ಜಂಟಿ ಹೇಳಿಕೆ: ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ

January 19th, 08:10 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 19 ಜನವರಿ 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಯುಎಇ ಅಧ್ಯಕ್ಷರಾಗಿ ಇದು ಅವರ ಮೂರನೇ ಅಧಿಕೃತ ಭಾರತ ಭೇಟಿಯಾಗಿದೆ.

ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

October 09th, 11:25 am

ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..

ಶಾಂತಿ ಮತ್ತು ಭದ್ರತೆ ಕುರಿತ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

July 06th, 11:07 pm

ಜಾಗತಿಕ ಶಾಂತಿ ಮತ್ತು ಭದ್ರತೆ ಕೇವಲ ಆದರ್ಶಗಳಲ್ಲ, ಬದಲಿಗೆ ಅವು ನಮ್ಮ ಹಂಚಿಕೆಯ ಹಿತಾಸಕ್ತಿಗಳು ಮತ್ತು ಭವಿಷ್ಯದ ಅಡಿಪಾಯವಾಗಿದೆ. ಶಾಂತಿಯುತ ಮತ್ತು ಸುಭದ್ರ ವಾತಾವರಣದಲ್ಲಿ ಮಾತ್ರ ಮಾನವೀಯತೆಯ ಪ್ರಗತಿ ಸಾಧ್ಯ. ಈ ಉದ್ದೇಶವನ್ನು ಈಡೇರಿಸುವಲ್ಲಿ ಬ್ರಿಕ್ಸ್ ಬಹಳ ಮುಖ್ಯವಾದ ಪಾತ್ರವನ್ನು ಹೊಂದಿದೆ. ನಾವೆಲ್ಲರೂ ಒಗ್ಗೂಡಲು, ನಮ್ಮ ಪ್ರಯತ್ನಗಳನ್ನು ಒಗ್ಗೂಡಿಸಲು ಮತ್ತು ನಾವೆಲ್ಲರೂ ಎದುರಿಸುತ್ತಿರುವ ಸವಾಲುಗಳನ್ನು ಸಾಮೂಹಿಕವಾಗಿ ಎದುರಿಸಲು ಇದು ಸುಸಮಯ. ನಾವು ಒಟ್ಟಾಗಿ ಮುಂದೆ ಸಾಗಬೇಕು.

ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ

July 10th, 02:45 pm

ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.

The dreams of crores of women, poor and youth are Modi's resolve: PM Modi

February 18th, 01:00 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

PM Modi addresses BJP Karyakartas during BJP National Convention 2024

February 18th, 12:30 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

ಎರಡನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಸಮಾರೋಪ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಭಾಷಣದ ಕನ್ನಡ ಅನುವಾದ

November 17th, 05:41 pm

ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್, ಆಫ್ರಿಕಾ, ಏಷ್ಯಾ ಮತ್ತು ಪೆಸಿಫಿಕ್ ದ್ವೀಪ ಸೇರಿದಂತೆ ಸುಮಾರು 130 ದೇಶಗಳು ಈ ದಿನದ ಶೃಂಗಸಭೆಯಲ್ಲಿ ಭಾಗವಹಿಸಿರುವುದು ನನಗೆ ಖುಷಿ ತಂದಿದೆ. ಒಂದು ವರ್ಷದೊಳಗೆ ಗ್ಲೋಬಲ್ ಸೌತ್ ನ ಎರಡು ಶೃಂಗ ಸಭೆಗಳನ್ನು ಹೊಂದುವುದು ಮತ್ತು ಅದರಲ್ಲಿ ನೀವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು, ಜಗತ್ತಿಗೆ ಮಹತ್ವದ ಸಂದೇಶವನ್ನು ರವಾನಿಸುತ್ತದೆ. ಸಂದೇಶವು ಜಾಗತಿಕ ದಕ್ಷಿಣವು ತನ್ನ ಸ್ವಾಯತ್ತತೆಯನ್ನು ಬಯಸುತ್ತದೆ. ಜಾಗತಿಕ ಆಡಳಿತದಲ್ಲಿ ಗ್ಲೋಬಲ್ ಸೌತ್ ತನ್ನ ಧ್ವನಿಯನ್ನು ಬಯಸುತ್ತದೆ ಎಂಬುದು ಸಂದೇಶವಾಗಿದೆ. ಇದರಲ್ಲಿ ಜಾಗತಿಕ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಗ್ಲೋಬಲ್ ಸೌತ್ ಸಿದ್ಧವಾಗಿದೆ ಎಂಬ ಸಂದೇಶವಿದೆ.

​​​​​​​ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ

November 10th, 08:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

​​​​​​​ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಆರಂಭಿಕ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಕುರಿತು ಹೆಚ್ಚಿನ ಒತ್ತು ನೀಡಿದರು

October 23rd, 07:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪಶ್ಚಿಮ ಏಷ್ಯಾ ಪ್ರದೇಶದ ಅಭಿವೃದ್ಧಿ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳವನ್ನು ಕೂಡಾ ಶ್ರೀ ಮೋದಿಯವರು ವ್ಯಕ್ತಪಡಿಸಿದರು ಮತ್ತು ಭದ್ರತೆ ಹಾಗೂ ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಬಗ್ಗೆ ಒತ್ತಿ ಹೇಳಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 10 ಫೆಬ್ರವರಿ 2018

February 10th, 08:18 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !