ʻಆಪರೇಷನ್ ಸಿಂದೂರ್‌ʼಗೆ ಒಂದು ವರ್ಷ ಆಚರಣೆ ಅಂಗವಾಗಿ ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

May 07th, 10:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಆಪರೇಷನ್ ಸಿಂದೂರ್‌ʼ ಕಾರ್ಯಾಚರಣೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯ, ನಿಖರತೆ ಮತ್ತು ಸಂಕಲ್ಪಕ್ಕೆ ವಂದನೆ ಸಲ್ಲಿಸಿದ್ದಾರೆ.

ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್‌ ಅನುವಾದ

January 14th, 10:45 am

ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.

PM Modi addresses the 150th Foundation Day celebrations of India Meteorological Department

January 14th, 10:30 am

PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 21st, 11:04 pm

ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 21st, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.

​​​​​​​ದೇಶಾದ್ಯಂತ ನನ್ನ ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ವಾಟ್ಸಾಪ್ ನನಗೆ ಮತ್ತೊಂದು ಪ್ರಬಲ ಮಾಧ್ಯಮವಾಗಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ

October 09th, 06:31 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ವಾಟ್ಸಾಪ್ ನನಗೆ ಮತ್ತೊಂದು ಪ್ರಬಲ ಮಾಧ್ಯಮವಾಗುತ್ತಿದೆ ಎಂದು ಹೇಳಿದ್ದಾರೆ.