ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.