2025-26ರ ಸಕ್ಕರೆ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಗೆ ಸಂಪುಟದ ಅನುಮೋದನೆ
ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ ಗೆ 355 ರೂ.ಗಳ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು ಅನುಮೋದಿಸಲಾಗಿದೆ
ಈ ನಿರ್ಧಾರವು 5 ಕೋಟಿ ಕಬ್ಬು ಬೆಳೆಗಾರರು ಮತ್ತು ಅವರ ಅವಲಂಬಿತರಿಗೆ ಹಾಗು ಸಕ್ಕರೆ ಕಾರ್ಖಾನೆಗಳು ಮತ್ತು ಸಂಬಂಧಿತ ಪೂರಕ ಚಟುವಟಿಕೆಗಳಲ್ಲಿ ಕೆಲಸ ಮಾಡುವ 5 ಲಕ್ಷ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ, ಕಬ್ಬು ಬೆಳೆಗಾರರ (ಗನ್ನಕಿಸಾನ್) ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, 2025-26ರ ಸಕ್ಕರೆ ಋತುವಿನಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ (ಎಫ್ ಆರ್ ಪಿ)ಯನ್ನು 10.25% ಮೂಲ ಇಳುವರಿ ದರವಿದ್ದರೆ [ಅಂದರೆ ಸಕ್ಕರೆ ಉತ್ಪಾದನಾ ಪ್ರಮಾಣ] ಪ್ರತಿ ಕ್ವಿಂಟಾಲ್ ಗೆ 355 ರೂ.ಗಳಂತೆ ನೀಡಲು ಅನುಮೋದನೆ ನೀಡಿದೆ.  ಇಳುವರಿಯಲ್ಲಿ ಪ್ರತಿ 0.1% ಹೆಚ್ಚಳವಿದ್ದರೆ ಎಫ್ ಆರ್ ಪಿಯನ್ನು ಪ್ರತಿ ಕ್ವಿಂಟಾಲ್ ಗೆ ರೂ.3.46 ರಷ್ಟು ಹೆಚ್ಚು ಮಾಡುವುದು. ಮತ್ತು 0.1% ಸಕ್ಕರೆ ಇಳುವರಿ ಕಡಿಮೆ ಇದ್ದರೆ ರೂ.3.46ರಂತೆ ಕಡಿಮೆ ಮಾಡಲಾಗುವುದು.

ಆದಾಗ್ಯೂ, ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ದೃಷ್ಟಿಯಿಂದ ಸರ್ಕಾರವು 9.5% ಕ್ಕಿಂತ ಕಡಿಮೆ ಇಳುವರಿ ಇರುವ ಸಕ್ಕರೆ ಕಾರ್ಖಾನೆಗಳ ಸಂದರ್ಭದಲ್ಲಿ ಯಾವುದೇ ಕಡಿತ ಇರುವುದಿಲ್ಲ ಎಂದು ನಿರ್ಧರಿಸಿದೆ. ಅಂತಹ ರೈತರಿಗೆ 2025-26ರ ಸಕ್ಕರೆ ಋತುವಿನಲ್ಲಿ ಪ್ರತಿ ಕ್ವಿಂಟಾಲ್ ಕಬ್ಬಿಗೆ 329.05 ರೂ. ದೊರೆಯುತ್ತದೆ.

2025-26ರ ಸಕ್ಕರೆ ಋತುವಿನಲ್ಲಿ ಕಬ್ಬಿನ ಉತ್ಪಾದನಾ ವೆಚ್ಚ (ಎ 2 + ಎಫ್ಎಲ್) ಪ್ರತಿ ಕ್ವಿಂಟಾಲ್ ಗೆ 173 ರೂ. 10.25% ಇಳುವರಿ ದರದಲ್ಲಿ ಪ್ರತಿ ಕ್ವಿಂಟಾಲ್ ಗೆ 355 ರೂ.ಗಳ ಈ ಎಫ್ ಆರ್ ಪಿ ಉತ್ಪಾದನಾ ವೆಚ್ಚಕ್ಕಿಂತ 105.2% ನಷ್ಟು ಹೆಚ್ಚಾಗಿದೆ. 2025-26ರ ಸಕ್ಕರೆ ಋತುವಿನ ಎಫ್ ಆರ್ ಪಿ ಪ್ರಸ್ತುತ ಸಕ್ಕರೆ ಋತುವಾದ 2024-25 ಕ್ಕಿಂತ 4.41% ಹೆಚ್ಚಾಗಿದೆ.

ಅನುಮೋದಿಸಲಾದ ಎಫ್ ಆರ್ ಪಿ 2025-26ರ ಸಕ್ಕರೆ ಋತುವಿನಲ್ಲಿ (2025ರ ಅಕ್ಟೋಬರ್ 1 ರಿಂದ ಪ್ರಾರಂಭವಾಗುವಂತೆ) ಸಕ್ಕರೆ ಕಾರ್ಖಾನೆಗಳು ರೈತರಿಂದ ಕಬ್ಬು ಖರೀದಿಸಲು ಅನ್ವಯಿಸುತ್ತದೆ. ಸಕ್ಕರೆ ಕ್ಷೇತ್ರವು ಪ್ರಮುಖ ಕೃಷಿ ಆಧಾರಿತ ವಲಯವಾಗಿದ್ದು, ಇದು ಸುಮಾರು 5 ಕೋಟಿ ಕಬ್ಬು ಬೆಳೆಗಾರರು ಮತ್ತು ಅವರ ಅವಲಂಬಿತರು ಹಾಗು ಸಕ್ಕರೆ ಕಾರ್ಖಾನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಸುಮಾರು 5 ಲಕ್ಷ ಕಾರ್ಮಿಕರ ಜೀವನೋಪಾಯದ ಮೇಲೆ ಹಾಗು ಪರೋಕ್ಷ ಉದ್ಯೋಗ ಹೊದಿರುವವರು ಮತ್ತು ಸಾರಿಗೆ ವಲಯದ ಮೇಲೆ ಪರಿಣಾಮ ಬೀರುತ್ತದೆ

ಹಿನ್ನೆಲೆ:

ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸುಗಳ ಆಧಾರದ ಮೇಲೆ ಮತ್ತು ರಾಜ್ಯ ಸರ್ಕಾರಗಳು ಹಾಗು ಇತರ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ ಎಫ್ಆರ್ಪಿಯನ್ನು ನಿರ್ಧರಿಸಲಾಗಿದೆ.

ಹಿಂದಿನ 2023-24 ರ ಸಕ್ಕರೆ ಋತುವಿನಲ್ಲಿ, ಪಾವತಿಸಬೇಕಾದ 1,11,782 ಕೋಟಿ ರೂ.ಗಳ ಕಬ್ಬಿನ ಬಾಕಿಯಲ್ಲಿ, 28.04.2025 ರವರೆಗೆ ಸುಮಾರು 1,11,703 ಕೋಟಿ ರೂ.ಗಳ ಕಬ್ಬಿನ ಬಾಕಿಯನ್ನು ರೈತರಿಗೆ ಪಾವತಿಸಲಾಗಿದೆ; ಹೀಗಾಗಿ, 99.92% ಕಬ್ಬಿನ ಬಾಕಿಯನ್ನು ಪಾವತಿಸಲಾಗಿದೆ. ಪ್ರಸಕ್ತ 2024-25ನೇ ಸಾಲಿನ ಸಕ್ಕರೆ ಋತುವಿನಲ್ಲಿ, 97,270 ಕೋಟಿ ರೂ.ಗಳ ಕಬ್ಬಿನ ಬಾಕಿಯಲ್ಲಿ, 28.04.2025 ರವರೆಗೆ ಸುಮಾರು 85,094 ಕೋಟಿ ರೂ.ಗಳ ಕಬ್ಬಿನ ಬಾಕಿಯನ್ನು ರೈತರಿಗೆ ಪಾವತಿಸಲಾಗಿದೆ. ಹೀಗಾಗಿ, 87% ಕಬ್ಬಿನ ಬಾಕಿಯನ್ನು ಪಾವತಿಸಲಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How India, Australia clinched Uranium deal

Media Coverage

How India, Australia clinched Uranium deal
NM on the go

Nm on the go

Always be the first to hear from the PM. Get the App Now!
...
Prime Minister expresses grief over loss of lives due to boat capsizing in South 24 Parganas district of West Bengal
July 13, 2026
Prime Minister announces ex-gratia

The Prime Minister, Shri Narendra Modi has expressed deep grief over the loss of lives due to the capsizing of a boat in the South 24 Parganas district of West Bengal.

The Prime Minister conveyed his thoughts to the bereaved families in this hour of grief and prayed for the speedy recovery of the injured.

The Prime Minister announced that an ex-gratia of Rs. 2 lakh from the Prime Minister’s National Relief Fund (PMNRF) would be given to the next of kin of each deceased. The injured would be given Rs. 50,000.

The Prime Minister’s Office posted on X;

“The loss of lives due to the capsizing of a boat in the South 24 Parganas district of West Bengal is deeply painful. My thoughts are with the bereaved families in this hour of grief. May the injured recover at the earliest.

An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi”