ವಿಶ್ವ ಯಕೃತ್ತಿನ ದಿನದಂದು ಜಾಗರೂಕತೆಯಿಂದ ತಿನ್ನುವ ಅಭ್ಯಾಸ ಬೆಳೆಸಿಕೊಳ್ಳುವುದನ್ನು ಮತ್ತು ಸ್ಥೂಲಕಾಯತೆಯ ವಿರುದ್ಧ ಹೋರಾಡಲು ನಾಗರಿಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

April 19th, 01:13 pm

ವಿಶ್ವ ಯಕೃತ್ತಿನ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ನಾಗರಿಕರು ಜಾಗರೂಕ ಆಹಾರ ಪದ್ಧತಿಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮತ್ತು ಆರೋಗ್ಯಕರ ಜೀವನಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದರು. ಸಣ್ಣ ಮತ್ತು ಪರಿಣಾಮಕಾರಿ ಬದಲಾವಣೆಗಳ ಪ್ರಾಮುಖ್ಯತೆಯನ್ನು ತಿಳಿಸುತ್ತಾ, ತೈಲ ಸೇವನೆಯನ್ನು ಕಡಿಮೆ ಮಾಡುವಂತಹ ಕ್ರಮಗಳು ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಗಣನೀಯವಾಗಿ ಕೊಡುಗೆ ನೀಡುತ್ತವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.