್ಪ ಪತ್ರದಲ್ಲಿ ನಮ್ಮ ಪರಂಪರೆಯೊಂದಿಗೆ ಜಾಗತಿಕ ಪ್ರವಾಸಿಗರನ್ನು ಸಂಪರ್ಕಿಸುತ್ತೇವೆ ಮತ್ತು ನಮ್ಮ ಪರಂಪರೆಯ ಮೇಲೆ ವಿಶ್ವ ಪರಂಪರೆಯ ಸ್ಥಾನಮಾನವನ್ನು ನೀಡುತ್ತೇವೆ ಎಂದು ಘೋಷಿಸಿದೆ. ಕೇರಳದಲ್ಲಿ ಇದು ಸಂಭವಿಸುವ ದೊಡ್ಡ ಸಾಧ್ಯತೆಯಿದೆ. ಬಿಜೆಪಿಯ ಯೋಜನೆಯು ಕೇರಳದಲ್ಲಿ ಪರಿಸರ ಪ್ರವಾಸೋದ್ಯಮಕ್ಕಾಗಿ ಹೊಸ ಕೇಂದ್ರಗಳನ್ನು ಸ್ಥಾಪಿಸುತ್ತದೆ, ಇದು ಮಹಿಳೆಯರಿಗೆ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಅವರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ .ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್ನಲ್ಲಿ ಸಾರ್ವಜನಿಕ ಸಭೆಗಳಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 15th, 11:00 am
ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್ನಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.PM expresses happiness over Northeast emerging as top tourist destination
April 04th, 10:12 am
The Prime Minister, Shri Narendra Modi has expressed his happiness over the emergence of Northeast as top tourist destination. Shri Modi also said that increased tourism means increased prosperity in the region.'ಮಿಷನ್ ಮೋಡ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
March 03rd, 10:21 am
ಈ ವೆಬಿನಾರ್ ನಲ್ಲಿ ಉಪಸ್ಥಿತರಿರುವ ಎಲ್ಲ ಗಣ್ಯರಿಗೆ ಸ್ವಾಗತ. ಇಂದಿನ ನವ ಭಾರತವು ಹೊಸ ಕೆಲಸದ ಸಂಸ್ಕೃತಿಯೊಂದಿಗೆ ಮುಂದುವರಿಯುತ್ತಿದೆ. ಈ ವರ್ಷದ ಬಜೆಟ್ ಸಾಕಷ್ಟು ಚಪ್ಪಾಳೆಯನ್ನು ಪಡೆದಿದೆ ಮತ್ತು ದೇಶದ ಜನರು ಇದನ್ನು ಬಹಳ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಅದೇ ಹಳೆಯ ಕೆಲಸದ ಸಂಸ್ಕೃತಿ ಮುಂದುವರಿದಿದ್ದರೆ, ಅಂತಹ ಬಜೆಟ್ ವೆಬಿನಾರ್ ಗಳ ಬಗ್ಗೆ ಯಾರೂ ಯೋಚಿಸುತ್ತಿರಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಪ್ರತಿಯೊಬ್ಬ ಮಧ್ಯಸ್ಥಗಾರರೊಂದಿಗೆ ವಿವರವಾಗಿ ಚರ್ಚಿಸುತ್ತದೆ ಮತ್ತು ಅವರನ್ನು ಜೊತೆಯಲ್ಲಿ ಕರೆದೊಯ್ಯಲು ಪ್ರಯತ್ನಿಸುತ್ತದೆ. ಈ ವೆಬಿನಾರ್ ಬಜೆಟ್ ನ ಗರಿಷ್ಠ ಫಲಿತಾಂಶವನ್ನು ಪಡೆಯಲು, ಬಜೆಟ್ ಪ್ರಸ್ತಾಪಗಳನ್ನು ನಿಗದಿತ ಸಮಯದ ಚೌಕಟ್ಟಿನೊಳಗೆ ಅನುಷ್ಠಾನಗೊಳಿಸುವಲ್ಲಿ ಮತ್ತು ಬಜೆಟ್ ಗುರಿಗಳನ್ನು ಸಾಧಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಮುಖ್ಯಸ್ಥನಾಗಿ ಕೆಲಸ ಮಾಡುವಾಗ ನನಗೆ 20 ವರ್ಷಗಳಿಗಿಂತ ಹೆಚ್ಚು ಅನುಭವವಿದೆ ಎಂದು ನಿಮಗೆ ತಿಳಿದಿದೆ. ಈ ಅನುಭವದ ಸಾರವೇನೆಂದರೆ, ಎಲ್ಲಾ ಪಾಲುದಾರರು ನೀತಿ ನಿರ್ಧಾರದಲ್ಲಿ ತೊಡಗಿಸಿಕೊಂಡಾಗ, ಅಪೇಕ್ಷಿತ ಫಲಿತಾಂಶವೂ ಕಾಲಮಿತಿಯೊಳಗೆ ಬರುತ್ತದೆ. ಕಳೆದ ಕೆಲವು ದಿನಗಳಲ್ಲಿ ನಡೆದ ವೆಬಿನಾರ್ ಗಳಲ್ಲಿ ಸಾವಿರಾರು ಜನರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಪ್ರತಿಯೊಬ್ಬರೂ ದಿನವಿಡೀ ಚಿಂತನ-ಮಂಥನ ಮಾಡುತ್ತಿದ್ದರು ಮತ್ತು ಭವಿಷ್ಯಕ್ಕಾಗಿ ಬಹಳ ಮುಖ್ಯವಾದ ಸಲಹೆಗಳು ಬಂದವು ಎಂದು ನಾನು ಹೇಳಬಲ್ಲೆ. ಪ್ರತಿಯೊಬ್ಬರೂ ಬಜೆಟ್ ಮೇಲೆ ಕೇಂದ್ರೀಕರಿಸಿದರು ಮತ್ತು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಉತ್ತಮ ಸಲಹೆಗಳಿವೆ. ಇಂದು ನಾವು ದೇಶದ ಪ್ರವಾಸೋದ್ಯಮ ಕ್ಷೇತ್ರದ ಪರಿವರ್ತನೆಗಾಗಿ ಈ ಬಜೆಟ್ ವೆಬಿನಾರ್ ನಡೆಸುತ್ತಿದ್ದೇವೆ.'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 03rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ 'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಎಂಬ ವಿಷಯದ ಕುರಿತು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನನಕ್ಕೆ ತರಲು ಕಲ್ಪನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವ 12 ಬಜೆಟೋತ್ತರ ವೆಬಿನಾರ್ ಗಳ ಸರಣಿಯಲ್ಲಿ ಇದು ಏಳನೆಯದಾಗಿದೆ.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.This is Uttarakhand's decade: PM Modi in Haldwani
December 30th, 01:55 pm
Prime Minister Narendra Modi inaugurated and laid the foundation stone of 23 projects worth over Rs 17500 crore in Uttarakhand. In his remarks, PM Modi said, The strength of the people of Uttarakhand will make this decade the decade of Uttarakhand. Modern infrastructure in Uttarakhand, Char Dham project, new rail routes being built, will make this decade the decade of Uttarakhand.ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
December 30th, 01:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು 1976 ರಲ್ಲಿ ಮೊದಲ ಬಾರಿಗೆ ರೂಪುಗೊಂಡ ಮತ್ತು ಅನೇಕ ವರ್ಷಗಳವರೆಗೆ ನೆನೆಗುದಿಗೆ ಬಿದ್ದಿದ್ದ ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. 8700 ಕೋಟಿ ರೂ.ಗಳ ರಸ್ತೆ ವಲಯದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.ಲಕ್ನೋದಲ್ಲಿ ಎಕ್ಸ್ಪೋ ಮತ್ತು ಆಜಾ಼ದಿ@75 ಸಮ್ಮೇಳನದ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 05th, 10:31 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಲಕ್ನೋದ ಸಂಸದ ಮತ್ತು ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಹರ್ದೀಪ್ ಸಿಂಗ್ ಪುರಿ ಜೀ, ಮಹೇಂದ್ರ ನಾಥ ಪಾಂಡೇ ಜೀ, ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯಾ ಜೀ, ಶ್ರೀ ದಿನೇಶ ಶರ್ಮಾ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕೌಶಲ್ ಕಿಶೋರ್ ಜೀ, ರಾಜ್ಯ ಸರಕಾರದ ಸಚಿವರೇ, ಸಂಸದರೇ, ಶಾಸಕರೇ, ದೇಶದ ವಿವಿಧ ಭಾಗಗಳ ಎಲ್ಲಾ ಗೌರವಾನ್ವಿತ ಸಚಿವರೇ, ಇತರ ಎಲ್ಲಾ ಗಣ್ಯರೇ ಮತ್ತು ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ ಮತ್ತು ಸಹೋದರರೇ,ಲಕ್ನೋದಲ್ಲಿ ‘ಆಜಾದಿ@75- ನವ ನಗರ ಭಾರತ: ನಗರ ಚಿತ್ರಣದಲ್ಲಿ ಪರಿವರ್ತನೆ’ ಕುರಿತ ಸಮ್ಮೇಳನ ಮತ್ತು ಎಕ್ಸ್ಪೋ ಉದ್ಘಾಟಿಸಿದ ಪ್ರಧಾನಮಂತ್ರಿ
October 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲಕ್ನೋದಲ್ಲಿ ‘ಆಜಾದಿ@75-ಹೊಸ ನಗರ ಭಾರತ: ನಗರ ಚಿತ್ರಣದ ಪರಿವರ್ತನೆ’ಸಮ್ಮೇಳನ ಮತ್ತು ಎಕ್ಸ್ಪೋವನ್ನು ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಶ್ರೀ ಹರ್ದೀಪ್ ಪುರಿ, ಶ್ರೀ ಮಹೇಂದ್ರ ನಾಥ್ ಪಾಂಡೆ, ಶ್ರೀ ಕೌಶಲ್ ಕಿಶೋರ್, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Everybody has seen how the UDF and LDF are threatening the traditions and religious practices of the people in Kerala: PM Modi
April 18th, 08:41 pm
Prime Minister Narendra Modi addressed a major public meeting in Thiruvananthapuram in Kerala today.