ಬೀಟಿಂಗ್ ರಿಟ್ರೀಟ್ 2026ರ ಕೆಲವು ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

January 29th, 04:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೀಟಿಂಗ್ ರಿಟ್ರೀಟ್ 2026 ಕಾರ್ಯಕ್ರಮದ ಕೆಲವು ತುಣುಕುಗಳನ್ನು ಹಂಚಿಕೊಂಡಿದ್ದಾರೆ. ವಿವಿಧ ಬ್ಯಾಂಡ್‌ಗಳ ಪ್ರದರ್ಶನಗಳು ಸ್ಮರಣೀಯವಾಗಿದ್ದವು ಎಂದು ಶ್ರೀ ಮೋದಿ ಹೇಳಿದ್ದಾರೆ.

ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 28th, 04:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್‌ ಎಸ್‌ ಎಸ್ ಕೆಡೆಟ್ ‌ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.

ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 03:30 pm

ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 24th, 11:30 am

2026ರ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಹೊಸ ಸಂತೋಷಗಳ ಆರಂಭ ಸೂಚಿಸುತ್ತದೆ. ಇದರೊಂದಿಗೆ ವಸಂತ ಪಂಚಮಿ ನಿನ್ನೆಯಷ್ಟೇ ಕಳೆದಂತೆ, ನಿಮ್ಮ ಜೀವನದಲ್ಲಿ ಹೊಸ ವಸಂತವೂ ಪ್ರಾರಂಭವಾಗುತ್ತಿದೆ. ಈ ಸಮಯವು ನಿಮ್ಮನ್ನು ಸಂವಿಧಾನದ ಕಡೆಗೆ ನಿಮ್ಮ ಕರ್ತವ್ಯಗಳೊಂದಿಗೆ ಸಂಪರ್ಕಿಸುತ್ತಿದೆ. ಕಾಕತಾಳೀಯವಾಗಿ, ದೇಶದಲ್ಲಿ ಪ್ರಸ್ತುತ ಗಣರಾಜ್ಯದ ಭವ್ಯ ಹಬ್ಬ ನಡೆಯುತ್ತಿದೆ. ನಿನ್ನೆ ಜನವರಿ 23ರಂದು ನಾವು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ ಆಚರಿಸಿದ್ದೇವೆ. ಈಗ ನಾಳೆ ಜನವರಿ 25ರಂದು, ರಾಷ್ಟ್ರೀಯ ಮತದಾರರ ದಿನ, ನಂತರ ಜನವರಿ 26ರಂದು ಗಣರಾಜ್ಯೋತ್ಸವ. ಇಂದು ವಿಶೇಷ ದಿನವೂ ಆಗಿದೆ. ಈ ದಿನದಂದು ನಮ್ಮ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿದೆ. ಇಂದು ಈ ಮಹತ್ವದ ದಿನದಂದು, 61 ಸಾವಿರಕ್ಕೂ ಹೆಚ್ಚು ಯುವಕರು ಜೀವನದಲ್ಲಿ ಹೊಸ ಆರಂಭ ಮಾಡುತ್ತಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ 'ಉದ್ಯೋಗ ಮೇಳ'ವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು

January 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 18ನೇ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು 2026ನೇ ವರ್ಷವು ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಮೂಲಕ ಮತ್ತು ಇದೇವೇಳೆ, ನಾಗರಿಕರನ್ನು ಅವರ ಸಾಂವಿಧಾನಿಕ ಕರ್ತವ್ಯಗಳೊಂದಿಗೆ ಸಂಪರ್ಕಿಸುವ ಮೂಲಕ ಪ್ರಾರಂಭವಾಗಿದೆ ಎಂದು ಹೇಳಿದರು. ಈ ಅವಧಿಯು ಭವ್ಯ ಗಣರಾಜ್ಯೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರವು 'ಪರಾಕ್ರಮ್ ದಿವಸ್' ಅನ್ನು ಆಚರಿಸಿತು ಮತ್ತು ನಾಳೆ, ಜನವರಿ 25 ರಂದು 'ರಾಷ್ಟ್ರೀಯ ಮತದಾರರ ದಿನ' ಮತ್ತು ಮರುದಿನ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಶ್ರೀ ಮೋದಿ ಸ್ಮರಿಸಿದರು. ಇಂದು ವಿಶೇಷವಾಗಿದೆ, ಏಕೆಂದರೆ ಇದೇ ದಿನ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಈ ಮಹತ್ವದ ದಿನದಂದು, ಅರವತ್ತೊಂದು ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುವ ಮೂಲಕ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಈ ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣಕ್ಕೆ ಆಹ್ವಾನ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ವೇಗಗೊಳಿಸುವ ಸಂಕಲ್ಪ ಎಂದು ಶ್ರೀ ಮೋದಿ ಬಣ್ಣಿಸಿದರು. ಅನೇಕ ಯುವಕರು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುತ್ತಾರೆ, ಶಿಕ್ಷಣ ಮತ್ತು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಸಶಕ್ತಗೊಳಿಸುತ್ತಾರೆ, ಹಣಕಾಸು ಸೇವೆಗಳು ಮತ್ತು ಇಂಧನ ಭದ್ರತೆಯನ್ನು ಬಲಪಡಿಸುತ್ತಾರೆ ಜೊತೆಗೆ, ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಯುವಜನರಿಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

PM Modi addresses BJP karyakartas at felicitation of New Party President

January 20th, 11:15 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

Ending TMC’s Maha Jungle Raj and bringing BJP’s good governance is essential: PM Modi in Singur, West Bengal

January 18th, 03:35 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

PM Modi addresses a massive public rally in Singur, Hooghly, West Bengal

January 18th, 03:32 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

The cruel TMC government does not allow central schemes to reach West Bengal: PM Modi in Malda

January 17th, 03:00 pm

Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.

PM Modi draws huge crowd at Malda Rally in West Bengal

January 17th, 02:34 pm

Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

West Bengal must be freed from TMC’s Maha Jungle Raj: PM Modi at Nadia virtual rally

December 20th, 01:55 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

PM Modi addresses a public rally virtually in Nadia, West Bengal

December 20th, 01:53 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ

November 30th, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.

ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗಿನ ಪ್ರಧಾನಮಂತ್ರಿ​​​​​​​ ಅವರ ಸಂವಾದದ ಕನ್ನಡ ಅನುವಾದ

November 28th, 10:15 am

ಸಾರ್, ಆಕೆ ಸಹಿ ಮಾಡುತ್ತಾರೆ ಎಂದು ನಿಮಗೆ ಹೇಗೆ ಗೊತ್ತು