Prime Minister pays tribute to Bhagat Singh, Rajguru, and Sukhdev on Shaheed Diwas

March 23rd, 08:29 am

On the occasion of Shaheed Diwas, PM Modi paid rich tributes to the great freedom fighters Bhagat Singh, Rajguru and Sukhdev. Lauding their bravery, he observed that the martyrdom of these iconic heroes for the nation remains deeply etched in India's collective memory. He highlighted that they chose the path of sacrifice with conviction, placing the nation above their own lives..

Prime Minister pays tribute to Dr. Ram Manohar Lohia on his birth anniversary

March 23rd, 08:01 am

Prime Minister Shri Narendra Modi today paid rich tributes to the legendary socialist leader and thinker, Dr. Ram Manohar Lohia, on the occasion of his birth anniversary.

Prime Minister extends greetings on International Women’s Day, lauds the role of Nari Shakti in India’s progress

March 08th, 10:17 am

On International Women’s Day, PM Modi saluted the achievements of India’s Nari Shakti. He extended his heartfelt greetings to women and highlighted that women across every field are contributing with determination, strengthening the collective resolve to build a Viksit Bharat. He noted that women’s empowerment lies at the core of several schemes and initiatives of the Government.

Prime Minister pays tributes to Shri Biju Patnaik Ji on his birth anniversary

March 05th, 11:42 am

The Prime Minister, Shri Narendra Modi paid tributes to former Chief Minister of Odisha, Shri Biju Patnaik on his birth anniversary and remembered him for his passion towards furthering the progress of Odisha.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಹುತಾತ್ಮ ದಿನದ ಅಂಗವಾಗಿ ಚಂದ್ರಶೇಖರ ಆಜಾದ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ; ಅವರ ಜೀವನ ಪಾಠಗಳನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ

February 27th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹುತಾತ್ಮ ದಿನದ ಅಂಗವಾಗಿ ಮಹಾನ್ ಕ್ರಾಂತಿಕಾರಿ, ಭಾರತ ಮಾತೆಯ ವೀರ ಪುತ್ರ ಚಂದ್ರ ಶೇಖರ ಆಜಾದ್ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.

ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 26th, 11:25 am

ಮಹಾನ್ ಕ್ರಾಂತಿಕಾರಿ, ದೇಶಪ್ರೇಮಿ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 24th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭವಾದ ಇಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಧಾನಮಂತ್ರಿಯವರು ಅವರನ್ನು “ವರ್ಚಸ್ವಿ ನಾಯಕಿ ಮತ್ತು ಹೃದಯ ಹಾಗೂ ಮನಸ್ಸುಗಳಲ್ಲಿ ಶಾಶ್ವತ ಸ್ಥಾನ ಗಳಿಸಿದ ಅತ್ಯುತ್ತಮ ಆಡಳಿತಗಾರ್ತಿ” ಎಂದು ಸ್ಮರಿಸಿದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 19th, 08:48 am

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ, ಕಾರ್ಯತಂತ್ರದ ಚಿಂತಕ ಮತ್ತು ಸ್ವರಾಜ್ಯದ ಪ್ರತಿಪಾದಕರಿಗೆ ಗೌರವ ನಮನ ಸಲ್ಲಿಸಿದರು.

ಮಹರ್ಷಿ ದಯಾನಂದ ಸರಸ್ವತಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 12th, 10:17 am

ಮಹರ್ಷಿ ದಯಾನಂದ ಸರಸ್ವತಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣವನ್ನು ಉತ್ತೇಜಿಸುವಲ್ಲಿ ಮಾತ್ರವಲ್ಲದೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಶ್ರೀಮಂತಗೊಳಿಸುವಲ್ಲಿಯೂ ಅವರು ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. ಸಾಮಾಜಿಕ ಸುಧಾರಣೆಗಾಗಿ ಅವರ ಪ್ರಯತ್ನಗಳು ದೇಶದ ಜನರಿಗೆ ಸದಾ ಸ್ಫೂರ್ತಿಯ ಮೂಲವಾಗಿ ಮುಂದುವರಿಯುತ್ತವೆ ಎಂದು ಶ್ರೀ ಮೋದಿ ಅವರು ಹೇಳಿದರು.

ಆದಂಪುರ ವಿಮಾನ ನಿಲ್ದಾಣವನ್ನು 'ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಿರುವುದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಕಾಲಾತೀತ ಆದರ್ಶಗಳಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ: ಪ್ರಧಾನಮಂತ್ರಿ

February 01st, 06:21 pm

ಸಂತ ರವಿದಾಸ್ ಜಯಂತಿಯ ಶುಭ ಸಂದರ್ಭವಾದ ಇಂದು, ಆದಂಪುರ ವಿಮಾನ ನಿಲ್ದಾಣವನ್ನು ಇನ್ನು ಮುಂದೆ 'ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ' ಎಂದು ಕರೆಯಲು ನಿರ್ಧರಿಸಿರುವುದು ಅಪಾರ ಗೌರವ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಶಾಶ್ವತ ಆದರ್ಶಗಳಿಗೆ ಸಲ್ಲಿಸುವ ಅರ್ಹ ಗೌರವವಾಗಿದೆ ಮತ್ತು ಅವರ ಸಮಾನತೆ, ಕರುಣೆ ಹಾಗೂ ಸೇವೆಯ ಸಂದೇಶವು ನಮ್ಮೆಲ್ಲರಿಗೂ ಹೆಚ್ಚಿನ ಪ್ರೇರಣೆ ನೀಡುತ್ತಲೇ ಇರುತ್ತದೆ ಎಂದು ಶ್ರೀ ಮೋದಿ ಅವರು ಸೇರಿಸಿದ್ದಾರೆ.

ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

January 30th, 01:54 pm

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ

January 28th, 09:35 am

ಪಂಜಾಬ್ ಕೇಸರಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಲಾಲಾ ಲಜಪತ್ ರಾಯ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಭಾರತಾಂಬೆಯನ್ನು ಗುಲಾಮಗಿರಿಯ ಸರಪಳಿಯಿಂದ ಮುಕ್ತಗೊಳಿಸಲು ಅವರು ತಮ್ಮಲ್ಲಿದ್ದ ಎಲ್ಲವನ್ನೂ ಅರ್ಪಿಸಿದರು ಎಂದು ಮೋದಿ ಹೇಯವರು ಸ್ಮರಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

January 26th, 05:25 pm

2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಭಾರತ ರತ್ನ ಶ್ರೀ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 24th, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ʻಪರಾಕ್ರಮ್ ದಿವಸ್ʼ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 23rd, 08:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನೇತಾಜಿ ಅವರ ಅದಮ್ಯ ಧೈರ್ಯ, ಅಚಲ ಸಂಕಲ್ಪ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಸಾಟಿಯಿಲ್ಲದ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ನೇತಾಜಿ ಅವರ ನಿರ್ಭೀತ ನಾಯಕತ್ವ ಮತ್ತು ಆಳವಾದ ದೇಶಭಕ್ತಿಯು ಬಲಿಷ್ಠ ಭಾರತವನ್ನು ನಿರ್ಮಿಸಲು ಮುಂದಿನ ತಲೆಮಾರುಗಳಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು.

ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 23rd, 08:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ನಾಯಕ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಮಹಾರಾಷ್ಟ್ರದ ಸಾಮಾಜಿಕ-ರಾಜಕೀಯ ಭೂದೃಶ್ಯವನ್ನು ಆಳವಾಗಿ ರೂಪಿಸಿದ ಶ್ರೇಷ್ಠ ವ್ಯಕ್ತಿ ಎಂದು ಸ್ಮರಿಸಿದರು.

ಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 17th, 06:30 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,

ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು

January 17th, 06:00 pm

ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.