ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್.ಸಿ.ಒ) ಮುಖ್ಯಸ್ಥರ ಮಂಡಳಿಯ 22ನೇ ಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಶೌಕತ್ ಮಿರ್ಜಿಯೊಯೆವ್ ಅವರನ್ನು ಭೇಟಿಯಾದರು.

ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 30 ನೇ ವಾರ್ಷಿಕೋತ್ಸವದ ಸಂದರ್ಭ ಇದಾಗಿರುವುದರಿಂದ ಎರಡೂ ದೇಶಗಳಿಗೆ ಇದೊಂದು ವಿಶೇಷ ವರ್ಷವಾಗಿದೆ. 2020ರ ಡಿಸೆಂಬರ್ ನಲ್ಲಿ ನಡೆದ ವರ್ಚುವಲ್ ಶೃಂಗಸಭೆಯ ನಿರ್ಧಾರಗಳ ಅನುಷ್ಠಾನವೂ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳಲ್ಲಿನ ಒಟ್ಟಾರೆ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು.

ದ್ವಿಪಕ್ಷೀಯ ಸಹಕಾರದ ಆದ್ಯತಾ ಕ್ಷೇತ್ರಗಳು, ವಿಶೇಷವಾಗಿ ವ್ಯಾಪಾರ, ಆರ್ಥಿಕ ಸಹಕಾರ ಮತ್ತು ಸಂಪರ್ಕದ ಬಗ್ಗೆ ಇಬ್ಬರೂ ನಾಯಕರು ಪ್ರಸ್ತಾಪಿಸಿದರು. ವ್ಯಾಪಾರ ಬುಟ್ಟಿಯನ್ನು ವೈವಿಧ್ಯಗೊಳಿಸಲು ಮತ್ತು ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸಲು ದೀರ್ಘಕಾಲೀನ ವ್ಯವಸ್ಥೆಗಳಿಗೆ ಪ್ರವೇಶಿಸಲು ಸಂಘಟಿತ ಪ್ರಯತ್ನಗಳನ್ನು ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಚಬಹಾರ್ ಬಂದರು ಮತ್ತು ಅಂತರರಾಷ್ಟ್ರೀಯ ಉತ್ತರ ದಕ್ಷಿಣ ಸಾರಿಗೆ ಕಾರಿಡಾರಿನ ಹೆಚ್ಚಿನ ಬಳಕೆ ಸೇರಿದಂತೆ ಈ ನಿಟ್ಟಿನಲ್ಲಿ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸಂಪರ್ಕವು  ಪ್ರಮುಖ ಪಾತ್ರವಹಿಸುತ್ತದೆ ಎಂಬುದನ್ನು  ಪರಿಗಣಿಸಲಾಯಿತು.

ಭಾರತದ ಅಭಿವೃದ್ಧಿಯ ಅನುಭವ ಮತ್ತು ಪರಿಣತಿಯನ್ನು ಆಧರಿಸಿ ಮಾಹಿತಿ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ಉನ್ನತ ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ಸಹಕಾರಕ್ಕೆ  ನಾಯಕರು ಆದ್ಯತೆ ನೀಡಿದರು. ಭಾರತೀಯ ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದು ಮತ್ತು ಉಜ್ಬೆಕ್ ಹಾಗು ಭಾರತೀಯ ವಿಶ್ವವಿದ್ಯಾಲಯಗಳ ನಡುವಿನ ಪಾಲುದಾರಿಕೆಯನ್ನು ಸ್ವಾಗತಿಸಲಾಯಿತು.

ಅಫ್ಘಾನಿಸ್ತಾನ ಸೇರಿದಂತೆ ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅಫ್ಘಾನಿಸ್ತಾನದ ಭೂಪ್ರದೇಶವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂದು ನಾಯಕರು ಒಮ್ಮತದ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ವರ್ಷದ ಜನವರಿಯಲ್ಲಿ ನಡೆದ ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯ ಫಲಿತಾಂಶಗಳಿಗೆ ನಾಯಕರು ಹೆಚ್ಚಿನ ಮಹತ್ವ ನೀಡಿದರು. ಶೃಂಗಸಭೆಯ ನಿರ್ಧಾರಗಳ ಅನುಷ್ಠಾನದಲ್ಲಿ ಆಗುತ್ತಿರುವ ಪ್ರಗತಿಯನ್ನು ಅವರು ಒಪ್ಪಿಕೊಂಡರು.

ಎಸ್.ಸಿ.ಓ. ಶೃಂಗಸಭೆಯನ್ನು ಅತ್ಯುತ್ತಮವಾಗಿ ಸಂಘಟಿಸಿದ್ದಕ್ಕಾಗಿ ಮತ್ತು ಉಜ್ಬೇಕಿಸ್ತಾನದ ಯಶಸ್ವೀ ಅಧ್ಯಕ್ಷತೆಗಾಗಿ ಅಧ್ಯಕ್ಷ ಮಿರ್ಜಿಯೋಯೆವ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi