ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
February 18th, 12:07 pm
ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 16th, 01:30 pm
ಇದೀಗ ಸ್ಟಾರ್ಟಪ್ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್ನ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್ನಲ್ಲಿರುವ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶ
August 23rd, 11:00 am
ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ವರ್ಷದ ಬಾಹ್ಯಾಕಾಶ ದಿನದ ವಿಷಯ 'ಆರ್ಯಭಟದಿಂದ ಗಗನಯಾನಕ್ಕೆ: ಪ್ರಾಚೀನ ಜ್ಞಾನದಿಂದ ಅನಂತ ಸಾಧ್ಯತೆಗಳಿಗೆ'. ಇದು ಭೂತಕಾಲದ ವಿಶ್ವಾಸ ಮತ್ತು ಭವಿಷ್ಯದ ಸಂಕಲ್ಪವನ್ನು ಸಾಕಾರಗೊಳಿಸುತ್ತದೆ. ಇಂದು ಇಷ್ಟು ಕಡಿಮೆ ಅವಧಿಯಲ್ಲಿ, ರಾಷ್ಟ್ರೀಯ ಬಾಹ್ಯಾಕಾಶ ದಿನವು ನಮ್ಮ ಯುವಕರಿಗೆ ಉತ್ಸಾಹ ಮತ್ತು ಸ್ಫೂರ್ತಿಯ ಸೆಲೆಯಾಗಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇದು ನಿಜಕ್ಕೂ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತರುವ ವಿಷಯವಾಗಿದೆ. ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಬಾಹ್ಯಾಕಾಶ ವಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ನಮ್ಮ ವಿಜ್ಞಾನಿಗಳಿಗೆ ಮತ್ತು ಎಲ್ಲಾ ಯುವಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇತ್ತೀಚೆಗೆ ಭಾರತವು 'ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಅಂತಾರಾಷ್ಟ್ರೀಯ ಒಲಿಂಪಿಯಾಡ್' ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ, ವಿಶ್ವಾದ್ಯಂತದ 60ಕ್ಕೂ ಹೆಚ್ಚು ದೇಶಗಳಿಂದ ಸುಮಾರು 300 ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. ನಮ್ಮ ಭಾರತೀಯ ಯುವಕರು ಸಹ ಪದಕಗಳನ್ನು ಗೆದ್ದಿದ್ದಾರೆ. ಈ ಒಲಿಂಪಿಯಾಡ್ ಬಾಹ್ಯಾಕಾಶ ವಲಯದಲ್ಲಿ ಭಾರತದ ಉದಯೋನ್ಮುಖ ನಾಯಕತ್ವದ ಸಂಕೇತವಾಗಿದೆ.2025ನೇ ಸಾಲಿನ ʻರಾಷ್ಟ್ರೀಯ ಬಾಹ್ಯಾಕಾಶ ದಿನʼದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಬಾಹ್ಯಾಕಾಶ ದಿನ- 2025’ರ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಆರ್ಯಭಟದಿಂದ ಗಗನಯಾನದವರೆಗೆ ಎಂಬ ಈ ವರ್ಷದ ಧ್ಯೇಯವಾಕ್ಯವು ಭಾರತದ ಗತಕಾಲದ ವಿಶ್ವಾಸ ಮತ್ತು ಅದರ ಭವಿಷ್ಯದ ಸಂಕಲ್ಪ ಎರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಅತ್ಯಲ್ಪ ಕಾಲದಲ್ಲಿ, ʻರಾಷ್ಟ್ರೀಯ ಬಾಹ್ಯಾಕಾಶ ದಿನʼವು ಭಾರತದ ಯುವಕರಿಗೆ ಉತ್ಸಾಹ ಮತ್ತು ಆಕರ್ಷಣೆಯ ಸಂದರ್ಭವಾಗಿ ಮಾರ್ಪಟ್ಟಿದೆ, ಇದು ರಾಷ್ಟ್ರೀಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು. ವಿಜ್ಞಾನಿಗಳು ಮತ್ತು ಯುವಕರು ಸೇರಿದಂತೆ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಗೆ ಅವರು ಶುಭಾಶಯಗಳನ್ನು ತಿಳಿಸಿದರು. ಭಾರತವು ಪ್ರಸ್ತುತ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಕುರಿತ ಅಂತಾರಾಷ್ಟ್ರೀಯ ಒಲಿಂಪಿಯಾಡ್ಗೆ ಆತಿಥ್ಯ ವಹಿಸುತ್ತಿದ್ದು, ಅರವತ್ತಕ್ಕೂ ಹೆಚ್ಚು ದೇಶಗಳ ಸುಮಾರು 300 ಯುವ ಸ್ಪರ್ಧಿಗಳು ಅದರಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಈ ಸ್ಪರ್ಧೆಯಲ್ಲಿ ಅನೇಕ ಭಾರತೀಯ ಸ್ಪರ್ಧಿಗಳು ಪದಕಗಳನ್ನು ಗೆದ್ದಿರುವುದಕ್ಕೆ ಶ್ರೀ ಮೋದಿ ಸಂತಸ ವ್ಯಕ್ತಪಡಿಸಿದರು. ಈ ಒಲಿಂಪಿಯಾಡ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಉದಯೋನ್ಮುಖ ಜಾಗತಿಕ ನಾಯಕತ್ವದ ಸಂಕೇತವಾಗಿದೆ ಎಂದು ಅವರು ಹೇಳಿದರು. ಯುವಜನರಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಲು, ʻಭಾರತೀಯ ಬಾಹ್ಯಾಕಾಶ ಹ್ಯಾಕಥಾನ್ʼ ಮತ್ತು ʻರೊಬೊಟಿಕ್ಸ್ ಚಾಲೆಂಜ್ʼ ನಂತಹ ಉಪಕ್ರಮಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ʻಇಸ್ರೋʼ) ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಸಂತೋಷ ವ್ಯಕ್ತಪಡಿಸಿದರು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಜೇತರನ್ನು ಅವರು ಅಭಿನಂದಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
July 04th, 05:56 am
ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು
July 04th, 04:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
June 16th, 02:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.ಸೈಪ್ರಸ್ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 15th, 11:10 pm
ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.India's youth are a force for global good: PM Modi at NCC Rally
January 27th, 05:00 pm
PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”ಎನ್ಸಿಸಿ ವಾರ್ಷಿಕ ಪಿಎಂ ರ್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ನಡೆದ ವಾರ್ಷಿಕ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಪ್ರಧಾನಮಂತ್ರಿ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದ ಶ್ರೀ ಮೋದಿ ಅವರು ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್ಸಿಸಿ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿಗಳು, 18 ಸ್ನೇಹಪರ ರಾಷ್ಟ್ರಗಳಿಂದ ಸುಮಾರು 150 ಕೆಡೆಟ್ಗಳಿದ್ದು, ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮೇರಾ ಯುವ ಭಾರತ್ (ಎಂವೈ ಭಾರತ್) ಪೋರ್ಟಲ್ ಮೂಲಕ ವರ್ಚುವಲ್ ಆಗಿ ದೇಶದ ಎಲ್ಲ ಭಾಗಗಳಿಂದ ಪಾಲ್ಗೊಂಡಿದ್ದ ಯುವಜನತೆಯನ್ನೂ ಅವರು ಅಭಿನಂದಿಸಿದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ
July 10th, 11:00 pm
ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು
July 10th, 10:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ
March 20th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.PM inaugurates Start-up Mahakumbh at Bharat Mandapam, New Delhi
March 20th, 10:36 am
PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರದ ಕನ್ನಡ ಪಠ್ಯಾಂತರ
February 07th, 02:01 pm
ಈ 75ನೇ ಗಣರಾಜ್ಯೋತ್ಸವವು ಸ್ವತಃ ಒಂದು ಮಹತ್ವದ ಮೈಲುಗಲ್ಲಾಗಿದೆ. ಸಂವಿಧಾನದ ಪ್ರಯಾಣದ ಈ ನಿರ್ಣಾಯಕ ಹಂತದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣವು ಐತಿಹಾಸಿಕ ಮಹತ್ವವನ್ನು ಪಡೆದಿದೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭಾರತದ ಆತ್ಮವಿಶ್ವಾಸದ ಬಗ್ಗೆ ಮಾತನಾಡಿದ್ದಾರೆ, ಭಾರತದ ಉಜ್ವಲ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಲಕ್ಷಾಂತರ ಭಾರತೀಯರ ಸಾಮರ್ಥ್ಯವನ್ನು ಸಂಸತ್ತಿನ ಮುಖಾಂತರ ಬಹಳ ಸಂಕ್ಷಿಪ್ತವಾಗಿ, ಆದರೆ ಭವ್ಯವಾದ ರೀತಿಯಲ್ಲಿ ರಾಷ್ಟ್ರದ ಮುಂದೆ ಪ್ರಸ್ತುತಪಡಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳಿಗೆ ಈ ಸ್ಪೂರ್ತಿದಾಯಕ ಭಾಷಣಕ್ಕಾಗಿ, ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಕ್ಕಾಗಿ ಹಾಗೂ ʻವಿಕಸಿತ ಭಾರತ'ದ ಕಡೆಗೆ ಭಾರತದ ಸಂಕಲ್ಪವನ್ನು ಸಶಕ್ತಗೊಳಿಸಿದ್ದಕ್ಕಾಗಿ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ
February 07th, 02:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು.