ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರಧಾನಮಂತ್ರಿ ನೀಡಿದ ಹೇಳಿಕೆಯ ಕನ್ನಡ ಅವತರಣಿಕೆ
December 01st, 10:15 am
(ಸಂಸತ್ತಿನ) ಈ ಚಳಿಗಾಲದ ಅಧಿವೇಶನವು ಕೇವಲ ಒಂದು ಸಂಪ್ರದಾಯ ಆಚರಣೆಯಲ್ಲ. ಈ ಚಳಿಗಾಲದ ಅಧಿವೇಶನವು ರಾಷ್ಟ್ರವನ್ನು ಪ್ರಗತಿಯತ್ತ ವೇಗವಾಗಿ ಕೊಂಡೊಯ್ಯಲು ನಡೆಯುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತವು ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಜೀವಂತಗೊಳಿಸಿದೆ. ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಬಲಗೊಳ್ಳುವ ರೀತಿಯಲ್ಲಿ ಪ್ರಜಾಪ್ರಭುತ್ವದ ಉತ್ಸಾಹ ಮತ್ತು ಚೈತನ್ಯ ಪದೇ ಪದೇ ವ್ಯಕ್ತಗೊಳ್ಳುತ್ತಿದೆ. ಇತ್ತೀಚೆಗೆ, ಬಿಹಾರದಲ್ಲಿ ನಡೆದ ಚುನಾವಣೆಗಳು ಮತ್ತು ಅಲ್ಲಿ ದಾಖಲೆಯ ಮತದಾನವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ. ತಾಯಂದಿರು ಮತ್ತು ಸಹೋದರಿಯರ ಹೆಚ್ಚುತ್ತಿರುವ ಭಾಗವಹಿಸುವಿಕೆಯು ಸ್ವತಃ ಹೊಸ ಭರವಸೆ ಮತ್ತು ವಿಶ್ವಾಸವನ್ನು ಸೃಷ್ಟಿಸುತ್ತದೆ. ಒಂದೆಡೆ, ಪ್ರಜಾಪ್ರಭುತ್ವವು ಬಲಗೊಳ್ಳುತ್ತಿದೆ, ಮತ್ತು ಮತ್ತೊಂದೆಡೆ, ಈ ಪ್ರಜಾಪ್ರಭುತ್ವ ಚೌಕಟ್ಟಿನೊಳಗೆ, ನಮ್ಮ ಆರ್ಥಿಕತೆಯ ಬಲವರ್ಧನೆಯು ಜಗತ್ತು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವ ವಿಷಯವಾಗಿದೆ. ಪ್ರಜಾಪ್ರಭುತ್ವವು ತಲುಪಿಸಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ. ಭಾರತದ ಆರ್ಥಿಕ ಸ್ಥಿತಿ ಇಂದು ಹೊಸ ಎತ್ತರವನ್ನು ತಲುಪುತ್ತಿರುವ ವೇಗವು ನಮ್ಮಲ್ಲಿ ಹೊಸ ವಿಶ್ವಾಸವನ್ನು ತುಂಬುತ್ತದೆ ಮತ್ತು 'ವಿಕ್ಷಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ) ಗುರಿಯತ್ತ ಸಾಗಲು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ.2025ರ ಸಂಸತ್ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
December 01st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ, ಎಂದು ಶ್ರೀ ಮೋದಿ ಹೇಳಿದರು.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
April 29th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣಾ ಗೆಲುವಿಗಾಗಿ ಶ್ರೀಮತಿ ಕಮಲಾ ಪೆರ್ಸಾದ್ - ಬಿಸ್ಸೆಸ್ಸರ್ ಅವರನ್ನು ಅಭಿನಂದಿಸಿದ್ದಾರೆ. ಭಾರತ ಹಾಗೂ ಟ್ರಿನಿಡಾಡ್ ಮತ್ತು ಟೊಬಾಗೋ ನಡುವಿನ ಐತಿಹಾಸಿಕ ನಿಕಟ ಮತ್ತು ಕೌಟುಂಬಿಕ ಬಾಂಧವ್ಯಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.ಪಾಡ್ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 20th, 05:00 pm
ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.There is no losing in sports, only winning or learning: PM Modi
November 01st, 07:00 pm
PM Modi interacted with and addressed India's Asian Para Games contingent at Major Dhyan Chand National Stadium, in New Delhi. The programme is an endeavor by the Prime Minister to congratulate the athletes for their outstanding achievement at the Asian Para Games 2022 and to motivate them for future competitions. Addressing the para-athletes, the Prime Minister said, You bring along new hopes and renewed enthusiasm whenever you come here.ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡ ಉದ್ದೇಶಿಸಿ ಪ್ರಧಾನ ಮಂತ್ರಿಯ ಭಾಷಣ
November 01st, 04:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಏಷ್ಯಾ ಪ್ಯಾರಾ ಗೇಮ್ಸ್-2022 ತಂಡದೊಂದಿಗೆ ಸಂವಾದ ನಡೆಸಿ, ಅವರನ್ನು ಉದ್ದೇಶಿಸಿ ಮಾತನಾಡಿದರು. ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ವೈಯಕ್ತಿಕ ಪ್ರಯತ್ನವಾಗಿದೆ.FIDE ವಿಶ್ವ ಜೂನಿಯರ್ ರ್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಜಯಗಳಿಸಿದ ರೌನಕ್ ಸಾಧ್ವನಿ ಅವರಿಗೆ ಪ್ರಧಾನಿ ಅಭಿನಂದನೆ
October 14th, 01:55 pm
FIDE ವಿಶ್ವ ಜೂನಿಯರ್ ರ್ಯಾಪಿಡ್ ಚೆಸ್ ಚಾಂಪಿಯನ್ ಷಿಪ್ 2023 ರಲ್ಲಿ ಗಮನಾರ್ಹ ವಿಜಯ ಸಾಧಿಸಿದ ರೌನಕ್ ಸಾಧ್ವನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 28th, 11:56 pm
ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.The government’s motto will be to be with everyone and for everyone’s development.
May 20th, 12:38 pm
The government’s motto will be to be with everyone and for everyone’s development.Grand welcome for Narendra Modi in Delhi!
May 17th, 04:44 pm
Grand welcome for Narendra Modi in Delhi!World Leaders greet Narendra Modi on record win
May 17th, 03:11 pm
World Leaders greet Narendra Modi on record winPeople of India have voted for development, and this election has laid the foundation of Adhunik Bharat.
May 16th, 07:55 pm
People of India have voted for development, and this election has laid the foundation of Adhunik Bharat.India Has Won!
May 16th, 01:02 pm
India Has Won!Historic victory for NDA in 2014 Elections. Narendra Modi Tweets, "India has won! भारत की विजय। अच्छे दिन आने वाले हैं।" He seeks blessings from his Mother.
May 16th, 12:56 pm
Historic victory for NDA in 2014 Elections. Narendra Modi Tweets, India has won! भारत की विजय। अच्छे दिन आने वाले हैं। He seeks blessings from his Mother.Shri Narendra Modi seeks blessings from mother
May 16th, 10:32 am
Shri Narendra Modi seeks blessings from motherV for Varanasi, Vadodara and Victory!
March 23rd, 06:07 pm
V for Varanasi, Vadodara and Victory!Triumph of good governance & pro-people policies: BJP emerges victorious in Nagarpalika elections
February 12th, 11:06 am
Triumph of good governance & pro-people policies: BJP emerges victorious in Nagarpalika electionsShri Narendra Modi in New Delhi at BJP National Headquarter on Gujarat Victory
December 27th, 03:38 pm
Shri Narendra Modi in New Delhi at BJP National Headquarter on Gujarat Victory