Prime Minister pays tributes to Shri Atal Bihari Vajpayee ji at ‘Sadaiv Atal’
December 25th, 11:21 am
On the occasion of birth anniversary of former PM Vajpayee, PM Modi paid tributes at Sadaiv Atal. He stated that Atal ji’s life was dedicated to public service and national service, and that he will always continue to inspire the people of the country.Prime Minister pays tributes to former Prime Minister Bharat Ratna Atal Bihari Vajpayee ji
December 25th, 08:43 am
The Prime Minister, Shri Narendra Modi has paid tributes to former Prime Minister Bharat Ratna Atal Bihari Vajpayee ji on his birth anniversary, today. Shri Modi stated that he dedicated his entire life to good governance and nation-building. He will always be remembered not only as an eloquent orator but also as a spirited poet. His personality, works, and leadership will continue to serve as a guiding path for the all-round development of the country, Shri Modi said.Prime Minister pays tributes to former PM Chaudhary Charan Singh ji on his birth anniversary
December 23rd, 09:39 am
On the birth anniversary of Former PM Bharat Ratna Chaudhary Charan Singh, PM Modi lauded his dedication to the welfare of the deprived sections of society and farmers. The PM also remarked that the country can never forget his contributions to nation-building.PM to visit Assam on 20-21 December
December 19th, 02:29 pm
PM Modi will visit Assam on 20-21 December to launch multiple development projects. In Guwahati, the PM will pay tribute to martyrs at Swahid Smarak Kshetra and also inaugurate the new terminal building of Lokapriya Gopinath Bardoloi International Airport. Additionally, the PM will perform the Bhoomipujan of the new brownfield Ammonia-Urea Fertilizer Project at Namrup, which will benefit farmers across the region.ರಾಷ್ಟ್ರದ ಅದಮ್ಯ ವೀರರಿಗೆ ಗೌರವ ಸಲ್ಲಿಸಲು ರಾಷ್ಟ್ರಪತಿ ಭವನದಲ್ಲಿ ಪರಮವೀರ ಗ್ಯಾಲರಿಯನ್ನು ಸ್ವಾಗತಿಸಿದ ಪ್ರಧಾನಮಂತ್ರಿ
December 17th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಪರಮವೀರ ಗ್ಯಾಲರಿಯನ್ನು ಸ್ವಾಗತಿಸಿದ್ದಾರೆ ಮತ್ತು ಇಲ್ಲಿ ಪ್ರದರ್ಶಿಸಲಾದ ಭಾವಚಿತ್ರಗಳು ರಾಷ್ಟ್ರದ ಅದಮ್ಯ ವೀರರಿಗೆ ಹೃತ್ಪೂರ್ವಕ ಗೌರವ ಮತ್ತು ಅವರ ತ್ಯಾಗಕ್ಕೆ ದೇಶದ ಕೃತಜ್ಞತೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಈ ಭಾವಚಿತ್ರಗಳು ತಮ್ಮ ಸರ್ವೋಚ್ಚ ತ್ಯಾಗದ ಮೂಲಕ ತಾಯ್ನಾಡನ್ನು ರಕ್ಷಿಸಿದ ಮತ್ತು ಭಾರತದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧರನ್ನು ಗೌರವಿಸುತ್ತವೆ ಎಂದು ಅವರು ಹೇಳಿದರು.ವಿಜಯ್ ದಿವಸ್ ಅಂಗವಾಗಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 16th, 09:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದಂದು ಧೈರ್ಯಶಾಲಿ ಸೈನಿಕರ ಧೈರ್ಯ ಮತ್ತು ತ್ಯಾಗದಿಂದ 1971ರಲ್ಲಿ ಭಾರತಕ್ಕೆ ಐತಿಹಾಸಿಕ ವಿಜಯ ಸಾಧಿಸುವುದನ್ನು ಸ್ಮರಿಸಿದರು. ಅವರ ದೃಢ ಸಂಕಲ್ಪ ಮತ್ತು ನಿಸ್ವಾರ್ಥ ಸೇವೆಯು ರಾಷ್ಟ್ರವನ್ನು ರಕ್ಷಿಸಿದೆ ಮತ್ತು ಭಾರತದ ಇತಿಹಾಸದಲ್ಲಿ ಹೆಮ್ಮೆಯ ಕ್ಷಣವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ಪುಣ್ಯತಿಥಿಯಂದು ‘ಭಾರತದ ಉಕ್ಕಿನ ಮನುಷ್ಯ’ನಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
December 15th, 08:44 am
ಇಂದು ಭಾರತದ ‘ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ವರ್ಷದ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವಪೂರ್ಣ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ದೇಶವನ್ನು ಏಕೀಕರಿಸಿ, ಭಾರತವನ್ನು ಏಕತೆಯೆಂಬ ಒಂದೇ ನೂಲಿನಲ್ಲಿ ನೇಯ್ದು ಕಟ್ಟಲು ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ್ದರು ಎಂದು ಬಣ್ಣಿಸಿದರು.2001ರ ಸಂಸತ್ ದಾಳಿಯ ಹುತಾತ್ಮರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
December 13th, 11:46 am
2001ರ ಡಿಸೆಂಬರ್ 13 ರಂದು ನಡೆದ ಹೇಯ ಭಯೋತ್ಪಾದಕ ದಾಳಿಯ ಸಮಯದಲ್ಲಿ ಭಾರತದ ಸಂಸತ್ತನ್ನು ರಕ್ಷಿಸುವಾಗ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದರು.ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:29 am
ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,ಸ್ವಾಹಿದ್ ದಿನದ ಸಂದರ್ಭದಲ್ಲಿ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
December 10th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಹಿದ್ ದಿನದ ಸಂದರ್ಭದಲ್ಲಿ ಐತಿಹಾಸಿಕ ಅಸ್ಸಾಂ ಚಳವಳಿಯ ಭಾಗವಾಗಿದ್ದ ಎಲ್ಲರ ಶೌರ್ಯವನ್ನು ಸ್ಮರಿಸಿದರು.ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 10th, 09:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು, ಬುದ್ಧಿಜೀವಿ ಮತ್ತು ರಾಜಕಾರಣಿಯಾಗಿ ಅವರನ್ನು ಸ್ಮರಿಸಿರುವ ಪ್ರಧಾನಮಂತ್ರಿ, ಮೌಲ್ಯಗಳನ್ನು ಸೃಷ್ಟಿಸುವಲ್ಲಿ ಮತ್ತು ಮನುಕುಲದ ಘನತೆಯನ್ನು ಉಲೇಖಿಸುವಲ್ಲಿ ನಂಬಿಕೆ ಇಟ್ಟಿದ್ದ ರಾಜಾಜಿ ಅವರು 20ನೇ ಶತಮಾನದ ಅತ್ಯಂತ ತೀಕ್ಷ್ಣ ಮನಸ್ಸಿನವರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದ್ದಾರೆ.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 06th, 09:11 am
ಇಂದು ಮಹಾಪರಿನಿರ್ವಾಣ ದಿವಸದ ಅಂಗವಾಗಿ ಪ್ರಧಾನಮಂತ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 03rd, 09:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ, ಎಂದು ಶ್ರೀ ಮೋದಿ ಹೇಳಿದ್ದಾರೆ.ಸಂವಿಧಾನ ದಿನದಂದು ಪ್ಯಾರಿಸ್ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
November 26th, 10:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನ ದಿನದಂದು ಪ್ಯಾರಿಸ್ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಸಂವಿಧಾನ ದಿನದಂದು, ಭಾರತದ ಸಂವಿಧಾನ ರಚನಾಕಾರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 26th, 10:15 am
'ಸಂವಿಧಾನ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸಂವಿಧಾನ ರಚನಾಕಾರರಿಗೆ ಗೌರವ ನಮನ ಸಲ್ಲಿಸಿದರು. 'ವಿಕಸಿತ ಭಾರತ'ವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನದಲ್ಲಿ ಸಂವಿಧಾನ ರಚನಕಾರರ ಮುನ್ನೋಟ ಮತ್ತು ದೂರದೃಷ್ಟಿಯು ರಾಷ್ಟ್ರಕ್ಕೆ ಪ್ರೇರಣೆಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 25th, 09:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿನದಂದು ಅವರ ಸಾಟಿಯಿಲ್ಲದ ಧೈರ್ಯ ಮತ್ತು ಅತ್ಯುನ್ನತ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದರು.ಲಚಿತ್ ದಿವಸ್ ಸಂದರ್ಭದಲ್ಲಿ ಲಚಿತ್ ಬೋರ್ಫುಕನ್ ಅವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು
November 24th, 11:45 am
ಲಚಿತ್ ದಿವಸ್ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಚಿತ್ ಬೋರ್ಫುಕನ್ ಅವರನ್ನು ಸ್ಮರಿಸಿ, ಅವರನ್ನು ಧೈರ್ಯ, ದೇಶಭಕ್ತಿ ಮತ್ತು ನಿಜವಾದ ನಾಯಕತ್ವದ ಸಂಕೇತ ಎಂದು ಬಣ್ಣಿಸಿದರು.ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.