ಅಮೆರಿಕ ಉಪಾಧ್ಯಕ್ಷರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 08th, 10:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಉಪಾಧ್ಯಕ್ಷರಾದ ಶ್ರೀ ಜೆ.ಡಿ. ವ್ಯಾನ್ಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್ಡಮ್ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆಂಡಿ ಬರ್ನಹ್ಯಾಮ್ ಅವರನ್ನು ಅಭಿನಂದಿಸಿದ್ದಾರೆ
July 21st, 08:09 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್ಡಮ್ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಆಂಡಿ ಬರ್ನ್ಹ್ಯಾಮ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
July 15th, 12:58 pm
ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ
July 11th, 08:06 am
ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್ನ ಆಕ್ಲೆಂಡ್ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ
July 11th, 08:03 am
ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
July 09th, 12:29 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.India-Australia Joint Statement on Energy Security
July 09th, 11:02 am
The India-Australia Joint Statement on Energy Security noted the two countries' deep concern over the situation in the Middle East. They shared their commitment to working together to strengthen energy supply chain resilience, including by deepening regional cooperation, accelerating the energy transition, promoting the uptake of renewable energy resources and upholding open trade arrangements for energy and liquid fuels.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
July 07th, 02:51 pm
ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 07th, 11:21 am
2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ಮೂರು ರಾಷ್ಟ್ರಗಳ ಅಧಿಕೃತ ಭೇಟಿಗೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
July 06th, 09:00 am
ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಶ್ರೀ ಪ್ರಬೊವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ ನಾನು ಜುಲೈ 6-8ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡುತ್ತಿದ್ದೇನೆ. 2018ರಲ್ಲಿ ನಾನು ಇಂಡೋನೇಷ್ಯಾಕ್ಕೆ ನೀಡಿದ ಮೊದಲ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಮಟ್ಟಕ್ಕೆ ಏರಿಸಲಾಗಿತ್ತು. ನಮ್ಮ ದ್ವಿಪಕ್ಷೀಯ ಸಂಬಂಧಗಳ ಉನ್ನತಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. 2025ರ ಜನವರಿ 26ರಂದು ನಮ್ಮ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿದ್ದ ಅಧ್ಯಕ್ಷ ಪ್ರಬೋವೊ ಅವರ ಅಧಿಕೃತ ಭಾರತ ಭೇಟಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತ ಮತ್ತು ಇಂಡೋನೇಷ್ಯಾ ಬಲವಾದ ನಾಗರಿಕ ಮತ್ತು ಜನ ಸಂಬಂಧಗಳನ್ನು ಹಂಚಿಕೊಂಡಿವೆ. ನನ್ನ ಭೇಟಿಯು ನಮ್ಮ ಬಹುಮುಖಿ ಪಾಲುದಾರಿಕೆಯ ಎಲ್ಲಾ ಅಂಶಗಳನ್ನು ಮತ್ತಷ್ಟು ಗಾಢಗೊಳಿಸುತ್ತದೆ. ಈ ಭೇಟಿಯ ಸಮಯದಲ್ಲಿ, ನಾನು ಇಂಡೋನೇಷ್ಯಾದಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸುತ್ತೇನೆ ಮತ್ತು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ಯೋಗ್ಯಕರ್ತಾದಲ್ಲಿರುವ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಲಿದ್ದೇನೆ. ಈ ದೇವಾಲಯವು ನಮ್ಮ ನಿಕಟ ಸಾಂಸ್ಕೃತಿಕ ಸಂಬಂಧಗಳಿಗೆ ಮತ್ತೊಂದು ಗಮನಾರ್ಹ ಸಾಕ್ಷಿಯಾಗಿದೆ.ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಉಪಕ್ರಮಗಳಿಗೆ ಹೆಚ್ಚು ಸಹಯೋಗದ ಶಕ್ತಿಯನ್ನು ನೀಡುವ ಇಂಗಿತವನ್ನು ತಮ್ಮ ಉತ್ಸಾಹದ ಮಾತುಗಳಲ್ಲಿ ವ್ಯಕ್ತಪಡಿಸಿದರು. ಬೇಸಿಗೆಯ ತೀವ್ರ ಬಿಸಿಲಿನ ಬಿಸಿಲಿನ ತಾಪವನ್ನು ಧೈರ್ಯದಿಂದ ನಿಭಾಯಿಸಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಬೃಹತ್ ಪ್ರಮಾಣದ ಜನಸಮೂಹದ ಪಾಲ್ಗೊಳ್ಳುವಿಕೆಯು ಪ್ರಸ್ತುತ ಆಡಳಿತಕ್ಕೆ ನೀಡಿರುವ ಬೆಂಬಲದ ದೃಢೀಕರಣವಾಗಿದೆ ಎಂದು ವ್ಯಾಖ್ಯಾನಿಸಿದರು. ಈ ಅಪಾರ ಬೆಂಬಲಕ್ಕಾಗಿ ನಾನು ರಾಜಸ್ಥಾನದ ಮಣ್ಣಿಗೆ ಸಂಪೂರ್ಣವಾಗಿ ಋಣಿಯಾಗಿದ್ದೇನೆ, ಇದು ನಮ್ಮ ಸರ್ಕಾರದ ಪ್ರಯತ್ನಗಳಲ್ಲಿ ನಿಮ್ಮ ಅತ್ಯುನ್ನತ ನಂಬಿಕೆಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ಪ್ರಧಾನಮಂತ್ರಿ ಭೇಟಿ
July 03rd, 08:42 pm
ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 6-8, 2026 ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಇಂಡೋನೇಷ್ಯಾಕ್ಕೆ ಪ್ರಧಾನಮಂತ್ರಿಯವರ ನಾಲ್ಕನೇ ಭೇಟಿ ಮತ್ತು ಮೇ 2018ರಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧಗಳು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿದ ನಂತರ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.ಇಂಧನ ಚೇತರಿಕೆಯ ಕುರಿತು ಭಾರತ ಗಣರಾಜ್ಯದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್ ನ ಆರ್ಥಿಕತೆ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯದ ನಡುವಿನ ಜಂಟಿ ಹೇಳಿಕೆ
July 02nd, 10:04 pm
ಜುಲೈ 2, 2026 ರಂದು, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಟಕೈಚಿ ಸನಾಯೆ ಅವರು ಭಾರತದ ನವದೆಹಲಿಯಲ್ಲಿ ಭೇಟಿಯಾದರು. ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಏಷ್ಯಾದ ಜವಾಬ್ದಾರಿಯುತ ಶಕ್ತಿಗಳು ಮತ್ತು ಪ್ರಮುಖ ಇಂಧನ ಬಳಕೆಯ ದೇಶಗಳಾಗಿ ಜಂಟಿಯಾಗಿ ಇಂಧನ ಚೇತರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ತಮ್ಮ ಜಂಟಿ ಸಂಕಲ್ಪದ ಆಶಯವನ್ನು ವ್ಯಕ್ತಪಡಿಸಿದರು.