ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.

ಕೇಂದ್ರ ಸಚಿವ ಸಂಪುಟದ ಅನುಮೋದನೆಯ ನಂತರ, ಭಾರತದ ರಾಷ್ಟ್ರಪತಿಗಳು ಮಸೂದೆಯನ್ನು ಅಂದರೆ ಕೇರಳ (ಹೆಸರಿನ ಬದಲಾವಣೆ) ಮಸೂದೆ 2026 ಅನ್ನು ಭಾರತದ ಸಂವಿಧಾನದ 3 ನೇ ವಿಧಿಯ ನಿಬಂಧನೆಯಡಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕೇರಳ ರಾಜ್ಯ ವಿಧಾನಸಭೆಗೆ ಕಳುಹಿಸುತ್ತಾರೆ. ಕೇರಳ ರಾಜ್ಯ ವಿಧಾನಸಭೆ ಅಭಿಪ್ರಾಯ ಸ್ವೀಕರಿಸಿದ ಬಳಿಕ ಭಾರತ ಸರ್ಕಾರವು ಮುಂದಿನ ಕ್ರಮ ಕೈಗೊಳ್ಳುತ್ತದೆ ಮತ್ತು  ’ಕೇರಳ’ ರಾಜ್ಯದ ಹೆಸರನ್ನು ’ಕೇರಳಂ’ ಎಂದು ಬದಲಾಯಿಸಲು 2026ರ ಕೇರಳ (ಹೆಸರಿನ ಬದಲಾವಣೆ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ರಾಷ್ಟ್ರಪತಿಗಳ ಶಿಫಾರಸನ್ನು ಪಡೆಯಲಾಗುವುದು.

ಕೇರಳ ವಿಧಾನಸಭೆಯು 2024ರ ಜೂ.24 ರಂದು “ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ನಿರ್ಣಯವನ್ನು ಅಂಗೀಕರಿಸಿದ್ದು, ಅದು ಈ ಕೆಳಗಿನಂತಿದೆ:

"ನಮ್ಮ ರಾಜ್ಯದ ಹೆಸರು ಮಲಯಾಳಂ ಭಾಷೆಯಲ್ಲಿ 'ಕೇರಳಂ'. 1956ರ ನವೆಂಬರ್ 1 ರಂದು ಭಾಷೆಗಳ ಆಧಾರದ ಮೇಲೆ ರಾಜ್ಯಗಳನ್ನು ರಚಿಸಲಾಯಿತು. ಕೇರಳ ಪಿರವಿ ದಿನವನ್ನೂ ಸಹ ನವೆಂಬರ್ 1 ರಂದು ಆಚರಿಸಲಾಗುತ್ತದೆ. ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಸಮಯದಿಂದ, ಮಲಯಾಳಂ ಭಾಷೆ ಮಾತನಾಡುವ ಜನರಿಗೆ ಅಖಂಡ ಕೇರಳ ರಚನೆಗೆ ಬಲವಾದ ಬೇಡಿಕೆ ಇದೆ. ಆದರೆ ಸಂವಿಧಾನದ ಮೊದಲ ಶೆಡ್ಯೂಲ್‌ ನಲ್ಲಿ ನಮ್ಮ ರಾಜ್ಯದ ಹೆಸರನ್ನು 'ಕೇರಳ' ಎಂದು ದಾಖಲಿಸಲಾಗಿದೆ. ಈ ಸಭೆಯು ಸಂವಿಧಾನದ 3 ನೇ ವಿಧಿಯ ಪ್ರಕಾರ 'ಕೇರಳಂ' ಎಂಬ ಹೆಸರನ್ನು ಮಾರ್ಪಡಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸರ್ವಾನುಮತದಿಂದ ಕೋರುತ್ತದೆ’’.

ಆನಂತರ ಕೇರಳ ಸರ್ಕಾರವು ಸಂವಿಧಾನದ 3 ನೇ ವಿಧಿಯ ಪ್ರಕಾರ 'ಕೇರಳ' ರಾಜ್ಯದ ಹೆಸರನ್ನು 'ಕೇರಳಂ' ಎಂದು ಬದಲಾಯಿಸುವ ಮೂಲಕ ಸಂವಿಧಾನದ ಮೊದಲ ಶೆಡ್ಯೂಲ್‌ ಅನ್ನು ತಿದ್ದುಪಡಿ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದೆ.

ಸಂವಿಧಾನದ 3ನೇ ಕಲಂ ಅಸ್ತಿತ್ವದಲ್ಲಿರುವ ರಾಜ್ಯಗಳ ಹೆಸರುಗಳನ್ನು ಬದಲಾಯಿಸಲು ಅವಕಾಶ ನೀಡುತ್ತದೆ. 3 ನೇ ವಿಧಿಯ ಪ್ರಕಾರ, ಸಂಸತ್ತಿನ ಕಾನೂನಿನ ಮೂಲಕ ಯಾವುದೇ ರಾಜ್ಯದ ಹೆಸರನ್ನು ಬದಲಾಯಿಸಬಹುದು. 3ನೇ ವಿಧಿಯ ಮತ್ತಷ್ಟು ನಿಬಂಧನೆಯು, ರಾಷ್ಟ್ರಪತಿಗಳ ಶಿಫಾರಸ್ಸು ಇಲ್ಲದೆ ಆ  ಉದ್ದೇಶಕ್ಕಾಗಿ ಯಾವುದೇ ಮಸೂದೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸುವಂತಿಲ್ಲ ಮತ್ತು ಮಸೂದೆಯಲ್ಲಿರುವ ಪ್ರಸ್ತಾವನೆಯು ಯಾವುದೇ ರಾಜ್ಯಗಳ ಪ್ರದೇಶ, ಗಡಿಗಳು ಅಥವಾ ಹೆಸರಿನ ಮೇಲೆ ಪರಿಣಾಮ ಬೀರಿರುವಂತಿದ್ದರೆ ಅಂತಹ ಸಂದರ್ಭದಲ್ಲಿ ನಿರ್ದಿಷ್ಟಪಡಿಸಬಹುದಾದ ಅವಧಿಯೊಳಗೆ ಅಥವಾ ರಾಷ್ಟ್ರಪತಿಗಳು ಅನುಮತಿಸಬಹುದಾದ ಮುಂದಿನ ಅವಧಿಯೊಳಗೆ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ರಾಷ್ಟ್ರಪತಿಗಳು ಆ ರಾಜ್ಯದ ವಿಧಾನಸಭೆಗೆ ಮಸೂದೆಯನ್ನು ಕಳುಹಿಸಿದ್ದರೆ ಮತ್ತು ನಿರ್ದಿಷ್ಟಪಡಿಸಿದ ಅಥವಾ ಅನುಮತಿಸಲಾದ ಅವಧಿ ಮುಗಿದಿದ್ದರೆ ಎಂದು ಹೇಳುತ್ತದೆ.

'ಕೇರಳ' ರಾಜ್ಯದ ಹೆಸರನ್ನು 'ಕೇರಳಂ' ಎಂದು ಬದಲಾಯಿಸುವ ವಿಷಯವನ್ನು ಭಾರತ ಸರ್ಕಾರದ ಗೃಹ ಸಚಿವಾಲಯದಲ್ಲಿ ಪರಿಗಣಿಸಲಾಗಿತ್ತು ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಕೇಂದ್ರ ಸಹಕಾರ ಸಚಿವರ ಅನುಮೋದನೆಯೊಂದಿಗೆ, 'ಕೇರಳ' ರಾಜ್ಯದ ಹೆಸರನ್ನು 'ಕೇರಳಂ' ಎಂದು ಬದಲಾಯಿಸುವ ಸಂಪುಟದ ಕರಡು ಟಿಪ್ಪಣಿಯನ್ನು ಕಾನೂನು ವ್ಯವಹಾರಗಳು ಮತ್ತು ಶಾಸಕಾಂಗ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಅವುಗಳ ಅಭಿಪ್ರಾಯಕ್ಕಾಗಿ ರವಾನಿಸಲಾಗಿತ್ತು. 'ಕೇರಳ' ರಾಜ್ಯದ ಹೆಸರನ್ನು 'ಕೇರಳಂ' ಎಂದು ಬದಲಾಯಿಸುವ ಪ್ರಸ್ತಾವನೆಗೆ ಕಾನೂನು ವ್ಯವಹಾರಗಳು ಮತ್ತು ಶಾಸಕಾಂಗ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯವು ಒಪ್ಪಿಗೆ ಸೂಚಿಸಿವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
10 Years of UPI: From 18 mln to 219 bln transactions, volumes jump 12,000x

Media Coverage

10 Years of UPI: From 18 mln to 219 bln transactions, volumes jump 12,000x
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಎಪ್ರಿಲ್ 2026
April 10, 2026

Safe Anchor, Green Engine, Digital Dynamo: PM Modi’s Blueprint for India’s Economic Renaissance