PM to visit Rajasthan and Gujarat on 4 July

July 03rd, 11:25 am

PM Modi will visit Rajasthan and Gujarat on 4 July to launch development projects across multiple sectors. The Rajasthan visit includes the launch of the Modified UDAN Scheme in Jodhpur and the dedication of India’s first greenfield integrated Refinery-cum-Petrochemical Complex in Balotra. In Sanand, Gujarat, he will inaugurate the CG Semi OSAT facility with an annual production capacity of up to 5 billion semiconductor chips.

ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 22nd, 10:24 pm

ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು

June 22nd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 51ನೇ ʼಪ್ರಗತಿʼ ಸಭೆ ನಡೆಯಿತು

May 27th, 10:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು 'ಸೇವಾ ತೀರ್ಥ'ದಲ್ಲಿ 51ನೇ 'ಪ್ರಗತಿ' ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಐಸಿಟಿ (ಐಸಿಟಿ) ಆಧಾರಿತ, ಬಹು-ಮಾದರಿ ವೇದಿಕೆ ಇದಾಗಿದೆ.

ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

May 10th, 03:45 pm

ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 10th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ

May 05th, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್‌ ಎಫ್‌ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ

March 25th, 05:35 pm

ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್‌ ಡಿ ಸಿ) ಅನುಮೋದಿಸಿದೆ. ಇದು ಯು ಎನ್‌ ಎಫ್‌ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 23rd, 02:15 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಎದುರಾಗಿರುವ ಸವಾಲುಗಳ ಕುರಿತು ಮಾತನಾಡಲು ನಾನು ಈ ಗೌರವಾನ್ವಿತ ಸದನದ ಮುಂದೆ ಬಂದಿದ್ದೇನೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ತುಂಬಾ ಕಳವಳಕಾರಿಯಾಗಿದೆ. ಕಳೆದ 2-3 ವಾರಗಳಲ್ಲಿ ಶ್ರೀ ಜೈಶಂಕರ್ ಜಿ ಮತ್ತು ಶ್ರೀ ಹರ್‌ದೀಪ್ ಪುರಿ ಅವರು ಪರಿಷ್ಕೃತ ವಿಷಯಗಳನ್ನು ಸದನಕ್ಕೆ ಒದಗಿಸಿದ್ದಾರೆ. ಬಿಕ್ಕಟ್ಟು 3 ವಾರಗಳಿಗೂ ಹೆಚ್ಚು ಕಾಲ ಇರುವುದರಿಂದ, ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ಅದರ ಪ್ರತಿಕೂಲ ಪರಿಣಾಮವು ಸ್ಪಷ್ಟವಾಗಿದೆ. ಈ ಬಿಕ್ಕಟ್ಟಿಗೆ ತ್ವರಿತ ಪರಿಹಾರಕ್ಕಾಗಿ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಾ ಬಂದಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಒಡ್ಡುತ್ತಿರುವ ವ್ಯಾಪಕ ಸವಾಲುಗಳ ಬಗ್ಗೆ ಪ್ರಸ್ತಾಪಿಸಿದರು. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು ಮಾನವ ಜೀವಗಳ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಇದರ ಪರಿಹಾರದ ತುರ್ತು ಅಗತ್ಯವನ್ನು ಒತ್ತಿಹೇಳಿದರು. ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸುತ್ತಾ ಶ್ರೀ ಮೋದಿಯವರು, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸುವಂತೆ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಿದೆ ಎಂದು ಹೇಳಿದರು.

Tiruchirappalli turns out in huge numbers for PM Modi’s public meeting

March 11th, 06:00 pm

At a massive public meeting in Tamil Nadu’s Tiruchirappalli, Prime Minister Narendra Modi hailed Tiruchirappalli as a land of courage and faith, recalling the bravery of the Marudu Brothers and paying tribute to Major M. Saravanan for his sacrifice during the Kargil War. “Trichy is a land of courage and faith,” he said, adding that the Centre proudly honours Tamil Nadu’s culture and heritage. He also highlighted that C. P. Radhakrishnan, a son of the state, serves as the Vice President of India.

ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 08th, 03:54 pm

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

March 08th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.

"ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು" ವಿಷಯ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 03rd, 11:30 am

ಉತ್ಪಾದನೆ, ಸರಕು ಸಾಗಣೆ, ನಮ್ಮ ಎಂಎಸ್ಎಂಇಗಳು, ಸಣ್ಣ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು, ನಮ್ಮ ಸಣ್ಣ ಮತ್ತು ದೊಡ್ಡ ನಗರಗಳು - ಅವು ವಿಭಿನ್ನವಾಗಿ ಕಂಡುಬಂದರೂ - ಇವೆಲ್ಲವೂ ಆರ್ಥಿಕತೆಗೆ ಪರಸ್ಪರ ಸಂಬಂಧ ಹೊಂದಿರುವ ಆಧಾರಸ್ತಂಭಗಳಾಗಿವೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಉದಾಹರಣೆಗೆ, ಬಲಿಷ್ಠವಾದ ಉತ್ಪಾದನೆಯು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ಇದು ರಫ್ತುಗಳನ್ನು ಹೆಚ್ಚಿಸುತ್ತದೆ. ಸ್ಪರ್ಧಾತ್ಮಕ ಎಂಎಸ್ಎಂಇಗಳು ಚೇತರಿಕೆ(ನಮ್ಯತೆ) ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತವೆ. ಉತ್ತಮ ಸರಕು ಸಾಗಣೆ ವ್ಯವಸ್ಥೆಯು ವೆಚ್ಚವನ್ನು ಕಡಿಮೆ ಮಾಡುತ್ತದೆ. ಉತ್ತಮವಾಗಿ ಯೋಜಿಸಲಾದ ನಗರಗಳು ಹೂಡಿಕೆ ಮತ್ತು ಪ್ರತಿಭೆ ಎರಡನ್ನೂ ಆಕರ್ಷಿಸುತ್ತವೆ. ಈ ವರ್ಷದ ಬಜೆಟ್ ಈ ಎಲ್ಲಾ ಆಧಾರಸ್ತಂಭಗಳಿಗೆ ಹೆಚ್ಚಿನ ಶಕ್ತಿ ನೀಡಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು "ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು" ಎಂಬ ವಿಷಯದ ಕುರಿತಾದ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು

March 03rd, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಜೆಟ್ ವೆಬಿನಾರ್ ಸರಣಿಯ ಎರಡನೇ ಕಂತನ್ನು ಉದ್ದೇಶಿಸಿ ಮಾತನಾಡಿದರು, ಇದು ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿತ್ತು. ಕಳೆದ ವಾರದ ವೇಗವನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಮೊದಲ ವೆಬಿನಾರ್ ಅತ್ಯಂತ ಯಶಸ್ವಿಯಾಗಿದೆ ಮತ್ತು ಬಜೆಟ್ ನಿಬಂಧನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಸಲಹೆಗಳನ್ನು ನೀಡಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 22nd, 01:30 pm

ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ

February 22nd, 01:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.

ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಉದ್ಯಮ ನಾಯಕರ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 01:00 pm

ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್(ಪ್ರಭಾವ) ಶೃಂಗಸಭೆಗೆ ನಿಮ್ಮೆಲ್ಲರನ್ನೂ ಮತ್ತೊಮ್ಮೆ ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ಈ ಶೃಂಗಸಭೆಯು ಮಾನವ ಕೇಂದ್ರಿತ, ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ.