ಫೆಬ್ರವರಿ 28 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

February 27th, 03:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28, 2026 ರಂದು ರಾಜಸ್ಥಾನದ ಅಜ್ಮೀರ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಪ್ರಧಾನಮಂತ್ರಿ ₹16,680 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರಾಭಿವೃದ್ಧಿ, ಕುಡಿಯುವ ನೀರು ಸರಬರಾಜು, ರಸ್ತೆಗಳು, ನೀರಾವರಿ, ಇಂಧನ, ಕೈಗಾರಿಕಾ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಉದ್ಯಮ ನಾಯಕರ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 01:00 pm

ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್(ಪ್ರಭಾವ) ಶೃಂಗಸಭೆಗೆ ನಿಮ್ಮೆಲ್ಲರನ್ನೂ ಮತ್ತೊಮ್ಮೆ ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ಈ ಶೃಂಗಸಭೆಯು ಮಾನವ ಕೇಂದ್ರಿತ, ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ.

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು

February 19th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ತಮ್ಮ ಹೇಳಿಕೆಗಳನ್ನು ಹಂಚಿಕೊಂಡರು. ಭಾರತದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಮತ್ತೊಮ್ಮೆ ಭಾಗವಹಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಮಾನವ ಕೇಂದ್ರಿತ ಮತ್ತು ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಶೃಂಗಸಭೆಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮಾನವೀಯತೆಯು ಯಾವಾಗಲೂ ಅಡೆತಡೆಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಎಂಬುದನ್ನು ಇತಿಹಾಸವು ತೋರಿಸುತ್ತದೆ ಮತ್ತು ಇಂದು ಅಡೆತಡೆಗಳನ್ನು ಮಾನವೀಯತೆಯ ಶ್ರೇಷ್ಠ ಅವಕಾಶವಾಗಿ ಪರಿವರ್ತಿಸಲು ಮತ್ತೊಂದು ಕ್ಷಣವನ್ನು ಪ್ರಸ್ತುತಪಡಿಸುತ್ತದೆ ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

May 20th, 04:42 pm

ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

May 20th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 20th, 04:35 pm

ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!

ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

March 20th, 04:30 pm

ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.