ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

April 14th, 12:00 pm

ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು

April 14th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.