ಆಂತ್ರೊಪಿಕ್ ಸಂಸ್ಥೆಯ ಸಿಇಒ ಶ್ರೀ ಡೇರಿಯೊ ಅಮೋಡೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಸಭೆಯಲ್ಲಿ, ಭಾರತದಲ್ಲಿ ಆಂಥ್ರೊಪಿಕ್‌ ಸಂಸ್ಥೆಯ ಕಾರ್ಯಾಚರಣೆ ವಿಸ್ತರಣೆ ಮತ್ತು ಜೂನ್‌ ನಿಂದ ದೇಶದಲ್ಲಿ ಐದು ಪಟ್ಟು ಹೆಚ್ಚಳ ಕಂಡಿರುವ ಕ್ಲೌಡ್ ಕೋಡ್ ಸೇರಿದಂತೆ ಅದರ ಕೃತಕ ಬುದ್ಧಿಮತ್ತೆ (ಎಐ) ಪರಿಕರಗಳ ಹೆಚ್ಚುತ್ತಿರುವ ಅಳವಡಿಕೆಯ ಕುರಿತು ಚರ್ಚೆಗಳು ಹಾಗೂ ಮಾತುಕತೆ ಕೇಂದ್ರೀಕರಿಸಿದವು.

ಭಾರತದ ವೈವಿದ್ಯಮಯ ತಂತ್ರಜ್ಞಾನ ಪರಿಸರ ವ್ಯವಸ್ಥೆ ಮತ್ತು ಮಾನವ ಕೇಂದ್ರಿತ ಮತ್ತು ಜವಾಬ್ದಾರಿಯುತ ಎಐ ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಅದರ ಪ್ರತಿಭಾನ್ವಿತ ಯುವಕರ ಅಗಾಧ ಸಾಮರ್ಥ್ಯವನ್ನು ಪ್ರಧಾನಮಂತ್ರಿ ಅವರು ವಿವರಿಸಿದರು. ಆಂಥ್ರೊಪಿಕ್‌ ನ ವಿಸ್ತರಣೆಯನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿದರು ಮತ್ತು ಈ ಪಾಲುದಾರಿಕೆಯು ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಕೃಷಿಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಭಾರತದ ಎಐ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಐ ನೀತಿಗೆ ಭಾರತದ ಪೂರ್ವಭಾವಿ ವಿಧಾನ ಮತ್ತು ಸಮಗ್ರ ಬೆಳವಣಿಗೆಗೆ ತಂತ್ರಜ್ಞಾನವನ್ನು ಬಳಸಿಕೊಳ್ಳುವತ್ತ ಭಾರತದ ಕಾಳಜಿ ಮತ್ತು ಗಮನವನ್ನು ಶ್ರೀ ಅಮೋಡೆ ಶ್ಲಾಘಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

"ನಿಮ್ಮನ್ನು ಭೇಟಿಯಾಗಲು ಸಂತೋಷವಾಯಿತು. ಭಾರತದ ಕ್ರಿಯಾಶೀಲ ತಂತ್ರಜ್ಞಾನ ಪರಿಸರ ವ್ಯವಸ್ಥೆ ಮತ್ತು ಪ್ರತಿಭಾನ್ವಿತ ಯುವಕರು ಮಾನವ ಕೇಂದ್ರಿತ ಮತ್ತು ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಮುನ್ನಡೆಸುತ್ತಿದ್ದಾರೆ. ನಾವು ಆಂಥ್ರೊಪಿಕ್‌ ನ ವಿಸ್ತರಣೆಯನ್ನು ಸ್ವಾಗತಿಸುತ್ತೇವೆ ಮತ್ತು ಪ್ರಮುಖ ವಲಯಗಳಲ್ಲಿ ಉತ್ತಮ ಬೆಳವಣಿಗೆಗಾಗಿ ಎಐ ಅನ್ನು ಬಳಸಿಕೊಳ್ಳಲು, ಈ ಮೂಲಕ ಒಟ್ಟಾಗಿ ಕೆಲಸ ಮಾಡಲು ಸಮಯಾವಕಾಶ ಎದುರು ನೋಡುತ್ತಿದ್ದೇವೆ."

@DarioAmodei”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jan Dhan accounts hold Rs 2.75 lakh crore in banks: Official

Media Coverage

Jan Dhan accounts hold Rs 2.75 lakh crore in banks: Official
NM on the go

Nm on the go

Always be the first to hear from the PM. Get the App Now!
...
Prime Minister condoles loss of lives due to a mishap in Nashik, Maharashtra
December 07, 2025

The Prime Minister, Shri Narendra Modi has expressed deep grief over the loss of lives due to a mishap in Nashik, Maharashtra.

Shri Modi also prayed for the speedy recovery of those injured in the mishap.

The Prime Minister’s Office posted on X;

“Deeply saddened by the loss of lives due to a mishap in Nashik, Maharashtra. My thoughts are with those who have lost their loved ones. I pray that the injured recover soon: PM @narendramodi”