ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ

October 03rd, 03:54 pm

ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.

ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ

July 04th, 05:56 am

ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು

July 04th, 04:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.

ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 01:00 pm

ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.

ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಉನ್ನತೀಕರಣಕ್ಕೆ ರಾಷ್ಟ್ರೀಯ ಯೋಜನೆ ಮತ್ತು ಕೌಶಲ್ಯಕ್ಕಾಗಿ ಐದು ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ಸಂಪುಟದ ಅನುಮೋದನೆ

May 07th, 02:07 pm

2024-25 ಮತ್ತು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿರುವ 60,000 ಕೋಟಿ ರೂ.ಗಳ (ಕೇಂದ್ರ ಪಾಲು: 30,000 ಕೋಟಿ ರೂ., ರಾಜ್ಯ ಪಾಲು 20,000 ಕೋಟಿ ರೂ. ಮತ್ತು ಕೈಗಾರಿಕಾ ಪಾಲು 10,000 ಕೋಟಿ ರೂ.ಗಳ) ವೆಚ್ಚದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಮೇಲ್ದರ್ಜೆಗೆ ಏರಿಸುವ ಮತ್ತು ಕೌಶಲ್ಯಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು (ಎನ್‌ಸಿಒಇ) ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು. ಇದರಲ್ಲಿ ಕೇಂದ್ರದ ಪಾಲನ್ನು 50% ವರೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಗಳು ಸಮಾನವಾಗಿ ಭರಿಸಲಿವೆ.

3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 04th, 07:45 pm

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.

ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ

September 09th, 09:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.

ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು

September 09th, 09:27 pm

ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.

NDA today stands for N-New India, D-Developed Nation and A-Aspiration of people and regions: PM Modi

July 18th, 08:31 pm

PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.

ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

July 18th, 08:30 pm

‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ

May 23rd, 01:30 pm

ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.

ಭಾರತವು ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ ನ ಕೇಂದ್ರವಾಗುವ ಹಾದಿಯಲ್ಲಿದೆ: ಪ್ರಧಾನಿ

May 01st, 03:43 pm

ವಿಶ್ವಬ್ಯಾಂಕ್ ನ ಎಲ್ಪಿಐ 2023 ವರದಿಯ ಪ್ರಕಾರ, ಭಾರತೀಯ ಬಂದರುಗಳ ದಕ್ಷತೆ ಮತ್ತು ಉತ್ಪಾದಕತೆಯ ಹೆಚ್ಚಳದ ಬಗ್ಗೆ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಟ್ವೀಟ್ ಮಾಡಿದೆ.

ವಿಶ್ವಬ್ಯಾಂಕ್ ನ ಲಾಜಿಸ್ಟಿಕ್ ಪರ್ಫಾರ್ಮೆನ್ಸ್ ಇಂಡೆಕ್ಸ್ ನಲ್ಲಿ ಭಾರತ 16 ಸ್ಥಾನ ಮೇಲೇರಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

April 22nd, 07:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವಬ್ಯಾಂಕ್ ನ ಲಾಜಿಸ್ಟಿಕ್ ಪರ್ಫಾರ್ಮೆನ್ಸ್ ಇಂಡೆಕ್ಸ್ ನಲ್ಲಿ ಭಾರತ 16 ಸ್ಥಾನ ಜಿಗಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಹವಾಮಾನ ಬದಲಾವಣೆಯನ್ನು ನಿಭಾಯಿಸುವ ಕುರಿತು ವಿಶ್ವಬ್ಯಾಂಕ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ವೀಡಿಯೊ ಸಂದೇಶದ ಪಠ್ಯ

April 15th, 09:45 am

ವಿಶ್ವಬ್ಯಾಂಕ್ ನ ಅಧ್ಯಕ್ಷರು, ಗೌರವಾನ್ವಿತ ಮೊರಾಕೊದ ಇಂಧನ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿ ಸಚಿವೆ, ನನ್ನ ಸಂಪುಟ ಸಹೋದ್ಯೋಗಿ ನಿರ್ಮಲಾ ಸೀತಾರಾಮನ್ ಜೀ, ಲಾರ್ಡ್ ನಿಕೋಲಸ್ ಸ್ಟರ್ನ್, ಪ್ರೊಫೆಸರ್ ಸನ್ ಸ್ಟೈನ್ ಮತ್ತು ಇತರ ಗೌರವಾನ್ವಿತ ಅತಿಥಿಗಳೇ.

ವೈಯಕ್ತಿಕವಾಗಿ (ವ್ಯಕ್ತಿಗತವಾಗಿ) ವರ್ತನೆಯ ಬದಲಾವಣೆಯು ಹವಾಮಾನ ಬದಲಾವಣೆಯನ್ನು ಹೇಗೆ ನಿಭಾಯಿಸಬಹುದು ವಿಷಯ ಕುರಿತ ವಿಶ್ವಬ್ಯಾಂಕ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 15th, 09:33 am

‘ಮೇಕಿಂಗ್ ಇಟ್ ಪರ್ಸನಲ್: ಹೌ ಬಿಹೇವಿಯರಲ್ ಚೇಂಜ್ ಕ್ಯಾನ್ ಟ್ಯಾಕಲ್ ಕ್ಲೈಮೇಟ್ ಚೇಂಜ್’ ಶೀರ್ಷಿಕೆಯ ವಿಶ್ವ ಬ್ಯಾಂಕ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ನಲ್ಲಿ ಭಾಷಣ ಮಾಡಿದರು.