ಒಂಬತ್ತು ಹೊಸ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಘೋಷಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

January 14th, 06:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೊಸ ಅಮೃತ್‌ ಭಾರತ್‌ ರೈಲುಗಳು ದೇಶಾದ್ಯಂತ ಪ್ರಯಾಣಿಕರ ಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಸಂಸದ ಮತ್ತು ಕೇಂದ್ರ ಸಚಿವರಾದ ಶ್ರೀ ಕಬೀಂದ್ರ ಪುರ್ಕಾಯಸ್ಥ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದ್ದಾರೆ

January 07th, 07:07 pm

ಮಾಜಿ ಸಂಸದ ಮತ್ತು ಕೇಂದ್ರ ಸಚಿವರಾದ ಶ್ರೀ ಕಬೀಂದ್ರ ಪುರ್ಕಾಯಸ್ಥ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು

December 22nd, 03:33 pm

ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್‌ ಕುಮಾರ್‌, ಬಿಹಾರದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್‌ ಚೌಧರಿ ಮತ್ತು ಕೇಂದ್ರ ಸಚಿವರಾಧ ಶ್ರೀ ರಾಜೀವ್‌ ರಂಜನ್‌ ಸಿಂಗ್‌ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 12th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರನ್ನು ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನುಭವಿ ನಾಯಕ ಎಂದು ಬಣ್ಣಿಸಿದ್ದಾರೆ.

ಪ್ರಧಾನಮಂತ್ರಿ ಅವರು ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರವನ್ನು ಸುಧಾರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ

June 19th, 01:57 pm

ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ರಾಷ್ಟ್ರೀಯ ಅರಿಶಿನ ಮಂಡಳಿಯ ಸ್ಥಾಪನೆಯು ಅಪಾರ ಸಂತೋಷದ ವಿಷಯವಾಗಿದೆ, ವಿಶೇಷವಾಗಿ ಭಾರತದಾದ್ಯಂತ ನಮ್ಮ ಶ್ರಮಜೀವಿ ಅರಿಶಿನ ಉತ್ಪಾದಕ ರೈತರಿಗೆ ಪ್ರಯೋಜನವಾಗಲಿದೆ : ಪ್ರಧಾನಮಂತ್ರಿ

January 14th, 04:51 pm

ರಾಷ್ಟ್ರೀಯ ಅರಿಶಿನ ಮಂಡಳಿಯ ಸ್ಥಾಪನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ಮೂಲಕ ಅರಿಶಿನ ಉತ್ಪಾದನೆಯಲ್ಲಿ ನಾವೀನ್ಯತೆ, ಜಾಗತಿಕ ಪ್ರಚಾರ ಮತ್ತು ಮೌಲ್ಯವರ್ಧನೆಗೆ ಉತ್ತಮ ಅವಕಾಶಗಳನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

ವಿಕಸಿತ ಭಾರತ ಯುವ ನಾಯಕರ ಸಂವಾದವು ನಮ್ಮ ಯುವ ಶಕ್ತಿ, ಅವರ ಕನಸುಗಳು, ಕೌಶಲ್ಯಗಳು ಮತ್ತು ಆಕಾಂಕ್ಷೆಗಳನ್ನು ಸಂತಸ ಪೂರಕ ಆಚರಿಸುತ್ತದೆ: ಪ್ರಧಾನಮಂತ್ರಿ

January 10th, 07:24 pm

ವಿಕಸಿತ ಭಾರತ ಯುವ ನಾಯಕರ ಸಂವಾದವು ನಮ್ಮ ಯುವ ಶಕ್ತಿ, ಅವರ ಕನಸುಗಳು, ಕೌಶಲ್ಯಗಳು ಮತ್ತು ಆಕಾಂಕ್ಷೆಗಳನ್ನು ಸಂತಸಪೂರ್ವಕ ಆಚರಿಸಿ ಕೊಂಡಾಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. 2025ರ ಜನವರಿ 12 ರಂದು ಯುವ ಮನಸ್ಸುಗಳೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಕೇಂದ್ರ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ

December 19th, 09:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಪಾಲ್ಗೊಂಡು ಕ್ರಿಶ್ಚಿಯನ್ ಸಮುದಾಯದ ಗಣ್ಯ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಹೆಚ್ಚುತ್ತಿರುವ ನಿರುದ್ಯೋಗದೊಂದಿಗೆ ತಮ್ಮ ಯುವಜನತೆಗೆ 'ದ್ರೋಹ' ಮಾಡುತ್ತಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಪಕ್ಷಗಳ ಆಡಳಿತದ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡರು

September 26th, 09:47 am

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿಶೇಷವಾಗಿ ಯುವಜನರಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ದರಗಳನ್ನು ಪರಿಹರಿಸಲು ವಿಫಲವಾದ ವಿರೋಧ ಪಕ್ಷದ ಆಡಳಿತದ ರಾಜ್ಯಗಳನ್ನು ಬಲವಾಗಿ ಟೀಕಿಸಿದ್ದಾರೆ. ಜುಲೈ 2023 ರಿಂದ ಜೂನ್ 2024 ರವರೆಗಿನ ಅವಧಿಯನ್ನು ಒಳಗೊಂಡಿರುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ (PLFS) ಇತ್ತೀಚಿನ ಡೇಟಾವನ್ನು ಉಲ್ಲೇಖಿಸಿದ ಪ್ರಧಾನ್, ವಿರೋಧ ಪಕ್ಷಗಳ ನೇತೃತ್ವದ ರಾಜ್ಯಗಳಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎದ್ದುಕಾಣುವ ಅಸಮಾನತೆಗಳನ್ನು ಎತ್ತಿ ತೋರಿಸಿದರು.

ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಭಾರತದ ಪ್ರಗತಿಯನ್ನು ಪ್ರಧಾನಿ ಶ್ಲಾಘಿಸಿದರು

August 05th, 03:30 pm

ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಭಾರತದ ಪ್ರಗತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಪಾರ ಸಂತೋಷ ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ರಫ್ತು ಜಾಗತಿಕವಾಗಿ ಅಗ್ರ 3 ಸ್ಥಾನಗಳನ್ನು ತಲುಪಿದೆ. ಶ್ರೀ ಮೋದಿ ಅವರು ನವೀನ ಯುವ ಶಕ್ತಿಗೆ ಈ ಮನ್ನಣೆ ನೀಡಿದ್ದಾರೆ. ಭಾರತವು ಮುಂದಿನ ದಿನಗಳಲ್ಲಿ ಈ ವೇಗವನ್ನು ಮುಂದುವರಿಸಲು ಬದ್ಧವಾಗಿದೆ, ಪ್ರಧಾನ

ರೊಂಬಾ ನಂದ್ರಿ ಚೆನ್ನೈ! ವಿಕ್ಷಿತ್ ಭಾರತ್ ರಾಯಭಾರಿ ಚೆನ್ನೈ ಭೇಟಿ ಭಾರಿ ಯಶಸ್ಸು

March 23rd, 01:00 pm

ಶುಕ್ರವಾರ, 22ನೇ ಮಾರ್ಚ್ 2024 ರಂದು ಚೆನ್ನೈನಲ್ಲಿ 'ವಿಕಸಿತ್ ಭಾರತ್ ರಾಯಭಾರಿ' ಸಭೆಯನ್ನು ನಡೆಸಲಾಯಿತು. ಪ್ರತಿಷ್ಠಿತ ವೈಎಂಸಿಎ ಆಡಿಟೋರಿಯಂನಲ್ಲಿ ನಡೆದ ವಿಕಸಿತ್ ಭಾರತ್ ರಾಯಭಾರಿ ಅಥವಾ #VBA2024 ಮೀಟ್-ಅಪ್, ವೃತ್ತಿಪರರು ಸೇರಿದಂತೆ 400 ಕ್ಕೂ ಹೆಚ್ಚು ಪಾಲ್ಗೊಳ್ಳುವವರ ವೈವಿಧ್ಯಮಯ ಪ್ರೇಕ್ಷಕರನ್ನು ಒಟ್ಟುಗೂಡಿಸಿತು. ವಕೀಲರು ಮತ್ತು ಎಂಜಿನಿಯರ್‌ಗಳು ಮತ್ತು ಉತ್ಸಾಹಿ ವಿದ್ಯಾರ್ಥಿಗಳು ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ಉತ್ಸುಕರಾಗಿದ್ದಾರೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 12:00 pm

ಪೊಂಗಲ್ ಹಬ್ಬದ ಶುಭ ದಿನದಂದು, ತಮಿಳುನಾಡಿನ ಪ್ರತಿ ಮನೆಯಲ್ಲೂ ಪೊಂಗಲ್ ಹಬ್ಬದ ಹರಿವು ಕಂಡುಬರುತ್ತದೆ. ನಿಮ್ಮ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿಯ ಹರಿವು ಅಡೆತಡೆಯಿಲ್ಲದೆ ಮುಂದುವರಿಯಲಿ ಎಂಬುದು ನನ್ನ ಆಸೆ. ನಿನ್ನೆಯಷ್ಟೇ, ದೇಶವು ಲೋಹ್ರಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿ-ಉತ್ತರಾಯಣವನ್ನು ಆಚರಿಸುತ್ತಿದ್ದರೆ, ಇತರರು ನಾಳೆ ಆಚರಿಸಬಹುದು. ಮಾಘ್ ಬಿಹು ಕೂಡ ಹತ್ತಿರದಲ್ಲಿದೆ. ಈ ಹಬ್ಬಗಳಿಗಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

​​​​​​​ನವದೆಹಲಿಯಲ್ಲಿ ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ

January 14th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಪೊಂಗಲ್ ಹಬ್ಬದಲ್ಲಿ ಆಚರಣೆಯಲ್ಲಿ ಭಾಗವಹಿಸಿದರು.

2023-24 ರಲ್ಲಿ ಈವರೆಗೆ ಅತ್ಯಧಿಕ ಸಂಖ್ಯೆಯ ಪೇಟೆಂಟ್ ಪಡೆದುಕೊಂಡಿರುವುದಕ್ಕಾಗಿ ಅನುಮೋದಿಸಿದ ಪ್ರಧಾನಿ

November 17th, 10:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2023-24 ರಲ್ಲಿ ಈವರೆಗೆ ಅತ್ಯಧಿಕ ಸಂಖ್ಯೆಯ ಪೇಟೆಂಟ್ ಪಡೆದುಕೊಂಡಿರುವುದಕ್ಕಾಗಿ ಅನುಮೋದಿಸಿದ್ದಾರೆ.

ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಕೇಂದ್ರ ಸಚಿವ ಪ್ರೊಫೆಸರ್ ವೈ.ಕೆ.ಅಲಾಘ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 06th, 08:30 pm

ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರದ ಮಾಜಿ ಸಚಿವ ಪ್ರೊಫೆಸರ್ ವೈ ಕೆ ಅಲಾಘ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ

October 15th, 12:42 pm

ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್‌ ಪಟೇಲ್‌ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.

‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’

October 15th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಯನ್ನು ಇನ್ನೂ ಮೂರು ತಿಂಗಳವರೆಗೆ (2022ರ ಅಕ್ಟೋಬರ್ -2022ರ ಡಿಸೆಂಬರ್) ವಿಸ್ತರಿಸಿದ ಕೇಂದ್ರ ಸರಕಾರ

September 28th, 04:06 pm

2021 ರಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾಡಿದ ಜನಪರ ಘೋಷಣೆ ಮತ್ತು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ-ಹಂತ 7) ಯನ್ನು ಇನ್ನೂ 3 ತಿಂಗಳ ಅವಧಿಗೆ ಅಂದರೆ 2022ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆ ನೀಡಿದೆ.

ಜೂನ್ 24 ರಂದು ಟಾಯ್ಕಥಾನ್ 2021 ರಲ್ಲಿ ಪಾಲ್ಗೊಂಡಿರುವವರೊಂದಿಗೆ ಪ್ರಧಾನಮಂತ್ರಿ ಸಂವಾದ

June 22nd, 12:25 pm

ಜೂನ್ 24 ರ ಬೆಳಗ್ಗೆ 11 ಗಂಟೆಗೆ ಟಾಯ್ಕಥಾನ್ -2021 ರಲ್ಲಿ ಪಾಲ್ಗೊಂಡಿರುವವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.

ಮಾಜಿ ಕೇಂದ್ರ ಸಚಿವ ಶ್ರೀ ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ

September 27th, 01:08 pm

ಕೇಂದ್ರದ ಮಾಜಿ ಸಚಿವ ಶ್ರೀ ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.