ಇದು ಕುಟುಂಬದ ಆಧಾರದ ಮೇಲೆ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸರಿಸುಮಾರು 4.5 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.
4.5 ಕೋಟಿ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆಯನ್ನು ಒದಗಿಸಲು ಅನುಮೋದನೆ ನೀಡಿದೆ.

ಇದು ಕುಟುಂಬದ ಆಧಾರದ ಮೇಲೆ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸರಿಸುಮಾರು 4.5 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.

ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆಯೇ ಎಬಿ ಪಿಎಂ-ಜೆಎವೈ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ಹಿರಿಯ ನಾಗರಿಕರಿಗೆ ಎಬಿ ಪಿಎಂ-ಜೆಎವೈ ಅಡಿಯಲ್ಲಿ ಹೊಸ ವಿಶಿಷ್ಟ ಕಾರ್ಡ್ ನೀಡಲಾಗುತ್ತದೆ. ಈಗಾಗಲೇ ಎಬಿ ಪಿಎಂ-ಜೆಎವೈ ವ್ಯಾಪ್ತಿಗೆ ಒಳಪಡುವ ಕುಟುಂಬಗಳಿಗೆ ಸೇರಿದ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷ ರೂ.ವರೆಗೆ ಹೆಚ್ಚುವರಿ ಟಾಪ್-ಅಪ್ ಕವರ್ ಅನ್ನು ಪಡೆಯುತ್ತಾರೆ (ಇದನ್ನು ಅವರು ಕುಟುಂಬದ 70 ವರ್ಷದೊಳಗಿನ ಇತರ ಸದಸ್ಯರೊಂದಿಗೆ ಹಂಚಿಕೊಳ್ಳಬೇಕಾಗಿಲ್ಲ). 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು ಕುಟುಂಬದ ಆಧಾರದ ಮೇಲೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ರಕ್ಷಣೆಯನ್ನು ಪಡೆಯುತ್ತಾರೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿ ಜಿ ಎಚ್ ಎಸ್), ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ಇ ಸಿ ಎಚ್ ಎಸ್), ಆಯುಷ್ಮಾನ್ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿ ಎ ಪಿ ಎಫ್) ನಂತಹ ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳ ಪ್ರಯೋಜನಗಳನ್ನು ಈಗಾಗಲೇ ಪಡೆಯುತ್ತಿರುವ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಅವರ ಅಸ್ತಿತ್ವದಲ್ಲಿರುವ ಯೋಜನೆ ಅಥವಾ ಎಬಿ ಪಿಎಂ-ಜೆಎವೈ ಅನ್ನು ಆರಿಸಿಕೊಳ್ಳಬಹುದು. ಖಾಸಗಿ ಆರೋಗ್ಯ ವಿಮಾ ಪಾಲಿಸಿಗಳು ಅಥವಾ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆಯಡಿಯಲ್ಲಿರುವ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಹಿರಿಯ ನಾಗರಿಕರು ಎಬಿ ಪಿಎಂ-ಜೆಎವೈ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಎಬಿ ಪಿಎಂ-ಜೆಎವೈ ವಿಶ್ವದ ಅತಿದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ಭರವಸೆ ಯೋಜನೆಯಾಗಿದ್ದು, ಇದು 12.34 ಕೋಟಿ ಕುಟುಂಬಗಳ 55 ಕೋಟಿ ವ್ಯಕ್ತಿಗಳಿಗೆ ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ವಯಸ್ಸನ್ನು ಲೆಕ್ಕಿಸದೆ ಅರ್ಹ ಕುಟುಂಬಗಳ ಎಲ್ಲಾ ಸದಸ್ಯರು ಯೋಜನೆಯ ಅಡಿಯಲ್ಲಿ ಬರುತ್ತಾರೆ. ಈ ಯೋಜನೆಯು 49 ಪ್ರತಿಶತ ಮಹಿಳಾ ಫಲಾನುಭವಿಗಳನ್ನು ಒಳಗೊಂಡಂತೆ 7.37 ಕೋಟಿ ಆಸ್ಪತ್ರೆ ದಾಖಲಾತಿಗಳನ್ನು ಒಳಗೊಂಡಿದೆ. ಈ ಯೋಜನೆಯಡಿ ಸಾರ್ವಜನಿಕರು 1 ಲಕ್ಷ ಕೋಟಿ ರೂ.ಗೂ ಅಧಿಕ ಲಾಭ ಪಡೆದಿದ್ದಾರೆ. 

70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯ ವಿಸ್ತರಣೆಯನ್ನು ಈ ಹಿಂದೆ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 2024 ರಲ್ಲಿ ಘೋಷಿಸಿದ್ದರು.

ಎಬಿ ಪಿಎಂ-ಜೆಎವೈ ಯೋಜನೆಯ ಫಲಾನುಭವಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಆರಂಭದಲ್ಲಿ, ಈ ಯೋಜನೆಯು ಭಾರತದ ಜನಸಂಖ್ಯೆಯ ಶೇ.40 ರಷ್ಟನ್ನು ಒಳಗೊಂಡಿರುವ 10.74 ಕೋಟಿ ಬಡ ಮತ್ತು ದುರ್ಬಲ ಕುಟುಂಬಗಳನ್ನು ಒಳಗೊಂಡಿತ್ತು. ನಂತರ, ಭಾರತ ಸರ್ಕಾರವು ಜನವರಿ 2022 ರಲ್ಲಿ ಎಬಿ ಪಿಎಂ-ಜೆಎವೈ ಅಡಿಯಲ್ಲಿ 10.74 ಕೋಟಿಯಿಂದ 12 ಕೋಟಿ ಕುಟುಂಬಗಳಿಗೆ ಫಲಾನುಭವಿಗಳನ್ನು ಪರಿಷ್ಕರಿಸಿತು, 2011 ರ ಜನಸಂಖ್ಯೆಗೆ ಹೋಲಿಸಿದರೆ ಭಾರತದ ಒಂದು ದಶಕದ ಜನಸಂಖ್ಯೆಯ ಬೆಳವಣಿಗೆಯು ಶೇ.11.7 ಆಗಿದೆ. ದೇಶಾದ್ಯಂತ ಕೆಲಸ ಮಾಡುತ್ತಿರುವ 37 ಲಕ್ಷ ಆಶಾ/ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರು ಮತ್ತು ಅವರ ಕುಟುಂಬಗಳಿಗೆ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಯೋಜನೆಯನ್ನು ವಿಸ್ತರಿಸಲಾಗಿತ್ತು. ಎಬಿ ಪಿಎಂ-ಜೆಎವೈ ಈಗ ದೇಶಾದ್ಯಂತ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ರಕ್ಷಣೆಯನ್ನು ಒದಗಿಸುವ ಮೂಲಕ ಅಭಿಯಾನವನ್ನು ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Third India-Nordic Summit: Nordic nations to invest $100 bn in 15 years

Media Coverage

Third India-Nordic Summit: Nordic nations to invest $100 bn in 15 years
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam emphasising that well-ordered standards must guide human conduct
May 20, 2026

Prime Minister Shri Narendra Modi today shared a Sanskrit Subhashitam, noting that righteous conduct is like a lamp that illuminates not only an individual but the entire society. Shri Modi highlighted that adopting this very ideal, the people of our country are engaged in nation-building today with complete restraint, capability, and devotion to duty.

The Prime Minister posted on X:

"श्रेष्ठ आचरण वह दीपक है, जिससे व्यक्ति के साथ-साथ समाज भी आलोकित होता है। इसी आदर्श को अपनाते हुए हमारे देशवासी आज पूरे संयम, सामर्थ्य और कर्तव्यनिष्ठा से राष्ट्र निर्माण में जुटे हुए हैं।

तस्माच्छास्त्रं प्रमाणं ते कार्याकार्यव्यवस्थितौ।
ज्ञात्वा शास्त्रविधानोक्तं कर्म कर्तुमिहार्हसि।।"

The determination of what ought to be done and what ought not to be done should not rest upon subjective opinion or momentary impulse but upon a well-ordered standard grounded in the Śāstra, which imparts direction and discipline to conduct. Therefore, a person ought to act in accordance with that established system of standards, so that one's conduct becomes balanced, validated and meaningful.