ಈ ನಿಗಮಕ್ಕೆ 25 ಕೋಟಿ ರೂ. ಮೂಲ ಷೇರು ಬಂಡವಾಳವನ್ನು ಒದಗಿಸಲಾಗುವುದು ಮತ್ತು ಪ್ರತಿ ವರ್ಷ ಸುಮಾರು 2.42 ಕೋಟಿ ರೂಪಾಯಿ ವೆಚ್ಚ ತಗುಲಲಿದೆ.
ಉದ್ಯಮ, ಪ್ರವಾಸೋದ್ಯಮ, ಸಾರಿಗೆ ಮತ್ತು ಸ್ಥಳೀಯ ಉತ್ಪನ್ನಗಳ ಮಾರಾಟ ಮತ್ತು ಕರಕುಶಲ ವಸ್ತುಗಳಿಗೆ ನಿಗಮವು ಕೆಲಸ ಮಾಡುತ್ತದೆ
ಈ ನಿಗಮ ಸ್ಥಾಪನೆಯಿಂದಾಗಿ ಲಡಾಖ್ ಕೇಂದ್ರಾಡಳಿತ ಪ್ರದೇಶ, ಸಮಗ್ರ ಹಾಗೂ ಎಲ್ಲವನ್ನೂ ಒಳಗೊಂಡಂತೆ ಅಭಿವೃದ್ಧಿಯಾಗಲಿದೆ.
"ಲಡಾಖ್ ಪ್ರದೇಶದ ಉದ್ಯೋಗ ಸೃಷ್ಟಿ, ಸಮಗ್ರ ಮತ್ತು ಸಮಗ್ರ ಅಭಿವೃದ್ಧಿಯ ಮೂಲಕ ಆತ್ಮನಿರ್ಭಾರ ಭಾರತ್ ಗುರಿ ಸಾಧಿಸಲಾಗುವುದು "

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಸಮಗ್ರ ವಿವಿಧೋದ್ದೇಶ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮೋದನೆ ನೀಡಿದೆ.

ಅಲ್ಲದೆ ಸಂಪುಟ ನಿಗಮಕ್ಕೆ 1,44,200 ರೂ.ನಿಂದ – 2.18,200 ರೂ.ವೇತನಶ್ರೇಣಿ ಮಟ್ಟದ ವ್ಯವಸ್ಥಾಪಕರ ನಿರ್ದೇಶಕರ ಹುದ್ದೆಯನ್ನು ಸೃಷ್ಟಿಸಲು ಅನುಮೋದನೆ ನೀಡಿದೆ.

ಈ ನಿಗಮಕ್ಕೆ 25 ಕೋಟಿ ರೂ. ಮೂಲ ಷೇರು ಬಂಡವಾಳವನ್ನು ಒದಗಿಸಲಾಗುವುದು ಮತ್ತು ಪ್ರತಿ ವರ್ಷ ಸುಮಾರು 2.42 ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ಸದ್ಯ ಹೊಸದಾಗಿ ರಚಿಸಲಾಗಿರುವ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಅಂತಹ ಯಾವುದೇ ಸಂಸ್ಥೆ ಇಲ್ಲ. ಮೂಲತಃ ಉದ್ಯೋಗ ಸೃಷ್ಟಿಗೆ ಒತ್ತು ನೀಡಲು ನಿಗಮ ಸ್ಥಾಪನೆಗೆ ಅನುಮೋದನೆ ನೀಡಿದ್ದರೂ, ಆ ನಿಗಮ ಹಲವು ಬಗೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದೆ. ಕೈಗಾರಿಕೆ, ಪ್ರವಾಸೋದ್ಯಮ ಮತ್ತು ಸಾರಿಗೆ ವಲಯದ ಅಭಿವೃದ್ಧಿ ಹಾಗೂ ಸ್ಥಳೀಯ ಉತ್ಪನ್ನಗಳು ಹಾಗೂ ಕರಕುಶಲ ಕಲೆಗಳ ಮಾರುಕಟ್ಟೆ ಒದಗಿಸಲು ನಿಗಮ ಕಾರ್ಯನಿರ್ವಹಿಸಲಿದೆ. ನಿಗಮ ಲಡಾಖ್ ಪ್ರದೇಶದಲ್ಲಿ ಪ್ರಮುಖ ಮೂಲಸೌಕರ್ಯ ನಿರ್ಮಾಣ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.

ಈ ನಿಗಮ ಸ್ಥಾಪನೆಯಿಂದಾಗಿ ಲಡಾಖ್ ಕೇಂದ್ರಾಡಳಿತ ಪ್ರದೇಶ, ಸಮಗ್ರ ಹಾಗೂ ಎಲ್ಲವನ್ನೂ ಒಳಗೊಂಡಂತೆ ಅಭಿವೃದ್ಧಿಯಾಗಲಿದೆ. ಇದರಿಂದಾಗಿ ಕೇಂದ್ರಾಡಳಿತ ಪ್ರದೇಶದ ಜನಸಂಖ್ಯೆ ಮತ್ತು ಇಡೀ ಪ್ರದೇಶದ ಸಾಮಾಜಿ – ಆರ್ಥಿಕ ಅಭಿವೃದ್ಧಿ ಖಾತ್ರಿಯಾಗಲಿದೆ.

ಅಭಿವೃದ್ಧಿಯ ಪರಿಣಾಮ ಹಲವು ಆಯಾಮಗಳಲ್ಲಿ ಆಗಲಿದೆ. ಇದರಿಂದ ಮಾನವ ಸಂಪನ್ಮೂಲ ಮತ್ತಷ್ಟು ಅಭಿವೃದ್ಧಿ ಹಾಗೂ ಆನಂತರ ಸಮರ್ಪಕ ಬಳಕೆಗೆ ಸಹಕಾರಿಯಾಗಲಿದೆ. ಅಲ್ಲದೆ ಇದು ಸರಕು ಮತ್ತು ಸೇವೆಗಳ ದೇಶೀಯ ಉತ್ಪಾದನೆ ಹೆಚ್ಚಿಸುವುದಲ್ಲದೆ, ಅವುಗಳ ಸುಗಮ ಪೂರೈಕೆಗೆ ನೆರವಾಗಲಿದೆ. ನಿಗಮ ಸ್ಥಾಪನೆಗೆ ಅನುಮೋದನೆ ನೀಡಿರುವುದರಿಂದ ಆತ್ಮನಿರ್ಭರ ಭಾರತ ಗುರಿ ಸಾಕಾರಕ್ಕೆ ಸಹಕಾರಿಯಾಗಲಿದೆ.

ಹಿನ್ನೆಲೆ:

i. 2019ರ ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣಾ ಕಾಯ್ದೆಯಂತೆ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದಿಂದ ವಿಭಜಿಸಿ 31.10.2019ರಿಂದ ಜಾರಿಗೆ ಬರುವಂತೆ ಹೊಸದಾಗಿ ಲಡಾಖ್ ಕೇಂದ್ರಾಡಳಿತ ಪ್ರದೇಶ(ವಿಧಾನಸಭೆ ಇಲ್ಲದೆ) ಅಸ್ಥಿತ್ವಕ್ಕೆ ತರಲಾಗಿದೆ.

ii. 2019ರ ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣಾ ಕಾಯ್ದೆ ಸೆಕ್ಷನ್ 85ರ ಪ್ರಕಾರ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಆಸ್ತಿ ಮತ್ತು ಹೊಣೆಗಾರಿಕೆಯನ್ನು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶದ ನಡುವೆ ಹಂಚಿಕೆ ಮಾಡಲು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಆ ಸಮಿತಿ ಲಡಾಖ್ ಪ್ರದೇಶಕ್ಕೆ ಅತ್ಯಗತ್ಯವಾದ ನಾನಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಸೂಕ್ತ ಅಧಿಕಾರವಿರುವಂತೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮಗ್ರ ಅಭಿವೃದ್ಧಿ ನಿಗಮ ನಿಯಮಿತ(ಎಎನ್ಐಐಡಿಸಿಒ) ಮಾದರಿಯಲ್ಲಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಶಿಫಾರಸ್ಸು ಮಾಡಿತ್ತು.

iii. ಅದರಂತೆ ಲಡಾಖ್ ಕೇಂದ್ರಾಡಳಿತ ಪ್ರದೇಶ ಸಚಿವಾಲಯಕ್ಕೆ ನಿಗಮ ಸ್ಥಾಪಿಸುವಂತೆ ಪ್ರಸ್ತಾವವನ್ನು ಕಳುಹಿಸಿತ್ತು. ಆ ಪ್ರಸ್ತಾವವನ್ನು ಹಣಕಾಸು ಸಚಿವಾಲಯದ ಸಿಬ್ಬಂದಿ ವೆಚ್ಚ ಸಮಿತಿ(ಸಿಇಇ)ಗೆ 2021ರ ಏಪ್ರಿಲ್ ನಲ್ಲಿ ಶಿಫಾರಸ್ಸು ಮಾಡಿತ್ತು.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Northeast’s first Emergency Landing Facility in Moran. Why it matters?

Media Coverage

PM Modi inaugurates Northeast’s first Emergency Landing Facility in Moran. Why it matters?
NM on the go

Nm on the go

Always be the first to hear from the PM. Get the App Now!
...
Prime Minister greets everyone on Mahashivratri
February 15, 2026

The Prime Minister, Shri Narendra Modi greeted everyone on the occasion of Mahashivratri, today. “May Adidev Mahadev always keeps his grace upon everyone. May all be blessed with well-being and may our Bharatvarsh sit enthroned at the peak of prosperity”, Shri Modi said.

The Prime Minister posted on X:

“देशभर के मेरे परिवारजनों को महाशिवरात्रि की ढेरों शुभकामनाएं। मेरी कामना है कि आदिदेव महादेव सदैव सभी पर अपनी कृपा बनाए रखें। उनके आशीर्वाद से सबका कल्याण हो और हमारा भारतवर्ष समृद्धि के शिखर पर विराजमान हो।

हर हर महादेव!”