ರಾಯ್ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್ಸ್ಪೆಕ್ಟರ್ ಜನರಲ್ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
November 30th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ.ನವೆಂಬರ್ 9ರಂದು ಡೆಹ್ರಾಡೂನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 08th, 09:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದು, ನವೆಂಬರ್ 9 ರಂದು ಮಧ್ಯಾಹ್ನ 12:30ರ ಸುಮಾರಿಗೆ ಉತ್ತರಾಖಂಡದ ರಚನೆಯ ರಜತ ಮಹೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿರುವ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Manipur is the crown jewel adorning the crest of Mother India: PM Modi in Imphal
September 13th, 02:45 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.PM Modi inaugurates multiple development projects worth over Rs 1,200 crore at Imphal, Manipur
September 13th, 02:30 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಆಗಸ್ಟ್ 25–26 ರಂದು ಗುಜರಾತ್ ಗೆ ಪ್ರಧಾನಮಂತ್ರಿ ಅವರ ಭೇಟಿ
August 24th, 01:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 - 26 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 25 ರಂದು ಸಂಜೆ 6 ಗಂಟೆಗೆ ಅಹಮದಾಬಾದ್ ನ ಖೋಡಲ್ಧಾಮ್ ಮೈದಾನದಲ್ಲಿ ಅವರು 5,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
August 20th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್ಪ್ರೆಸ್ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ಆಗಸ್ಟ್ 2 ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 31st, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 2 ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸುಮಾರು 2200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
May 25th, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅವರು ದಾಹೋಡ್ ಗೆ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 11:15 ರ ಸುಮಾರಿಗೆ ಅವರು ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಎಲೆಕ್ಟ್ರಿಕ್ ಲೋಕೋಮೋಟಿವ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಅವರು ದಾಹೋಡ್ ನಲ್ಲಿ ಸುಮಾರು 24,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.The vision of Investment in People stands on three pillars – Education, Skill and Healthcare: PM Modi
March 05th, 01:35 pm
PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.