ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತದಲ್ಲಿ ವೃತ್ತಿಪರ ಶಿಕ್ಷಣವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ, ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಮೇಲ್ದರ್ಜೆಗೇರಿಸುವ ರಾಷ್ಟ್ರೀಯ ಯೋಜನೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಕೌಶಲಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ.

2024-25 ಮತ್ತು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿರುವ  60,000 ಕೋಟಿ ರೂ.ಗಳ (ಕೇಂದ್ರ ಪಾಲು: 30,000 ಕೋಟಿ ರೂ., ರಾಜ್ಯ ಪಾಲು 20,000 ಕೋಟಿ ರೂ. ಮತ್ತು ಕೈಗಾರಿಕಾ ಪಾಲು 10,000 ಕೋಟಿ ರೂ.ಗಳ) ವೆಚ್ಚದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಮೇಲ್ದರ್ಜೆಗೆ ಏರಿಸುವ ಮತ್ತು ಕೌಶಲ್ಯಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು (ಎನ್‌ಸಿಒಇ) ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು. ಇದರಲ್ಲಿ ಕೇಂದ್ರದ ಪಾಲನ್ನು 50% ವರೆಗೆ  ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಗಳು ಸಮಾನವಾಗಿ ಭರಿಸಲಿವೆ.  

ಈ ಯೋಜನೆಯು 1,000 ಸರ್ಕಾರಿ ಐಟಿಐಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಉದ್ಯಮಕ್ಕೆ ಹೊಂದಿಕೆಯಾಗುವ ಪರಿಷ್ಕೃತ ಟ್ರೇಡ್ ಗಳು (ಕೋರ್ಸ್ ಗಳು) ಮತ್ತು ಐದು (5) ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳ (ಎನ್‌ಎಸ್‌ಟಿಐ) ಸಾಮರ್ಥ್ಯವನ್ನು ಹೆಚ್ಚಿಸಲು ಗಮನ ಹರಿಸುತ್ತದೆ.

ಈ ಯೋಜನೆಯು ಅಸ್ತಿತ್ವದಲ್ಲಿರುವ ಐಟಿಐಗಳನ್ನು ರಾಜ್ಯ ಸರ್ಕಾರಗಳು ಮತ್ತು ಉದ್ಯಮದ ಸಹಯೋಗದೊಂದಿಗೆ ಸರ್ಕಾರಿ ಸ್ವಾಮ್ಯದ, ಉದ್ಯಮ-ನಿರ್ವಹಿಸುವ ಮಹತ್ವಾಕಾಂಕ್ಷೆಯ ಕೌಶಲ್ಯ ಸಂಸ್ಥೆಗಳಾಗಿ ಸ್ಥಾಪಿಸುವ ಗುರಿಯನ್ನು ಹೊಂದಿದೆ. ಐದು ವರ್ಷಗಳ ಅವಧಿಯಲ್ಲಿ, ಕೈಗಾರಿಕೆಗಳ ಮಾನವ ಬಂಡವಾಳದ ಅಗತ್ಯಗಳನ್ನು ಪೂರೈಸುವ ಕೋರ್ಸ್ ಗಳ ಮೂಲಕ 20 ಲಕ್ಷ ಯುವಜನರಿಗೆ ಕೌಶಲ್ಯ ನೀಡಲಾಗುವುದು. ಈ ಯೋಜನೆಯು ಸ್ಥಳೀಯ ಕಾರ್ಮಿಕರ ಪೂರೈಕೆ ಮತ್ತು ಉದ್ಯಮದ ಬೇಡಿಕೆಯ ನಡುವೆ ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಗಮನ ಹರಿಸುತ್ತದೆ, ಆ ಮೂಲಕ ಎಂಎಸ್ಎಂಇಗಳು ಸೇರಿದಂತೆ ಕೈಗಾರಿಕೆಗಳಿಗೆ ಉದ್ಯೋಗ-ಸಿದ್ಧ ಕಾರ್ಮಿಕರು  ಲಭ್ಯವಾಗುವಂತೆ   ಮಾಡುತ್ತದೆ.

ಈ ಹಿಂದೆ ವಿವಿಧ ಯೋಜನೆಗಳ ಅಡಿಯಲ್ಲಿ ಒದಗಿಸಲಾದ ಹಣಕಾಸಿನ ನೆರವು ಐಟಿಐಗಳ ಸಂಪೂರ್ಣ ಉನ್ನತೀಕರಣ ಅಗತ್ಯಗಳನ್ನು ಪೂರೈಸಲು, ವಿಶೇಷವಾಗಿ ಮೂಲಸೌಕರ್ಯ ನಿರ್ವಹಣೆ, ಸಾಮರ್ಥ್ಯ ವಿಸ್ತರಣೆ ಮತ್ತು ಹೆಚ್ಚು ಬಂಡವಾಳ-ಅವಶ್ಯಕವಾದ, ಹೊಸ-ಯುಗದ ಕೋರ್ಸ್ ಗಳನ್ನು ಪರಿಚಯಿಸಲು ಹೆಚ್ಚುತ್ತಿರುವ ಹೂಡಿಕೆ ಅಗತ್ಯಗಳನ್ನು ಪೂರೈಸಲು ಸಾಲುವಂತಿರಲಿಲ್ಲ. ಇದನ್ನು ನಿವಾರಿಸಲು, ಉದ್ದೇಶಿತ ಯೋಜನೆಯಡಿ ಅವಶ್ಯಕತೆ ಆಧಾರಿತ ಹೂಡಿಕೆ ನಿಬಂಧನೆಯನ್ನು ಅಳವಡಿಸಲಾಗಿದೆ, ಪ್ರತಿ ಸಂಸ್ಥೆಯ ನಿರ್ದಿಷ್ಟ ಮೂಲಸೌಕರ್ಯ, ಸಾಮರ್ಥ್ಯ ಮತ್ತು ಕೋರ್ಸ್  ಸಂಬಂಧಿತ ಅವಶ್ಯಕತೆಗಳ ಆಧಾರದ ಮೇಲೆ ನಿಧಿ ಹಂಚಿಕೆಯಲ್ಲಿ ಸ್ಥಿತಿಸ್ಥಾಪಕತ್ವವನ್ನು/ನಮ್ಯತೆಯನ್ನು ಇದು ಅನುಮತಿಸುತ್ತದೆ. ಮೊದಲ ಬಾರಿಗೆ, ಈ ಯೋಜನೆಯು ಐಟಿಐ ಉನ್ನತೀಕರಣದ ಯೋಜನೆ ಮತ್ತು ನಿರ್ವಹಣೆಯಲ್ಲಿ ಆಳವಾದ ಉದ್ಯಮ ಸಂಪರ್ಕವನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಈ ಯೋಜನೆಯು ಫಲಿತಾಂಶ-ಚಾಲಿತ ಅನುಷ್ಠಾನ ಕಾರ್ಯತಂತ್ರಕ್ಕಾಗಿ ಉದ್ಯಮ ನೇತೃತ್ವದ ವಿಶೇಷ ಉದ್ದೇಶದ ವಾಹಕ (ಎಸ್ ಪಿ ವಿ) ಮಾದರಿಯನ್ನು ಅಳವಡಿಸಿಕೊಳ್ಳುತ್ತದೆ, ಇದು ಐಟಿಐ ಪರಿಸರ ವ್ಯವಸ್ಥೆಯನ್ನು ಸುಧಾರಿಸುವ ಹಿಂದಿನ ಪ್ರಯತ್ನಗಳಿಗಿಂತ ಭಿನ್ನವಾಗಿದೆ.

ಈ ಯೋಜನೆಯಡಿ, ಐದು ರಾಷ್ಟ್ರೀಯ ಕೌಶಲ್ಯಗಳಲ್ಲಿ ತರಬೇತುದಾರರ (ToT) ಸುಧಾರಿತ ತರಬೇತಿ ಸೌಲಭ್ಯಗಳಿಗಾಗಿ ಮೂಲಸೌಕರ್ಯ ಉನ್ನತೀಕರಣವನ್ನು ಕೈಗೊಳ್ಳಲಾಗುವುದು. ಆ ತರಬೇತಿ ಸಂಸ್ಥೆಗಳು (ಎನ್‌ಎಸ್‌ಟಿಐ ಗಳು), ಯಾವುವೆಂದರೆ- ಭುವನೇಶ್ವರ, ಚೆನ್ನೈ, ಹೈದರಾಬಾದ್, ಕಾನ್ಪುರ ಮತ್ತು ಲುಧಿಯಾನ. ಹೆಚ್ಚುವರಿಯಾಗಿ, 50,000 ತರಬೇತುದಾರರಿಗೆ ಸೇವಾಪೂರ್ವ ಮತ್ತು ಸೇವಾ ಅವಧಿಯಲ್ಲಿ ತರಬೇತಿ ನೀಡಲಾಗುವುದು.

ಮೂಲಸೌಕರ್ಯ, ಕೋರ್ಸ್ ಪ್ರಸ್ತುತತೆ, ಉದ್ಯೋಗಾರ್ಹತೆ ಮತ್ತು ವೃತ್ತಿಪರ ತರಬೇತಿಯ ಗ್ರಹಿಕೆಯಲ್ಲಿ ದೀರ್ಘಕಾಲದ ಸವಾಲುಗಳನ್ನು ಎದುರಿಸುವ ಮೂಲಕ, ಈ ಯೋಜನೆಯು ನುರಿತ ಮಾನವಶಕ್ತಿಯ ಅಗತ್ಯವನ್ನು ಪೂರೈಸಲು ಐಟಿಐಗಳನ್ನು ಮುಂಚೂಣಿಯಲ್ಲಿರಿಸುವ ಗುರಿಯನ್ನು ಹೊಂದಿದೆ, ಇದು ಜಾಗತಿಕ ಉತ್ಪಾದನೆ ಮತ್ತು ನಾವೀನ್ಯತೆಯ ಶಕ್ತಿ ಕೇಂದ್ರವಾಗುವ ರಾಷ್ಟ್ರದ ಪ್ರಯಾಣಕ್ಕೆ ಅನುಗುಣವಾಗಿದೆ. ಇದು ಉದ್ಯಮದ ಬೇಡಿಕೆಗೆ ಅನುಗುಣವಾಗಿ ನುರಿತ ಕಾರ್ಮಿಕರ ಸಮೂಹವನ್ನು ರಚಿಸುತ್ತದೆ, ಆ ಮೂಲಕ ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಮತ್ತು ನವೀಕರಿಸಬಹುದಾದ ಇಂಧನದಂತಹ ಹೆಚ್ಚಿನ ಬೆಳವಣಿಗೆಯ ಕ್ಷೇತ್ರಗಳಲ್ಲಿ ಕೌಶಲ್ಯದ ಕೊರತೆಯನ್ನು ಪರಿಹರಿಸುತ್ತದೆ. ಒಟ್ಟಾರೆಯಾಗಿ, ಪ್ರಸ್ತಾವಿತ ಯೋಜನೆಯು ಪ್ರಧಾನಮಂತ್ರಿಯವರ ವಿಕಸಿತ ಭಾರತ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ, ಪ್ರಸ್ತುತ ಮತ್ತು ಭವಿಷ್ಯದ ಉದ್ಯಮದ ಅಗತ್ಯಗಳನ್ನು ಪೂರೈಸಲು ಕೌಶಲ್ಯವು ಪ್ರಮುಖ ಶಕ್ತಿಯಾಗಿ ಒದಗಿ ಬರುತ್ತದೆ. 

ಹಿನ್ನೆಲೆ:

2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರದತ್ತ ತನ್ನ ಮಹತ್ವಾಕಾಂಕ್ಷೆಯ ಪ್ರಯಾಣವನ್ನು ಪ್ರಾರಂಭಿಸುತ್ತಿರುವುದರಿಂದ ವೃತ್ತಿಪರ ಶಿಕ್ಷಣ ಮತ್ತು ತರಬೇತಿಯು ಆರ್ಥಿಕ ಬೆಳವಣಿಗೆ ಮತ್ತು ಉತ್ಪಾದಕತೆಯ ಪ್ರಮುಖ ಚಾಲಕ ಶಕ್ತಿಯಾಗಬಹುದು. ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐಗಳು) 1950 ರ ದಶಕದಿಂದ ಭಾರತದಲ್ಲಿ ವೃತ್ತಿಪರ ಶಿಕ್ಷಣ ಮತ್ತು ತರಬೇತಿಯ ಬೆನ್ನೆಲುಬಾಗಿದ್ದು, ರಾಜ್ಯ ಸರ್ಕಾರಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಐಟಿಐ ನೆಟ್ವರ್ಕ್ 2014 ರಿಂದ ಸುಮಾರು 47% ರಷ್ಟು ವಿಸ್ತರಿಸಿದೆ, 14.40 ಲಕ್ಷ ದಾಖಲಾತಿಯೊಂದಿಗೆ 14,615 ಕ್ಕೆ ತಲುಪಿದೆ, ಐಟಿಐಗಳ ಮೂಲಕ ವೃತ್ತಿಪರ ತರಬೇತಿ ಹೆಚ್ಚಿನ  ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲ ಮತ್ತು ಇದರಿಂದಾಗಿ ಅವುಗಳ ಮೂಲಸೌಕರ್ಯಗಳನ್ನು ಸುಧಾರಿಸುವಲ್ಲಿ ಹಾಗು ಅವುಗಳ ಘನತೆಯನ್ನು ಎತ್ತರಿಸುವಲ್ಲಿ ವ್ಯವಸ್ಥಿತ ಮಧ್ಯಸ್ಥಿಕೆಗಳ ಕೊರತೆಯಿಂದ ಬಳಲುತ್ತಿದೆ.

ಈ ಹಿಂದೆ ಐಟಿಐಗಳ ಉನ್ನತೀಕರಣವನ್ನು ಬೆಂಬಲಿಸುವ ಯೋಜನೆಗಳು ಇದ್ದರೂ, ಕೋರ್ಸ್ ವಿಷಯ ಮತ್ತು ಉದ್ಯಮಕ್ಕೆ ಹೊಂದಿಕೆಯಾಗುವ ವಿನ್ಯಾಸದೊಂದಿಗೆ ಐಟಿಐ ಮರು-ಕಲ್ಪನೆಗಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದ ಮೂಲಕ ಕಳೆದ ದಶಕದಿಂದ ಹೆಚ್ಚುತ್ತಿರುವ ಪ್ರಯತ್ನಗಳನ್ನು ಇನ್ನಷ್ಟು ವಿಸ್ತರಿಸಲು ಇದು ಸಕಾಲ ಯಾಕೆಂದರೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಕೌಶಲ್ಯಯುಕ್ತ ಕಾರ್ಮಿಕ ಪಡೆ ಒಂದು ಪ್ರಮುಖ ಸಾಧನ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।