ಎಫ್ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 20th, 11:00 pm
ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ
May 20th, 10:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.