'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

October 26th, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ ಫ್ಲಾಟ್‌ಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 10th, 10:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಆಗಸ್ಟ್ 11 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ 184 ಟೈಪ್-VII ಬಹುಮಹಡಿ ಫ್ಲಾಟ್‌ಗಳನ್ನು ಉದ್ಘಾಟಿಸಲಿದ್ದಾರೆ.

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 06th, 07:00 pm

ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 06th, 06:30 pm

ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್‌ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!

17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

April 21st, 11:00 am

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್‌ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ

April 12th, 04:48 pm

ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:15 ರ ಸುಮಾರಿಗೆ ಅವರು ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

January 19th, 11:30 am

In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 13th, 02:10 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು

December 13th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.

ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 25th, 03:30 pm

ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,

ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 25th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್‌ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.