ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಶರತ್ಕಾಲದ ರಬಿ ಋತು 2023-24 (01.10.2023 ರಿಂದ 31.03.2024 ರವರೆಗೆ)ಕ್ಕಾಗಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ  ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ (ಎನ್.ಬಿ.ಎಸ್.) ದರಗಳನ್ನು ನಿಗದಿಪಡಿಸಲು ರಸಗೊಬ್ಬರ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯನ್ನು ಅನುಮೋದಿಸಿದೆ.
 

ವರ್ಷ

ಪ್ರತಿ ಕೆ.ಜಿ.ಗೆ ರೂ.

ರಬಿಐ, 2023-24

(01.10.2023 ರಿಂದ 31.03.2024 ರವರೆಗೆ)

N

P

K

S

47.02

20.82

2.38

1.89


 ಮುಂಬರುವ ಶರತ್ಕಾಲದ ರಬಿ ಋತು 2023-24 ರಲ್ಲಿ, ಎನ್.ಬಿ.ಎಸ್. ಯಲ್ಲಿ ರೂ. 22,303 ಕೋಟಿ ವೆಚ್ಚವನ್ನು ನಿರೀಕ್ಷಿಸಲಾಗಿದೆ.
 
ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಈ ರಸಗೊಬ್ಬರಗಳ ಸುಗಮ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಪಿ & ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಶರತ್ಕಾಲದ ರಬಿ ಋತು 2023-24 (01.10.2023 ರಿಂದ 31.03.2024 ರವರೆಗೆ ಅನ್ವಯಿಸುವಂತೆ) ಕ್ಕಾಗಿ ಅನುಮೋದಿತ ದರಗಳ ಆಧಾರದ ಮೇಲೆ ರೈತರಿಗೆ ಒದಗಿಸಲಾಗುತ್ತದೆ.
 
ಪ್ರಯೋಜನಗಳು:
 
        i. ರೈತರಿಗೆ ಸಬ್ಸಿಡಿ, ಕೈಗೆಟಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಾತ್ರಿಪಡಿಸಲಾಗುವುದು.
       ii ರಸಗೊಬ್ಬರಗಳು ಮತ್ತು ವೆಚ್ಚಗಳ ಒಳಹರಿವಿನ ಅಂತರರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳ ದೃಷ್ಟಿಯಿಂದ ಪಿ&ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ.
 
ಹಿನ್ನೆಲೆ:
 
ರಸಗೊಬ್ಬರ ತಯಾರಕರು/ ಆಮದುದಾರರ ಮೂಲಕ ಕೇಂದ್ರ ಸರ್ಕಾರವು 25 ದರ್ಜೆಯ ಪಿ&ಕೆ ರಸಗೊಬ್ಬರಗಳನ್ನು ರೈತರಿಗೆ ಸಬ್ಸಿಡಿ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ. ಪಿ&ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಎನ್.ಬಿ.ಎಸ್.  ಸ್ಕೀಮ್ 01.04.2010 ರಿಂದ ಅನ್ವಯವಾಗುವಂತೆ ನಿಯಂತ್ರಿಸಿ ವಿತರಿಸಲಾಗುತ್ತದೆ.  ರೈತ ಸ್ನೇಹಿ ವಿಧಾನಕ್ಕೆ ಅನುಗುಣವಾಗಿ, ಕೈಗೆಟುಕುವ ಬೆಲೆಯಲ್ಲಿ ರೈತರಿಗೆ ಪಿ&ಕೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಯೂರಿಯಾ, ಡಿಎಪಿ, ಎಂಒಪಿ ಮತ್ತು ಸಲ್ಫರ್‌ಗಳ ಅಂತರರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳ ದೃಷ್ಟಿಯಿಂದ, ಶರತ್ಕಾಲದ ರಬಿ ಋತು 2023-24 (01.10.2023 ರಿಂದ 31.03.2024 ರವರೆಗೆ) ಕ್ಕಾಗಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ (ಎನ್.ಬಿ.ಎಸ್.)   ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಸಗೊಬ್ಬರ ಕಂಪನಿಗಳಿಗೆ ಅನುಮೋದಿತ ಮತ್ತು ಅಧಿಸೂಚಿತ ದರಗಳ ಪ್ರಕಾರ ಸಬ್ಸಿಡಿಯ ಮೊತ್ತವನ್ನು ಒದಗಿಸಲಾಗುವುದು, ಇದರಿಂದಾಗಿ ಪಿ&ಕೆ ರಸಗೊಬ್ಬರಗಳು ಕೈಗೆಟುಕುವ ಬೆಲೆಯಲ್ಲಿ ರೈತರಿಗೆ ಲಭ್ಯವಾಗುತ್ತದೆ. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Strengthening India’s path to power leadership: How India is energising a new growth story - By Shri Manohar Lal, Union Minister of Power

Media Coverage

Strengthening India’s path to power leadership: How India is energising a new growth story - By Shri Manohar Lal, Union Minister of Power
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಮಾರ್ಚ್ 2026
March 18, 2026

Savings Soar, Inflation Falls, Industry Explodes: PM Modi’s Silent Revolution Towards Viksit Bharat