ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಜನವರಿ 12ರಂದು ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ

January 10th, 09:21 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತದಾದ್ಯಂತದ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ವಿಕಸಿತ ಭಾರತ ಯುವ ನಾಯಕರ ಸಂವಾದವು ನಮ್ಮ ಯುವ ಶಕ್ತಿ, ಅವರ ಕನಸುಗಳು, ಕೌಶಲ್ಯಗಳು ಮತ್ತು ಆಕಾಂಕ್ಷೆಗಳನ್ನು ಸಂತಸ ಪೂರಕ ಆಚರಿಸುತ್ತದೆ: ಪ್ರಧಾನಮಂತ್ರಿ

January 10th, 07:24 pm

ವಿಕಸಿತ ಭಾರತ ಯುವ ನಾಯಕರ ಸಂವಾದವು ನಮ್ಮ ಯುವ ಶಕ್ತಿ, ಅವರ ಕನಸುಗಳು, ಕೌಶಲ್ಯಗಳು ಮತ್ತು ಆಕಾಂಕ್ಷೆಗಳನ್ನು ಸಂತಸಪೂರ್ವಕ ಆಚರಿಸಿ ಕೊಂಡಾಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. 2025ರ ಜನವರಿ 12 ರಂದು ಯುವ ಮನಸ್ಸುಗಳೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಅಹಮದಾಬಾದ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ

December 09th, 01:30 pm

ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!

ಗುಜರಾತ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

December 09th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ರಾಮಕೃಷ್ಣ ಮಠದಲ್ಲಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದ ಜಿ ಮಹಾರಾಜ್, ಭಾರತ ಮತ್ತು ವಿದೇಶಗಳ ರಾಮಕೃಷ್ಣ ಮಠ ಮತ್ತು ಮಿಷನ್ ನ ಪೂಜ್ಯ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರೆ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿದರು. ಶ್ರೀ ಮೋದಿ ಅವರು ಶಾರದಾ ದೇವಿ, ಗುರುದೇವ ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿದರು. ಇಂದಿನ ಕಾರ್ಯಕ್ರಮವನ್ನು ಶ್ರೀಮತ್ ಸ್ವಾಮಿ ಪ್ರೇಮಾನಂದ ಮಹಾರಾಜರ ಜನ್ಮದಿನದಂದು ಆಯೋಜಿಸಲಾಗಿದ್ದು, ಅವರಿಗೂ ನಮನ ಸಲ್ಲಿಸಿದರು.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.