ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ನಿನ್ನೆ ಕೇಂದ್ರ ರೈಲ್ವೆ ಸಚಿವಾಲಯದ ಮೂರು (3) ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. (ಅಂದಾಜು) ವೆಚ್ಚದೊಂದಿಗೆ ಅನುಮೋದಿಸಿದೆ. ಈ ಯೋಜನೆಗಳು ಈ ಕೆಳಗಿನಂತಿವೆ:
a. ಕಸಾರಾ - ಮನ್ಮಾಡ್ 3 ನೇ ಮತ್ತು 4 ನೇ ಮಾರ್ಗ
b. ದೆಹಲಿ - ಅಂಬಾಲ 3 ನೇ ಮತ್ತು 4 ನೇ ಮಾರ್ಗ
c. ಬಳ್ಳಾರಿ - ಹೊಸಪೇಟೆ 3 ನೇ ಮತ್ತು 4 ನೇ ಮಾರ್ಗ
ಹೆಚ್ಚಿದ ಮಾರ್ಗ ಸಾಮರ್ಥ್ಯವು ಚಲನಶೀಲತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಇದರ ಪರಿಣಾಮವಾಗಿ ಭಾರತೀಯ ರೈಲ್ವೆಗೆ ಸುಧಾರಿತ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಉಂಟಾಗುತ್ತದೆ. ಈ ಬಹು-ಟ್ರ್ಯಾಕಿಂಗ್ ಪ್ರಸ್ತಾವನೆಗಳು ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಮತ್ತು ದಟ್ಟಣೆಯನ್ನು ನಿವಾರಿಸಲು ಸಿದ್ಧವಾಗಿವೆ. ಈ ಯೋಜನೆಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿವೆ, ಇದು ಪ್ರದೇಶದ ಜನರನ್ನು ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ "ಆತ್ಮನಿರ್ಭರ"ವನ್ನಾಗಿ ಮಾಡುತ್ತದೆ, ಇದು ಆ ಪ್ರದೇಶದಲ್ಲಿ ಉದ್ಯೋಗ/ಸ್ವ-ಉದ್ಯೋಗ ಅವಕಾಶಗಳನ್ನು ಹೆಚ್ಚಿಸುತ್ತದೆ.
ಸಮಗ್ರ ಯೋಜನೆ ಮತ್ತು ಪಾಲುದಾರರ ಸಮಾಲೋಚನೆಗಳ ಮೂಲಕ ಬಹು-ಮಾದರಿ ಸಂಪರ್ಕ ಮತ್ತು ಲಾಜಿಸ್ಟಿಕ್ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಿ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ನಲ್ಲಿ ಯೋಜನೆಗಳನ್ನು ಯೋಜಿಸಲಾಗಿದೆ. ಈ ಯೋಜನೆಗಳು ಜನರು, ಸರಕುಗಳು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.
ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ 12 ಜಿಲ್ಲೆಗಳನ್ನು ಒಳಗೊಂಡ ಮೂರು (3) ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 389 ಕಿ.ಮೀ.ಗಳಷ್ಟು ಹೆಚ್ಚಿಸುತ್ತವೆ.
ಪ್ರಸ್ತಾವಿತ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು ಸುಮಾರು 97 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸುಮಾರು 3,902 ಹಳ್ಳಿಗಳಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ.
ಪ್ರಸ್ತಾವಿತ ಸಾಮರ್ಥ್ಯ ವರ್ಧನೆಯು ಭಾವಲಿ ಅಣೆಕಟ್ಟು, ಶ್ರೀ ಘಟಾನ್ದೇವಿ, ತ್ರಯಂಬಕೇಶ್ವರ ಜ್ಯೋತಿರ್ಲಿಂಗ, ಶ್ರೀ ಮಾತಾ ವೈಷ್ಣೋದೇವಿ ಕತ್ರ/ಶ್ರೀನಗರ, ಮತ್ತು ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಅಭಯಾರಣ್ಯ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ ಮತ್ತು ವಿಜಯ ವಿಠಲ ದೇವಾಲಯ ಮುಂತಾದ ಪ್ರಮುಖ ಆಕರ್ಷಣೆಗಳು ಸೇರಿದಂತೆ ದೇಶಾದ್ಯಂತ ಹಲವಾರು ಪ್ರಮುಖ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕವನ್ನು ಸುಧಾರಿಸುತ್ತದೆ.
ಪ್ರಸ್ತಾವಿತ ಯೋಜನೆಗಳು ಕಲ್ಲಿದ್ದಲು, ಉಕ್ಕು, ಕಬ್ಬಿಣದ ಅದಿರು, ಸಿಮೆಂಟ್, ಸುಣ್ಣದ ಕಲ್ಲು/ಬಾಕ್ಸೈಟ್, ಕಂಟೇನರ್, ಆಹಾರ ಧಾನ್ಯಗಳು, ಸಕ್ಕರೆ, ರಸಗೊಬ್ಬರಗಳು, ಪಿಒಎಲ್ ಮುಂತಾದ ಸರಕುಗಳ ಸಾಗಣೆಗೆ ಅಗತ್ಯವಾದ ಮಾರ್ಗಗಳಾಗಿವೆ. ಸಾಮರ್ಥ್ಯ ವರ್ಧನೆಯ ಕಾರ್ಯಗಳು 96 ಎಂ ಟಿ ಟಿ ಎ (ವರ್ಷಕ್ಕೆ ಮಿಲಿಯನ್ ಟನ್) ಪ್ರಮಾಣದ ಹೆಚ್ಚುವರಿ ಸರಕು ಸಾಗಣೆಗೆ ಕಾರಣವಾಗುತ್ತವೆ. ರೈಲ್ವೆಗಳು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷತೆಯ ಸಾರಿಗೆ ವಿಧಾನವಾಗಿರುವುದರಿಂದ, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದು (22 ಕೋಟಿ ಲೀಟರ್) ಕಡಿಮೆ ಮಾಡಲು ಮತ್ತು 04 (ನಾಲ್ಕು) ಕೋಟಿ ಮರಗಳನ್ನು ನೆಡುವುದಕ್ಕೆ ಸಮಾನವಾದ ಸಿಒ2 ಹೊರಸೂಸುವಿಕೆಯನ್ನು (111 ಕೋಟಿ ಕೆಜಿ) ಕಡಿಮೆ ಮಾಡಲು ಸಹಾಯ ಮಾಡುತ್ತದೆ.
The Cabinet approval for 3 multitracking projects covering various districts across Delhi, Haryana, Maharashtra and Karnataka will strengthen rail infrastructure, reduce logistic cost and create job opportunities for our youth.
— Narendra Modi (@narendramodi) February 14, 2026
https://t.co/JWTsalG2ja


