Cabinet approves upgradation of National Highway-56 sections in Gujarat at Rs.4583.64 Crore

February 14th, 01:02 pm

The Cabinet Committee on Economic Affairs, chaired by PM Modi, has approved the project for the construction of 4-lane sections in Gujarat with a total project length of 107.67 km, costing Rs. 4583.64 crore. The project will improve connectivity to tribal areas, thereby supporting economic growth and development of the region. It will also enhance connectivity to the Statue of Unity.

'ಮಿಷನ್ ಮೋಡ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

March 03rd, 10:21 am

ಈ ವೆಬಿನಾರ್ ನಲ್ಲಿ ಉಪಸ್ಥಿತರಿರುವ ಎಲ್ಲ ಗಣ್ಯರಿಗೆ ಸ್ವಾಗತ. ಇಂದಿನ ನವ ಭಾರತವು ಹೊಸ ಕೆಲಸದ ಸಂಸ್ಕೃತಿಯೊಂದಿಗೆ ಮುಂದುವರಿಯುತ್ತಿದೆ. ಈ ವರ್ಷದ ಬಜೆಟ್ ಸಾಕಷ್ಟು ಚಪ್ಪಾಳೆಯನ್ನು ಪಡೆದಿದೆ ಮತ್ತು ದೇಶದ ಜನರು ಇದನ್ನು ಬಹಳ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಅದೇ ಹಳೆಯ ಕೆಲಸದ ಸಂಸ್ಕೃತಿ ಮುಂದುವರಿದಿದ್ದರೆ, ಅಂತಹ ಬಜೆಟ್ ವೆಬಿನಾರ್ ಗಳ ಬಗ್ಗೆ ಯಾರೂ ಯೋಚಿಸುತ್ತಿರಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಪ್ರತಿಯೊಬ್ಬ ಮಧ್ಯಸ್ಥಗಾರರೊಂದಿಗೆ ವಿವರವಾಗಿ ಚರ್ಚಿಸುತ್ತದೆ ಮತ್ತು ಅವರನ್ನು ಜೊತೆಯಲ್ಲಿ ಕರೆದೊಯ್ಯಲು ಪ್ರಯತ್ನಿಸುತ್ತದೆ. ಈ ವೆಬಿನಾರ್ ಬಜೆಟ್ ನ ಗರಿಷ್ಠ ಫಲಿತಾಂಶವನ್ನು ಪಡೆಯಲು, ಬಜೆಟ್ ಪ್ರಸ್ತಾಪಗಳನ್ನು ನಿಗದಿತ ಸಮಯದ ಚೌಕಟ್ಟಿನೊಳಗೆ ಅನುಷ್ಠಾನಗೊಳಿಸುವಲ್ಲಿ ಮತ್ತು ಬಜೆಟ್ ಗುರಿಗಳನ್ನು ಸಾಧಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಮುಖ್ಯಸ್ಥನಾಗಿ ಕೆಲಸ ಮಾಡುವಾಗ ನನಗೆ 20 ವರ್ಷಗಳಿಗಿಂತ ಹೆಚ್ಚು ಅನುಭವವಿದೆ ಎಂದು ನಿಮಗೆ ತಿಳಿದಿದೆ. ಈ ಅನುಭವದ ಸಾರವೇನೆಂದರೆ, ಎಲ್ಲಾ ಪಾಲುದಾರರು ನೀತಿ ನಿರ್ಧಾರದಲ್ಲಿ ತೊಡಗಿಸಿಕೊಂಡಾಗ, ಅಪೇಕ್ಷಿತ ಫಲಿತಾಂಶವೂ ಕಾಲಮಿತಿಯೊಳಗೆ ಬರುತ್ತದೆ. ಕಳೆದ ಕೆಲವು ದಿನಗಳಲ್ಲಿ ನಡೆದ ವೆಬಿನಾರ್ ಗಳಲ್ಲಿ ಸಾವಿರಾರು ಜನರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಪ್ರತಿಯೊಬ್ಬರೂ ದಿನವಿಡೀ ಚಿಂತನ-ಮಂಥನ ಮಾಡುತ್ತಿದ್ದರು ಮತ್ತು ಭವಿಷ್ಯಕ್ಕಾಗಿ ಬಹಳ ಮುಖ್ಯವಾದ ಸಲಹೆಗಳು ಬಂದವು ಎಂದು ನಾನು ಹೇಳಬಲ್ಲೆ. ಪ್ರತಿಯೊಬ್ಬರೂ ಬಜೆಟ್ ಮೇಲೆ ಕೇಂದ್ರೀಕರಿಸಿದರು ಮತ್ತು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಉತ್ತಮ ಸಲಹೆಗಳಿವೆ. ಇಂದು ನಾವು ದೇಶದ ಪ್ರವಾಸೋದ್ಯಮ ಕ್ಷೇತ್ರದ ಪರಿವರ್ತನೆಗಾಗಿ ಈ ಬಜೆಟ್ ವೆಬಿನಾರ್ ನಡೆಸುತ್ತಿದ್ದೇವೆ.

'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 03rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ 'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಎಂಬ ವಿಷಯದ ಕುರಿತು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನನಕ್ಕೆ ತರಲು ಕಲ್ಪನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವ 12 ಬಜೆಟೋತ್ತರ ವೆಬಿನಾರ್ ಗಳ ಸರಣಿಯಲ್ಲಿ ಇದು ಏಳನೆಯದಾಗಿದೆ.

ಕಾಶಿ ವಿಶ್ವನಾಥ ಧಾಮ ಉದ್ಘಾಟನೆಗೆ ಡಿ.13ರಂದು ವಾರಣಾಸಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ

December 12th, 03:49 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಡಿ.13–14ರಂದು ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಡಿ.13ರಂದು ಮಧ್ಯಾಹ್ನ ಒಂದು ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಶ್ರೀ ಕಾಶಿ ವಿಶ್ವನಾಥ ಧಾಮ್‌ ನ ಮೊದಲ ಹಂತದ ಯೋಜನೆಯನ್ನು 339 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ

August 20th, 11:01 am

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.

ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ

August 20th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 20 ರಂದು ಸೋಮನಾಥದಲ್ಲಿ ಪ್ರಧಾನ ಮಂತ್ರಿ ಅವರು ಬಹು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ

August 18th, 05:57 pm

ಪ್ರಧಾನ ಮಂತ್ರಿ ಶೀ ನರೇಂದ್ರ ಮೋದಿ ಅವರು ಆಗಸ್ಟ್‌ 20 ರಂದು 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೋಮನಾಥದಲ್ಲಿ ಬಹು ಯೋಜನೆಗಳನ್ನು ಕಾರ್ಯಾರಂಭಗೊಳಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೋಮನಾಥ ವಾಯುವಿಹಾರ, ಸೋಮನಾಥ ವಸ್ತು ಪ್ರದರ್ಶನ ಕೇಂದ್ರ ಮತ್ತು ದೇವಾಲಯದ ಹಳೆಯ ಮರುನಿರ್ಮಾಣ ಮಾಡಲಾದ ಸುತ್ತು ಪೌಳಿಯನ್ನು ಪ್ರಧಾನ ಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಪ್ರಧಾನ ಮಂತ್ರಿ ಅವರು ಶ್ರೀ ಪಾರ್ವತಿ ದೇವಾಲಯಕ್ಕೆ ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸುವರು.