ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ಸುಮಾರು 20,667 ಕೋಟಿ ರೂಪಾಯಿಗಳಾಗಿದ್ದು, ಇದು 2030-31ರ ವೇಳೆಗೆ ಪೂರ್ಣಗೊಳ್ಳಲಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.

ಈ ಯೋಜನೆಯು ಅಹಮದಾಬಾದ್, ಧೋಲೇರಾ ಎಸ್ ಐ ಆರ್ (SIR), ಮುಂಬರುವ ಧೋಲೇರಾ ವಿಮಾನ ನಿಲ್ದಾಣ ಮತ್ತು ಲೋಥಲ್ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ (NHMC) ನಡುವೆ ವೇಗದ ಸಂಪರ್ಕವನ್ನು ಒದಗಿಸುತ್ತದೆ. ಅಹಮದಾಬಾದ್ ಅನ್ನು ಧೋಲೇರಾದೊಂದಿಗೆ ಸಂಪರ್ಕಿಸುವುದರಿಂದ ಪ್ರಯಾಣಿಕರ ಪ್ರಯಾಣದ ಸಮಯ ಕಡಿಮೆಯಾಗುತ್ತದೆ, ಇದು ಆರಾಮದಾಯಕ ದೈನಂದಿನ ಸಂಚಾರ ಮತ್ತು ಅದೇ ದಿನ ಹಿಂತಿರುಗುವ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ. ಈ ಸೆಮಿ ಹೈ-ಸ್ಪೀಡ್ ರೈಲ್ವೆ ಕೇವಲ ಎರಡು ನಗರಗಳನ್ನು ಹತ್ತಿರ ತರುವುದು ಮಾತ್ರವಲ್ಲದೆ, ನೂರಾರು ಕಿಲೋಮೀಟರ್ ದೂರದಲ್ಲಿ ವಾಸಿಸುವ ಜನರನ್ನು ಪರಸ್ಪರ ಹತ್ತಿರ ತರುತ್ತದೆ.

ಭಾರತದ ಮೊದಲ ಸೆಮಿ ಹೈ-ಸ್ಪೀಡ್ ರೈಲು ಯೋಜನೆಯಾಗಿ, ಇದು ದೇಶಾದ್ಯಂತ ಹಂತಹಂತವಾಗಿ ಸೆಮಿ ಹೈ-ಸ್ಪೀಡ್ ರೈಲು ವಿಸ್ತರಣೆಗೆ ಒಂದು ಮಾದರಿ ಯೋಜನೆಯಾಗಿ ಕಾರ್ಯನಿರ್ವಹಿಸಲಿದೆ.

ಹೊಸ ಮಾರ್ಗದ ಪ್ರಸ್ತಾವನೆಯು ನೇರ ಸಂಪರ್ಕವನ್ನು ನೀಡುತ್ತದೆ ಮತ್ತು ಸಂಚಾರ ಸಾಮರ್ಥ್ಯವನ್ನು ಸುಧಾರಿಸುತ್ತದೆ, ಇದು ಭಾರತೀಯ ರೈಲ್ವೆಗೆ ಹೆಚ್ಚಿನ ದಕ್ಷತೆ ಮತ್ತು ಸೇವೆಯ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ 'ನವ ಭಾರತ'ದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಸಮಗ್ರ ಅಭಿವೃದ್ಧಿಯ ಮೂಲಕ ಜನರನ್ನು "ಆತ್ಮನಿರ್ಭರ"ರನ್ನಾಗಿ ಮಾಡುತ್ತದೆ ಮತ್ತು ಉದ್ಯೋಗ/ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುತ್ತದೆ.

ಈ ಯೋಜನೆಯನ್ನು ಸಮಗ್ರ ಯೋಜನೆ ಮತ್ತು ಮಧ್ಯಸ್ಥಗಾರರ ಸಮಾಲೋಚನೆಯ ಮೂಲಕ ಮಲ್ಟಿ-ಮೋಡಲ್ ಸಂಪರ್ಕ ಮತ್ತು ಲಾಜಿಸ್ಟಿಕ್ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸುವ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾಗಿದೆ. ಈ ಯೋಜನೆಗಳು ಜನರು, ಸರಕುಗಳು ಮತ್ತು ಸೇವೆಗಳ ಸಂಚಾರಕ್ಕೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತವೆ.

ಗುಜರಾತ್ ನ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡಿರುವ ಈ ಯೋಜನೆಯು ಭಾರತೀಯ ರೈಲ್ವೇಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಮೀ ಹೆಚ್ಚಿಸಲಿದೆ. ಪ್ರಸ್ತಾವಿತ ಯೋಜನೆಯು ಸುಮಾರು 5 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸುಮಾರು 284 ಗ್ರಾಮಗಳಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ.

ರೈಲ್ವೆಯು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷತೆಯ ಸಾರಿಗೆ ವಿಧಾನವಾಗಿದ್ದು, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ತೈಲ ಆಮದನ್ನು (0.48 ಕೋಟಿ ಲೀಟರ್) ಕಡಿಮೆ ಮಾಡುತ್ತದೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು (2 ಕೋಟಿ ಕೆಜಿ) ಕಡಿಮೆ ಮಾಡುತ್ತದೆ, ಇದು 10 ಲಕ್ಷ ಮರಗಳನ್ನು ನೆಡುವುದಕ್ಕೆ ಸಮಾನವಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance